ಗ್ವಾಲಿಯರ್​ನಲ್ಲಿ ರೈಲು ಹಳಿ ತಪ್ಪಿಸುವ ಯತ್ನ, ಹಳಿ ಮೇಲೆ ಕಬ್ಬಿಣದ ಚೌಕಟ್ಟು ಪತ್ತೆ

ರೈಲ್ವೆ ಹಳಿ ಮೇಲೆ ಕಬ್ಬಿಣದ ರಾಡ್ ಇರಿಸಿ ರೈಲು ಹಳಿ ತಪ್ಪಿಸುವ ಯತ್ನ ಗ್ವಾಲಿಯರ್​ನಲ್ಲಿ ನಡೆದಿದೆ. ಗೂಡ್ಸ್​ ರೈಲಿನ ಲೋಕೊಪೈಲಟ್ ಹಳಿಗಳ ಮೇಲೆ ಯಾವುದೋ ವಸ್ತು ಇರುವುದನ್ನು ಕಂಡ ಕಾರಣ ಕೂಡಲೇ ರೈಲು ನಿಲ್ಲಿಸಿದ್ದಾರೆ. ಉತ್ತರ ಪ್ರದೇಶಕ್ಕೆ ಹೋಗುತ್ತಿದ್ದ ರೈಲಿನ ಚಾಲಕನಿಗೆ ಕಬ್ಬಿಣದ ಚೌಕಟ್ಟನ್ನು ಸಮಯಕ್ಕೆ ಸರಿಯಾಗಿ ಕಾಣಿಸಿದ ಕಾರಣ, ಅಪಘಾತವನ್ನು ತಪ್ಪಿಸಿದ್ದಾರೆ.

ಗ್ವಾಲಿಯರ್​ನಲ್ಲಿ ರೈಲು ಹಳಿ ತಪ್ಪಿಸುವ ಯತ್ನ, ಹಳಿ ಮೇಲೆ ಕಬ್ಬಿಣದ ಚೌಕಟ್ಟು ಪತ್ತೆ
ರೈಲುImage Credit source: India TV
Follow us
|

Updated on: Oct 09, 2024 | 9:10 AM

ರೈಲ್ವೆ ಹಳಿ ಮೇಲೆ ಕಬ್ಬಿಣದ ರಾಡ್ ಇರಿಸಿ ರೈಲು ಹಳಿ ತಪ್ಪಿಸುವ ಯತ್ನ ಗ್ವಾಲಿಯರ್​ನಲ್ಲಿ ನಡೆದಿದೆ. ಗೂಡ್ಸ್​ ರೈಲಿನ ಲೋಕೊಪೈಲಟ್ ಹಳಿಗಳ ಮೇಲೆ ಯಾವುದೋ ವಸ್ತು ಇರುವುದನ್ನು ಕಂಡ ಕಾರಣ ಕೂಡಲೇ ರೈಲು ನಿಲ್ಲಿಸಿದ್ದಾರೆ. ಉತ್ತರ ಪ್ರದೇಶಕ್ಕೆ ಹೋಗುತ್ತಿದ್ದ ರೈಲಿನ ಚಾಲಕನಿಗೆ ಕಬ್ಬಿಣದ ಚೌಕಟ್ಟನ್ನು ಸಮಯಕ್ಕೆ ಸರಿಯಾಗಿ ಕಾಣಿಸಿದ ಕಾರಣ, ಅಪಘಾತವನ್ನು ತಪ್ಪಿಸಿದ್ದಾರೆ.

ಝಾನ್ಸಿಯಿಂದ ಆಗ್ರಾಕ್ಕೆ ಹೋಗುತ್ತಿದ್ದ ಗೂಡ್ಸ್ ರೈಲಿನ ಚಾಲಕ ಬಿರ್ಲಾ ನಗರ ನಿಲ್ದಾಣದ ಬಳಿ ಕಬ್ಬಿಣದ ಚೌಕಟ್ಟನ್ನು ನೋಡಿ ತಕ್ಷಣವೇ ರೈಲ್ವೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಅವರು ಹೇಳಿದರು. ಅಕ್ಟೋಬರ್ 6 ರಂದು, ರಘುರಾಜ್ ಸಿಂಗ್ ನಿಲ್ದಾಣದ ಬಳಿ ರೈಲು ಹಳಿಗಳ ಮೇಲೆ ಮಣ್ಣಿನ ರಾಶಿಯನ್ನು ಸುರಿಯುವುದನ್ನು ಲೋಕೋ ಪೈಲಟ್ ನೋಡಿದ ನಂತರ ಪ್ಯಾಸೆಂಜರ್ ರೈಲನ್ನು ಸ್ವಲ್ಪ ಸಮಯದವರೆಗೆ ನಿಲ್ಲಿಸಲಾಯಿತು.

ಹಳಿಯಿಂದ ಮಣ್ಣನ್ನು ತೆಗೆಯಲಾಗಿದ್ದು, ಮಾರ್ಗದಲ್ಲಿ ರೈಲು ಸಂಚಾರವನ್ನು ಪುನರಾರಂಭಿಸಲಾಗಿದೆ ಎಂದು ಎಸ್‌ಎಚ್‌ಒ ದೇವೇಂದ್ರ ಭಡೋರಿಯಾ ತಿಳಿಸಿದ್ದಾರೆ. ರಾತ್ರಿ ವೇಳೆ ಮಣ್ಣು ಸಾಗಿಸಲು ಡಂಪರ್‌ಗಳನ್ನು ಬಳಸಿ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಭಾನುವಾರ ಸಂಜೆ ಮಣ್ಣನ್ನು ಸಾಗಿಸುತ್ತಿದ್ದ ಡಂಪರ್ ಚಾಲಕನೊಬ್ಬ ಲೋಡ್ ಅನ್ನು ರೈಲ್ವೆ ಹಳಿ ಮೇಲೆ ಎಸೆದು ಪರಾರಿಯಾಗಿದ್ದಾನೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಕಾನ್ಪುರದಲ್ಲಿ ರೈಲು ಹಳಿ ತಪ್ಪಿಸುವ ಯತ್ನ, ಹಳಿಯಲ್ಲಿ ಸಿಲಿಂಡರ್​ ಪತ್ತೆ

ಜೂನ್ 2023 ರಿಂದ ಇಂದಿನವರೆಗೆ, ರೈಲ್ವೆ ಹಳಿಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳು, ಬೈಸಿಕಲ್‌ಗಳು, ಕಬ್ಬಿಣದ ರಾಡ್‌ಗಳು ಮತ್ತು ಸಿಮೆಂಟ್ ಬ್ಲಾಕ್‌ಗಳಂತಹ ವಸ್ತುಗಳು ಪತ್ತೆಯಾಗಿರುವ ಇಂತಹ 24 ಘಟನೆಗಳು ನಡೆದಿವೆ. ಭಾರತೀಯ ರೈಲ್ವೇಯ ಪ್ರಕಾರ, ವರದಿಯಾದ 18 ಘಟನೆಗಳಲ್ಲಿ 15 ಆಗಸ್ಟ್‌ನಲ್ಲಿ ನಡೆದಿದ್ದರೆ, ನಾಲ್ಕು ಸೆಪ್ಟೆಂಬರ್‌ನಲ್ಲಿ ನಡೆದಿದ್ದು, ಕಾನ್ಪುರದಲ್ಲಿ ಇತ್ತೀಚಿನ ಹಳಿತಪ್ಪಿಸುವ ಪ್ರಯತ್ನವೂ ಸೇರಿದೆ.

ರಾಜಸ್ಥಾನದ ಅಜ್ಮೀರ್ ನಲ್ಲಿ ದುಷ್ಕರ್ಮಿಗಳು ರೈಲು ಹಳಿಗಳ ಮೇಲೆ ಸಿಮೆಂಟ್‌ ಬ್ಲಾಕ್‌ಗಳನ್ನು ಇರಿಸಿ, ರೈಲು ಹಳಿ ತಪ್ಪಿಸುವ ಯತ್ನ ನಡೆಸಿದ್ದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಅಜ್ಮೀರ್​ನ ಪಶ್ಚಿಮ ಮೀಸಲು ಸರಕು ಸಾಗಣೆ ಕಾರಿಡಾರ್‌ನ ರೈಲು ಹಳಿಗಳ ಮೇಲೆ ದೊಡ್ಡ ಗಾತ್ರದ ಎರಡು ಸಿಮೆಂಟ್‌ ಬ್ಲಾಕ್‌ಗಳು ಪತ್ತೆಯಾಗಿದ್ದವು. ಇದನ್ನು ಮೊದಲೇ ಇಲಾಖೆ ಸಿಬಂದಿ ಗಮನಿಸಿ, ರೈಲು ಹಳಿಗಳಿಂದ ತೆರವುಗೊಳಿಸಿದ್ದರಿಂದಾಗಿ ಇಲ್ಲೂ ಭಾರೀ ಅಪಘಾತವೊಂದು ತಪ್ಪಿತ್ತು.

ಉತ್ತರಾಖಂಡದಲ್ಲಿ ಕಿಡಿಗೇಡಿಗಳು ರೈಲನ್ನು ಹಳಿ ತಪ್ಪಿಸುವ ಯತ್ನ ಮಾಡಿದ್ದಾರೆ. ರೈಲ್ವೆ ಹಳಿ ಮೇಲೆ ಕಬ್ಬಿಣದ ಕಂಬ ಇರಿಸಿದ್ದರು. ಉತ್ತರ ಪ್ರದೇಶ ಉತ್ತರಾಖಂಡ ಗಡಿಯಲ್ಲಿರುವ ಬಿಲಾಸ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಂಪುರ ಗ್ರಾಮದ ರೈಲ್ವೆ ಹಳಿ ಮೇಲೆ ಕಬ್ಬಿಣದ ಕಂಬವೊಂದು ಪತ್ತೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಯಾವ ಸೀಮೆಯ ಕ್ಯಾಪ್ಟನ್ ನೀವು?’; ಹಂಸಾ ವಿರುದ್ಧ ಸಿಡಿದೆದ್ದ ಚೈತ್ರಾ
‘ಯಾವ ಸೀಮೆಯ ಕ್ಯಾಪ್ಟನ್ ನೀವು?’; ಹಂಸಾ ವಿರುದ್ಧ ಸಿಡಿದೆದ್ದ ಚೈತ್ರಾ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!