AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕೋಟ್​ ಅಗ್ನಿ ಅವಘಡ: ಸುಭಾಷ್ ತ್ರಿವೇದಿ ನೇತೃತ್ವದಲ್ಲಿ ಎಸ್​ಐಟಿ ರಚನೆ

ಗುಜರಾತ್​ನ ರಾಜ್​ಕೋಟ್​ನ ಕಲಾವಾಡ್ ರಸ್ತೆಯಲ್ಲಿರುವ ಟಿಆರ್​ಪಿ ಗೇಮಿಂಗ್​ ಝೋನ್​ನಲ್ಲಿ ಶನಿವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 27 ಮಂದಿ ಸುಟ್ಟು ಕರಕಲಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಭಾಷ್ ತ್ರಿವೇದಿ ನೇತೃತ್ವದಲ್ಲಿ ಎಸ್​ಐಟಿ ರಚಿಸಲಾಗಿದೆ.

ರಾಜ್​ಕೋಟ್​ ಅಗ್ನಿ ಅವಘಡ: ಸುಭಾಷ್ ತ್ರಿವೇದಿ ನೇತೃತ್ವದಲ್ಲಿ ಎಸ್​ಐಟಿ ರಚನೆ
ಅಗ್ನಿ ಅವಘಡ
ನಯನಾ ರಾಜೀವ್
|

Updated on:May 26, 2024 | 9:07 AM

Share

ಗುಜರಾತ್​ನ ರಾಜ್​ಕೋಟ್​ನಲ್ಲಿರು ಗೇಮ್ ಝೋನ್​ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ(Fire Accident)ದಲ್ಲಿ 27 ಮಂದಿ ಸಜೀವದಹನಗೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಿಐಡಿ ಕ್ರೈಂನ ಎಡಿಜಿ ಸುಭಾಷ್ ತ್ರಿವೇದಿ ನೇತೃತ್ವದಲ್ಲಿ ಎಸ್​ಐಟಿ ರಚಿಸಲಾಗಿದೆ.

ಐದು ಸದಸ್ಯರ ತಂಡ ಪ್ರಕರಣದ ತನಿಖೆ ಮಾಡಲಿದೆ. 72 ಗಂಟೆಗಳೊಳಗೆ ಪ್ರಾಥಮಿಕ ವರದಿಯನ್ನು ನೀಡಲಿವೆ. ಅಗ್ನಿ ಅವಘಡಕ್ಕೆ ಕಾರಣವೇನು?, ಗೇಮಿಂಗ್​ ಝೋನ್​ಗೆ ಅನುಮತಿ ನೀಡುವ ಸಂದರ್ಭದಲ್ಲಿ ಈ ಕೆಲವು ವಿಷಯಗಳ ಬಗ್ಗೆ ಗಮನಹರಿಸಲಾಗಿತ್ತೆ?, ಗೇಮಿಂಗ್ ಝೋನ್​ ನಿರ್ಮಾಣಕ್ಕೆ ಅನುಮತಿ ಪಡೆದಿದ್ದರೇ? ಎಂಬೆಲ್ಲಾ ವಿಚಾರಗಳ ಕುರಿತು ತನಿಖೆ ನಡೆಸಲಿದೆ.

ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕ ಎದುರಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಗೇಮ್ ಝೋನ್ ಸುಟ್ಟು ಕರಕಲಾಗಿದೆ. ಸುದ್ದಿ ತಿಳಿದ ತಕ್ಷಣ ಎಂಟು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ಬೆಂಕಿಯನ್ನು ನಂದಿಸಲು ಸಾಕಷ್ಟು ಕಸರತ್ತು ನಡೆಸಬೇಕಾಯಿತು.

ಶನಿವಾರ ಸಂಜೆ ಟಿಆರ್ ಪಿ ಗೇಮಿಂಗ್ ವಲಯದಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಇಡೀ ಪ್ರದೇಶಕ್ಕೆ ಆವರಿಸಿ ಧಗಧಗನೆ ಹೊತ್ತಿ ಉರಿಯಿತು. ಈ ಕುರಿತು ರಾಜ್ ಕೋಟ್ ನ ಪೊಲೀಸ್ ಆಯಕ್ತ ಭಾರ್ಗವ ಅಗ್ನಿ ಅವಘಡದ ಬಗ್ಗೆ ವಿವರ ನೀಡಿ, ಇದುವರೆಗೆ 35 ಮೃತದೇಹಗಳನ್ನು ವಶಪಡಿಸಿ ಕೊಳ್ಳಲಾಗಿದೆ. ಪರಿಹಾರ ಕಾರ್ಯ ನಡೆಯುತ್ತಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಮತ್ತಷ್ಟು ಓದಿ: ಗುಜರಾತ್‌ನ ರಾಜ್‌ಕೋಟ್‌ನ ಗೇಮಿಂಗ್ ಝೋನ್‌ನಲ್ಲಿ ಬೆಂಕಿ ಅವಘಡ; 24 ಮಂದಿ ಸಾವು

ಬೆಂಕಿ ಎಷ್ಟು ತೀವ್ರತೆ ಎಷ್ಟಿತ್ತು ಎಂದರೆ ಅದರ ಹೊಗೆ 3 ಕಿಲೋಮೀಟರ್ ದೂರಕ್ಕೂ ಗೋಚರಿಸುತ್ತಿತ್ತು, ಗೇಮಿಂಗ್ ವಲಯದಲ್ಲಿ ಸಿಕ್ಕಿಹಾಕೊಂಡವರ ಚೀರಾಟ, ಆಕ್ರಂದನ ಹೇಳತೀರದಾಗಿತ್ತು. ಕೆಲವರು‌ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಆದರೆ, ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕಟ್ಟಡ ಕುಸಿದಿರುವುದರಿಂದ ಪರಿಹಾರ ಕಾರ್ಯದಲ್ಲಿ ತೊಂದರೆಯಾಗುತ್ತಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

ಮಾಲೀಕನ ಬಂಧನ ಗೇಮ್ ಝೋನ್ ಮಾಲೀಕ ಯುವರಾಜ್ ಸಿಂಗ್ ಸೋಲಂಕಿ ಅವರನ್ನು ರಾಜ್‌ಕೋಟ್ ಪೊಲೀಸರು ಬಂಧಿಸಿದ್ದಾರೆ. ಗೇಮ್ ಝೋನ್‌ನ ವ್ಯವಸ್ಥಾಪಕನಿಗಾಗಿ ಪೊಲೀಸರು ಶೋಧ‌ ಕಾರ್ಯಕೈಗೊಂಡಿದ್ದಾರೆ.

ಈ ಆಟದ ವಲಯದ ಒಂದು ಭಾಗದಲ್ಲಿ ನವೀಕರಣ ಕಾರ್ಯ ನಡೆಯುತ್ತಿತ್ತು . ಈ ವೇಳೆ ಎರಡು ದಿನಗಳ ಹಿಂದೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗೇಮ್ ಝೋನ್ ಬಂದ್ ಮಾಡಲಾಗಿತ್ತು. ಈ ಘಟನೆ‌ ಸಂಭವಿಸಿ, ಒಂದು ದಿನದ ನಂತರ ಆಟದ ವಲಯವನ್ನು ಪುನಃ ತೆರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:09 am, Sun, 26 May 24

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ