AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದಲ್ಲಿ 35 ಕಿಮೀ ದೂರ ಹಿಮ್ಮುಖವಾಗಿ ಚಲಿಸಿದ ರೈಲು; ಅದರ ವೇಗಕ್ಕೆ ಪ್ರಯಾಣಿಕರು ಕಂಗಾಲು !

ಖಟಿಮಾ ಎಂಬಲ್ಲಿ ರೈಲು ನಿಂತ ಬಳಿಕ, ಪ್ರಯಾಣಿಕರನ್ನು ತನಕ್​ಪುರಕ್ಕೆ ಬಸ್​​ ಮೂಲಕ ಕಳಿಸಲಾಗಿದೆ. ರೈಲು ಹಿಮ್ಮುಖವಾಗಿ ಚಲಿಸಿದೆ ಹೊರತು ಯಾರಿಗೂ ಯಾವುದೇ ಅಪಾಯವಾಗಲಿಲ್ಲ.

ಉತ್ತರಾಖಂಡದಲ್ಲಿ 35 ಕಿಮೀ ದೂರ ಹಿಮ್ಮುಖವಾಗಿ ಚಲಿಸಿದ ರೈಲು; ಅದರ ವೇಗಕ್ಕೆ ಪ್ರಯಾಣಿಕರು ಕಂಗಾಲು !
ಹಿಮ್ಮುಖವಾಗಿ ಚಲಿಸಿದ ರೈಲು
Lakshmi Hegde
| Edited By: |

Updated on:Mar 18, 2021 | 2:53 PM

Share

ರೈಲು ಹಿಮ್ಮುಖವಾಗಿ ಚಲಿಸಿದ್ದನ್ನು ನೀವೆಲ್ಲಾದರೂ ನೋಡಿದ್ದೀರಾ? ಅರೆ, ಟ್ರೇನ್​ ಹಿಮ್ಮುಖವಾಗಿ ಚಲಿಸಲು ಹೇಗೆ ಸಾಧ್ಯ ಎಂದು ನೀವು ಯೋಚಿಸುತ್ತಿದ್ದರೆ.. ವೈರಲ್​ ಆಗಿರುವ ಈ ವಿಡಿಯೋವನ್ನು ನೋಡಲೇಬೇಕು. ದೆಹಲಿಯಿಂದ ಉತ್ತರಾಖಂಡಕ್ಕೆ ಸಂಚರಿಸುತ್ತಿದ್ದ, ಪ್ರಯಾಣಿಕರಿದ್ದ ರೈಲು 35 ಕಿ.ಮೀ.ದೂರ ಹಿಮ್ಮುಖವಾಗಿ ಚಲಿಸಿದೆ. ಹೀಗೆ ಅಷ್ಟು ದೂರ ಹಿಮ್ಮುಖವಾಗಿಯೇ, ವೇಗವಾಗಿ ಚಲಿಸಿದ ರೈಲು ಕೊನೆಗೆ ಉತ್ತರಾಖಂಡ ಖಟಿಮಾ ಎಂಬಲ್ಲಿ ನಿಂತಿದೆ.

ಪೂರ್ಣಗಿರಿ ಜನಶತಾಬ್ದಿ ಎಕ್ಸ್​​ಪ್ರೆಸ್​ ರೈಲು ದೆಹಲಿಯಿಂದ ಉತ್ತರಾಖಂಡ್​ದ ತನಕ್​ಪುರಕ್ಕೆ ತೆರಳುತ್ತಿತ್ತು. ಆಗ ರೈಲ್ವೆ ಹಳಿಯ ಮೇಲೆ ಅಡ್ಡಾಡುತ್ತಿದ್ದ ಪ್ರಾಣಿಯನ್ನು ಕಂಡ ರೈಲು ಚಾಲಕ, ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಬ್ರೇಕ್​ ಹಾಕಿದ್ದಾರೆ. ಇದಾದ ಬಳಿಕ ಚಾಲಕ ಲೊಕೊಮೋಟಿವ್​ ಮೇಲೆ ಸಂಪೂರ್ಣ ನಿಯಂತ್ರಣ ಕಳೆದುಕೊಂಡಿದ್ದಾರೆ. ಹಾಗಾಗಿ ರೈಲು ಒಂದೇ ಸಮ ಹಿಮ್ಮುಖವಾಗಿ ಚಲಿಸಿದೆ. ಅದರಲ್ಲಿದ್ದ ಪ್ರಯಾಣಿಕರಂತೂ ತುಂಬ ಕಂಗಾಲಾಗಿದ್ದರು.

ಖಟಿಮಾ ಎಂಬಲ್ಲಿ ರೈಲು ನಿಂತ ಬಳಿಕ, ಪ್ರಯಾಣಿಕರನ್ನು ತನಕ್​ಪುರಕ್ಕೆ ಬಸ್​​ ಮೂಲಕ ಕಳಿಸಲಾಗಿದೆ. ರೈಲು ಹಿಮ್ಮುಖವಾಗಿ ಚಲಿಸಿದೆ ಹೊರತು ಯಾರಿಗೂ ಯಾವುದೇ ಅಪಾಯವಾಗಲಿಲ್ಲ. ಲೋಕೋ ಪೈಲಟ್​ ಮತ್ತು ಗಾರ್ಡ್​​ನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಈಶಾನ್ಯ ರೈಲ್ವೆ ಆಡಳಿತ ತಿಳಿಸಿದೆ.

Published On - 2:32 pm, Thu, 18 March 21

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ