AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದಲ್ಲಿ 35 ಕಿಮೀ ದೂರ ಹಿಮ್ಮುಖವಾಗಿ ಚಲಿಸಿದ ರೈಲು; ಅದರ ವೇಗಕ್ಕೆ ಪ್ರಯಾಣಿಕರು ಕಂಗಾಲು !

ಖಟಿಮಾ ಎಂಬಲ್ಲಿ ರೈಲು ನಿಂತ ಬಳಿಕ, ಪ್ರಯಾಣಿಕರನ್ನು ತನಕ್​ಪುರಕ್ಕೆ ಬಸ್​​ ಮೂಲಕ ಕಳಿಸಲಾಗಿದೆ. ರೈಲು ಹಿಮ್ಮುಖವಾಗಿ ಚಲಿಸಿದೆ ಹೊರತು ಯಾರಿಗೂ ಯಾವುದೇ ಅಪಾಯವಾಗಲಿಲ್ಲ.

ಉತ್ತರಾಖಂಡದಲ್ಲಿ 35 ಕಿಮೀ ದೂರ ಹಿಮ್ಮುಖವಾಗಿ ಚಲಿಸಿದ ರೈಲು; ಅದರ ವೇಗಕ್ಕೆ ಪ್ರಯಾಣಿಕರು ಕಂಗಾಲು !
ಹಿಮ್ಮುಖವಾಗಿ ಚಲಿಸಿದ ರೈಲು
Lakshmi Hegde
| Edited By: |

Updated on:Mar 18, 2021 | 2:53 PM

Share

ರೈಲು ಹಿಮ್ಮುಖವಾಗಿ ಚಲಿಸಿದ್ದನ್ನು ನೀವೆಲ್ಲಾದರೂ ನೋಡಿದ್ದೀರಾ? ಅರೆ, ಟ್ರೇನ್​ ಹಿಮ್ಮುಖವಾಗಿ ಚಲಿಸಲು ಹೇಗೆ ಸಾಧ್ಯ ಎಂದು ನೀವು ಯೋಚಿಸುತ್ತಿದ್ದರೆ.. ವೈರಲ್​ ಆಗಿರುವ ಈ ವಿಡಿಯೋವನ್ನು ನೋಡಲೇಬೇಕು. ದೆಹಲಿಯಿಂದ ಉತ್ತರಾಖಂಡಕ್ಕೆ ಸಂಚರಿಸುತ್ತಿದ್ದ, ಪ್ರಯಾಣಿಕರಿದ್ದ ರೈಲು 35 ಕಿ.ಮೀ.ದೂರ ಹಿಮ್ಮುಖವಾಗಿ ಚಲಿಸಿದೆ. ಹೀಗೆ ಅಷ್ಟು ದೂರ ಹಿಮ್ಮುಖವಾಗಿಯೇ, ವೇಗವಾಗಿ ಚಲಿಸಿದ ರೈಲು ಕೊನೆಗೆ ಉತ್ತರಾಖಂಡ ಖಟಿಮಾ ಎಂಬಲ್ಲಿ ನಿಂತಿದೆ.

ಪೂರ್ಣಗಿರಿ ಜನಶತಾಬ್ದಿ ಎಕ್ಸ್​​ಪ್ರೆಸ್​ ರೈಲು ದೆಹಲಿಯಿಂದ ಉತ್ತರಾಖಂಡ್​ದ ತನಕ್​ಪುರಕ್ಕೆ ತೆರಳುತ್ತಿತ್ತು. ಆಗ ರೈಲ್ವೆ ಹಳಿಯ ಮೇಲೆ ಅಡ್ಡಾಡುತ್ತಿದ್ದ ಪ್ರಾಣಿಯನ್ನು ಕಂಡ ರೈಲು ಚಾಲಕ, ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಬ್ರೇಕ್​ ಹಾಕಿದ್ದಾರೆ. ಇದಾದ ಬಳಿಕ ಚಾಲಕ ಲೊಕೊಮೋಟಿವ್​ ಮೇಲೆ ಸಂಪೂರ್ಣ ನಿಯಂತ್ರಣ ಕಳೆದುಕೊಂಡಿದ್ದಾರೆ. ಹಾಗಾಗಿ ರೈಲು ಒಂದೇ ಸಮ ಹಿಮ್ಮುಖವಾಗಿ ಚಲಿಸಿದೆ. ಅದರಲ್ಲಿದ್ದ ಪ್ರಯಾಣಿಕರಂತೂ ತುಂಬ ಕಂಗಾಲಾಗಿದ್ದರು.

ಖಟಿಮಾ ಎಂಬಲ್ಲಿ ರೈಲು ನಿಂತ ಬಳಿಕ, ಪ್ರಯಾಣಿಕರನ್ನು ತನಕ್​ಪುರಕ್ಕೆ ಬಸ್​​ ಮೂಲಕ ಕಳಿಸಲಾಗಿದೆ. ರೈಲು ಹಿಮ್ಮುಖವಾಗಿ ಚಲಿಸಿದೆ ಹೊರತು ಯಾರಿಗೂ ಯಾವುದೇ ಅಪಾಯವಾಗಲಿಲ್ಲ. ಲೋಕೋ ಪೈಲಟ್​ ಮತ್ತು ಗಾರ್ಡ್​​ನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಈಶಾನ್ಯ ರೈಲ್ವೆ ಆಡಳಿತ ತಿಳಿಸಿದೆ.

Published On - 2:32 pm, Thu, 18 March 21

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?