AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident News: ಪಿಕ್​​ಅಪ್ ವ್ಯಾನ್ ಹಾಗೂ ಲಾರಿ ನಡುವೆ ಡಿಕ್ಕಿ 7 ಮಕ್ಕಳು ಸೇರಿ 10 ಮಂದಿ ಸಾವು

ಭಕ್ತರನ್ನು ಕರೆದೊಯ್ಯುತ್ತಿದ್ದ ಪಿಕ್​​ಅಪ್ ವ್ಯಾನ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 7 ಮಕ್ಕಳು ಸೇರಿ 10 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದೌಸಾದಲ್ಲಿ ನಡೆದಿದೆ. ಖತುಶ್ಯಾಮ್ಜಿ ದೇವಸ್ಥಾನಕ್ಕೆ ಭೇಟಿ ನೀಡಿ ಮನೆಗೆ ಹಿಂದಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಧಿಕಾರಿಗಳ ಪ್ರಕಾರ, ಪಿಕಪ್ ವ್ಯಾನ್ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದು, ಈ ಘಟನೆಯನ್ನು ಇನ್ನೂ ತನಿಖೆ ನಡೆಸಲಾಗುತ್ತಿದೆ.ಸುಮಾರು 7-8 ಜನರನ್ನು ಜೈಪುರದ ಎಸ್​ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Accident News: ಪಿಕ್​​ಅಪ್ ವ್ಯಾನ್ ಹಾಗೂ ಲಾರಿ ನಡುವೆ ಡಿಕ್ಕಿ 7 ಮಕ್ಕಳು ಸೇರಿ 10 ಮಂದಿ ಸಾವು
ಅಪಘಾತ
ನಯನಾ ರಾಜೀವ್
|

Updated on: Aug 13, 2025 | 7:46 AM

Share

ದೌಸಾ, ಆಗಸ್ಟ್​ 13: ಭಕ್ತರನ್ನು ಕರೆದೊಯ್ಯುತ್ತಿದ್ದ ಪಿಕ್​​ಅಪ್ ವ್ಯಾನ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 7 ಮಕ್ಕಳು ಸೇರಿ 10 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದೌಸಾದಲ್ಲಿ ನಡೆದಿದೆ. ಖತುಶ್ಯಾಮ್​ ದೇವಸ್ಥಾನಕ್ಕೆ ಭೇಟಿ ನೀಡಿ ಮನೆಗೆ ಹಿಂದಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ, ಪಿಕಪ್ ವ್ಯಾನ್ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದು, ಈ ಘಟನೆಯ ಬಗ್ಗೆ ಮತ್ತಷ್ಟು ತನಿಖೆ ನಡೆಸಲಾಗುತ್ತಿದೆ.

ಸುಮಾರು 7-8 ಜನರನ್ನು ಜೈಪುರದ ಎಸ್​ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದೌಸಾ ಜಿಲ್ಲಾಧಿಕಾರಿ ದೇವೇಂದ್ರ ಕುಮಾರ್, ಆರಂಭಿಕ ವರದಿಗಳ ಪ್ರಕಾರ, ಬಾಪಿ ಬಳಿ ಸಂಭವಿಸಿದ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. 9 ಜನರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಒಂದು ದಿನದ ಹಿಂದಷ್ಟೇ ಪುಣೆಯಲ್ಲೂ ಇಂಥದ್ದೇ ಅಪಘಾತ ಸಂಭವಿಸಿತ್ತು. ಪುಣೆಯಿಂದ ಸುಮಾರು 65 ಕಿ.ಮೀ ದೂರದಲ್ಲಿರುವ ಖೇಡ್ ತಾಲ್ಲೂಕಿನ ಪೈಟ್ ಬಳಿಯ ಕುಂದೇಶ್ವರ ದೇವಸ್ಥಾನಕ್ಕೆ ಪಿಕ್-ಅಪ್ ಟ್ರಕ್ ಮಧ್ಯಾಹ್ನ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಹತ್ತು ಮಹಿಳಾ ಭಕ್ತರು ಸಾವನ್ನಪ್ಪಿದ್ದರು. 27 ಮಂದಿ ಗಾಯಗೊಂಡಿದ್ದರು.

ಪೈಟ್ ಬಳಿಯ ಪಾಪಲ್ವಾಡಿಯಲ್ಲಿ 35 ಕ್ಕೂ ಹೆಚ್ಚು ಭಕ್ತರು ಪಿಕ್-ಅಪ್ ಟ್ರಕ್‌ನ ಹಿಂಭಾಗದ ಕಾರ್ಗೋ ಬೆಡ್ ಅನ್ನು ಹತ್ತಿದ್ದರು. ಕಡಿದಾದ ಇಳಿಜಾರಿನಲ್ಲಿ ವಾಹನವು ಹಿಂದಕ್ಕೆ ಜಾರಿ 30 ಅಡಿ ಕಂದಕಕ್ಕೆ ಬಿದ್ದಿತ್ತು. ಮೃತರನ್ನು ಮಂದಾಬಾಯಿ ದಾರೆಕರ್ (50), ಸನಾಬಾಯಿ ದಾರೆಕರ್ (50), ಮೀರಾಬಾಯಿ ಚೋರ್ಗೆ (50), ಶೋಭಾ ಪಾಪಲ್ (33), ಸುಮನ್ ಪಾಪಲ್ (50), ಶಕುಬಾಯಿ ಚೋರ್ಗೆ (50), ಶಾರದ ಚೋರ್ಗೆ (45), ಬಯಾದಬಾಯಿ ಚೋರ್ಗೆ (45), ಪಾರ್ವತಿಬಾಯಿ ಪಾಪಲ್ (56) ಮತ್ತು ಫಾಸಪ್ಪಾಲ್ (16) ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?