AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಸಿಎಂ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಬಸ್ ಅಪಘಾತ, ಹತ್ತು ಮಂದಿ ಸಾವು

ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಭಾಗವಹಿಸಿದ್ದ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಬಸ್ ಅಪಘಾತ(Accident)ಕ್ಕೀಡಾಗಿದ್ದು, ಮೂವರು ಮಹಿಳೆಯರು ಸೇರಿ 10 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಚಿಂದ್ವಾರದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ನಾಗ್ಪುರ ರಸ್ತೆಯ ಸಿಮಾರಿಯಾ ಬಳಿ ಬಸ್ ಪಿಕ್-ಅಪ್ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

Madhya Pradesh: ಸಿಎಂ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಬಸ್ ಅಪಘಾತ, ಹತ್ತು ಮಂದಿ ಸಾವು
ಅಪಘಾತImage Credit source: India TV
ನಯನಾ ರಾಜೀವ್
|

Updated on: Mar 27, 2026 | 7:38 AM

Share

ಚಿಂದ್ವಾರ, ಮಾರ್ಚ್​ 27: ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಭಾಗವಹಿಸಿದ್ದ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದ ಬಸ್ ಅಪಘಾತ(Accident)ಕ್ಕೀಡಾಗಿದ್ದು, ಮೂವರು ಮಹಿಳೆಯರು ಸೇರಿ 10 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಚಿಂದ್ವಾರದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ನಾಗ್ಪುರ ರಸ್ತೆಯ ಸಿಮಾರಿಯಾ ಬಳಿ ಬಸ್ ಪಿಕ್-ಅಪ್ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಅಪಘಾತ ಸಂಭವಿಸಿದಾಗ ಬಸ್‌ನಲ್ಲಿ 47 ಪ್ರಯಾಣಿಕರಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಮೃತರಲ್ಲಿ ಆರು ಪುರುಷರು, ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದ್ದಾರೆ. ಘಟನೆಯಲ್ಲಿ 35 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರನ್ನು ಈಗ ಜಿಲ್ಲಾ ಆಸ್ಪತ್ರೆ ಮತ್ತು ಇತರ ವೈದ್ಯಕೀಯ ಸೌಲಭ್ಯಗಳಿಗೆ ಕರೆದೊಯ್ಯಲಾಗಿದೆ. ಆರು ಜನರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ವಿಡಿಯೋ

ಬಸ್‌ನಲ್ಲಿದ್ದ ಬಹುತೇಕ ಎಲ್ಲರೂ ಗಾಯಗೊಂಡರು. ಗಾಯಾಳುಗಳಲ್ಲಿ ಒಬ್ಬರನ್ನು ನಾಗ್ಪುರಕ್ಕೆ ಕಳುಹಿಸಲಾಗಿದೆ. ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಮೋಹನ್ ಯಾದವ್ ಘೋಷಿಸಿದ್ದಾರೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಭೋಪಾಲ್‌ನಲ್ಲಿರುವ ರಾಜ್ಯ ಆರೋಗ್ಯ ಇಲಾಖೆಯಲ್ಲಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.

ಮತ್ತಷ್ಟು ಓದಿ: ಹುಬ್ಬಳ್ಳಿ ಗೋಕುಲ್ ರಸ್ತೆಯ ಬಳಿ ಭೀಕರ ಅಪಘಾತ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು!

ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಯಾದವ್ ಹೇಳಿದರು. ಜಬಲ್ಪುರದ ವೈದ್ಯರ ತಂಡವನ್ನು ಚಿಂದ್ವಾರ ಮತ್ತು ನಾಗ್ಪುರಕ್ಕೆ ಕಳುಹಿಸಲು ಸೂಚಿಸಲಾಗಿದೆ. ಚಿಂದ್ವಾರದ ಉಸ್ತುವಾರಿ ಸಚಿವ ರಾಕೇಶ್ ಸಿಂಗ್ ಅವರಿಗೂ ತಮ್ಮ ವೇಳಾಪಟ್ಟಿಯನ್ನು ಬದಲಾಯಿಸಿಕೊಂಡು ಚಿಂದ್ವಾರ ತಲುಪಲು ಸೂಚಿಸಲಾಗಿದೆ ಎಂದು ಯಾದವ್ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!