AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದಲ್ಲಿ 35 ಕಿಮೀ ದೂರ ಹಿಮ್ಮುಖವಾಗಿ ಚಲಿಸಿದ ರೈಲು; ಅದರ ವೇಗಕ್ಕೆ ಪ್ರಯಾಣಿಕರು ಕಂಗಾಲು !

ಖಟಿಮಾ ಎಂಬಲ್ಲಿ ರೈಲು ನಿಂತ ಬಳಿಕ, ಪ್ರಯಾಣಿಕರನ್ನು ತನಕ್​ಪುರಕ್ಕೆ ಬಸ್​​ ಮೂಲಕ ಕಳಿಸಲಾಗಿದೆ. ರೈಲು ಹಿಮ್ಮುಖವಾಗಿ ಚಲಿಸಿದೆ ಹೊರತು ಯಾರಿಗೂ ಯಾವುದೇ ಅಪಾಯವಾಗಲಿಲ್ಲ.

ಉತ್ತರಾಖಂಡದಲ್ಲಿ 35 ಕಿಮೀ ದೂರ ಹಿಮ್ಮುಖವಾಗಿ ಚಲಿಸಿದ ರೈಲು; ಅದರ ವೇಗಕ್ಕೆ ಪ್ರಯಾಣಿಕರು ಕಂಗಾಲು !
ಹಿಮ್ಮುಖವಾಗಿ ಚಲಿಸಿದ ರೈಲು
Lakshmi Hegde
| Edited By: |

Updated on:Mar 18, 2021 | 2:53 PM

Share

ರೈಲು ಹಿಮ್ಮುಖವಾಗಿ ಚಲಿಸಿದ್ದನ್ನು ನೀವೆಲ್ಲಾದರೂ ನೋಡಿದ್ದೀರಾ? ಅರೆ, ಟ್ರೇನ್​ ಹಿಮ್ಮುಖವಾಗಿ ಚಲಿಸಲು ಹೇಗೆ ಸಾಧ್ಯ ಎಂದು ನೀವು ಯೋಚಿಸುತ್ತಿದ್ದರೆ.. ವೈರಲ್​ ಆಗಿರುವ ಈ ವಿಡಿಯೋವನ್ನು ನೋಡಲೇಬೇಕು. ದೆಹಲಿಯಿಂದ ಉತ್ತರಾಖಂಡಕ್ಕೆ ಸಂಚರಿಸುತ್ತಿದ್ದ, ಪ್ರಯಾಣಿಕರಿದ್ದ ರೈಲು 35 ಕಿ.ಮೀ.ದೂರ ಹಿಮ್ಮುಖವಾಗಿ ಚಲಿಸಿದೆ. ಹೀಗೆ ಅಷ್ಟು ದೂರ ಹಿಮ್ಮುಖವಾಗಿಯೇ, ವೇಗವಾಗಿ ಚಲಿಸಿದ ರೈಲು ಕೊನೆಗೆ ಉತ್ತರಾಖಂಡ ಖಟಿಮಾ ಎಂಬಲ್ಲಿ ನಿಂತಿದೆ.

ಪೂರ್ಣಗಿರಿ ಜನಶತಾಬ್ದಿ ಎಕ್ಸ್​​ಪ್ರೆಸ್​ ರೈಲು ದೆಹಲಿಯಿಂದ ಉತ್ತರಾಖಂಡ್​ದ ತನಕ್​ಪುರಕ್ಕೆ ತೆರಳುತ್ತಿತ್ತು. ಆಗ ರೈಲ್ವೆ ಹಳಿಯ ಮೇಲೆ ಅಡ್ಡಾಡುತ್ತಿದ್ದ ಪ್ರಾಣಿಯನ್ನು ಕಂಡ ರೈಲು ಚಾಲಕ, ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಬ್ರೇಕ್​ ಹಾಕಿದ್ದಾರೆ. ಇದಾದ ಬಳಿಕ ಚಾಲಕ ಲೊಕೊಮೋಟಿವ್​ ಮೇಲೆ ಸಂಪೂರ್ಣ ನಿಯಂತ್ರಣ ಕಳೆದುಕೊಂಡಿದ್ದಾರೆ. ಹಾಗಾಗಿ ರೈಲು ಒಂದೇ ಸಮ ಹಿಮ್ಮುಖವಾಗಿ ಚಲಿಸಿದೆ. ಅದರಲ್ಲಿದ್ದ ಪ್ರಯಾಣಿಕರಂತೂ ತುಂಬ ಕಂಗಾಲಾಗಿದ್ದರು.

ಖಟಿಮಾ ಎಂಬಲ್ಲಿ ರೈಲು ನಿಂತ ಬಳಿಕ, ಪ್ರಯಾಣಿಕರನ್ನು ತನಕ್​ಪುರಕ್ಕೆ ಬಸ್​​ ಮೂಲಕ ಕಳಿಸಲಾಗಿದೆ. ರೈಲು ಹಿಮ್ಮುಖವಾಗಿ ಚಲಿಸಿದೆ ಹೊರತು ಯಾರಿಗೂ ಯಾವುದೇ ಅಪಾಯವಾಗಲಿಲ್ಲ. ಲೋಕೋ ಪೈಲಟ್​ ಮತ್ತು ಗಾರ್ಡ್​​ನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಈಶಾನ್ಯ ರೈಲ್ವೆ ಆಡಳಿತ ತಿಳಿಸಿದೆ.

Published On - 2:32 pm, Thu, 18 March 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?