AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಹಳಿ ಮೇಲೆ ಕಿಡಿಗೇಡಿಗಳು ಇರಿಸಿದ್ದ ಸಿಮೆಂಟ್ ಮೈಲಿಗಲ್ಲಿಗೆ ಗುದ್ದಿದ ರೈಲು

ರಾಜಸ್ಥಾನದ ಅಜ್ಮೀರ್​ನಿಂದ ಅಹಮದಾಬಾದ್​ಗೆ ಹೋಗುವ ಮಾರ್ಗದಲ್ಲಿ ರೈಲಿನ ಹಳಿ ತಪ್ಪಿಸುವ ಪ್ರಯತ್ನ ನಡೆದಿದೆ. ರೈಲ್ವೆ ಹಳಿ ಮೇಲಿದ್ದ ಸಿಮೆಂಟ್​ ಮೈಲಿಗಲ್ಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದು ಹಳಿ ತಪ್ಪಿದೆ. ಕಾನ್ಪುರದಲ್ಲಿ ಭಾನುವಾರ ಕಾಳಿಂದಿ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನವನ್ನು ಕಿಡಿಗೇಡಿಗಳು ನಡೆಸಿದ್ದರು, ಹಳಿ ಮೇಲೆ ಸಿಲಿಂಡರ್, ಪೆಟ್ರೋಲ್​ ತುಂಬಿದ ಬಾಟಲಿಗಳು, ಗನ್​ ಪೌಡರ್ ಸೇರಿದಂತೆ ಅಪಾಯಕಾರಿ ವಸ್ತುಗಳನ್ನು ಇರಿಸಲಾಗಿತ್ತು.

ರೈಲ್ವೆ ಹಳಿ ಮೇಲೆ ಕಿಡಿಗೇಡಿಗಳು ಇರಿಸಿದ್ದ ಸಿಮೆಂಟ್ ಮೈಲಿಗಲ್ಲಿಗೆ ಗುದ್ದಿದ ರೈಲು
ಸಿಮೆಂಟ್ ಮೈಲಿಗಲ್ಲುImage Credit source: News 9
ನಯನಾ ರಾಜೀವ್
|

Updated on: Sep 10, 2024 | 9:49 AM

Share

ರಾಜಸ್ಥಾನದ ಅಜ್ಮೀರ್​ನಿಂದ ಅಹಮದಾಬಾದ್​ಗೆ ಹೋಗುವ ಮಾರ್ಗದಲ್ಲಿ ರೈಲಿನ ಹಳಿ ತಪ್ಪಿಸುವ ಪ್ರಯತ್ನ ನಡೆದಿದೆ. ರೈಲ್ವೆ ಹಳಿ ಮೇಲಿದ್ದ ಸಿಮೆಂಟ್​ ಮೈಲಿಗಲ್ಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದು ಹಳಿ ತಪ್ಪಿದೆ. ಕಾನ್ಪುರದಲ್ಲಿ ಭಾನುವಾರ ಕಾಳಿಂದಿ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನವನ್ನು ಕಿಡಿಗೇಡಿಗಳು ನಡೆಸಿದ್ದರು, ಹಳಿ ಮೇಲೆ ಸಿಲಿಂಡರ್, ಪೆಟ್ರೋಲ್​ ತುಂಬಿದ ಬಾಟಲಿಗಳು, ಗನ್​ ಪೌಡರ್ ಸೇರಿದಂತೆ ಅಪಾಯಕಾರಿ ವಸ್ತುಗಳನ್ನು ಇರಿಸಲಾಗಿತ್ತು.

ರೈಲು ಸಿಲಿಂಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಅದು ಸ್ಫೋಟಗೊಂಡಿತ್ತು, ಆದರೆ ರೈಲಿಗಾಗಲಿ ಅಥವಾ ಪ್ರಯಾಣಿಕರಿಗಾಗಲಿ ಯಾವುದೇ ರೀತಿಯ ಸಮಸ್ಯೆಯಾಗಿರಲಿಲ್ಲ. ಲೊಕೊ ಪೈಲಟ್ ತುರ್ತು ಬ್ರೇಕ್ ಹಾಕಿದ್ದರಿಂದ ರೈಲು ಹಳಿಯಲ್ಲಿ ಅಡಚಣೆ ಉಂಟಾದ ಕಾರಣ ತಕ್ಷಣ ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್) ಗೆ ಎಚ್ಚರಿಕೆ ನೀಡಿ ಸಂಪೂರ್ಣ ತಪಾಸಣೆ ನಡೆಸಿದ ನಂತರ ದೊಡ್ಡ ರೈಲು ಅಪಘಾತವನ್ನು ತಪ್ಪಿಸಲಾಯಿತು.

ಅಜ್ಮೀರ್‌ನ ಫುಲೇರಾದಿಂದ ಗುಜರಾತ್‌ನ ಅಹಮದಾಬಾದ್‌ಗೆ ರೈಲು ಪ್ರಯಾಣಿಸುತ್ತಿದ್ದಾಗ ಮಂಗಳವಾರ ನಸುಕಿನ ವೇಳೆ ಈ ಘಟನೆ ನಡೆದಿದೆ. ರೈಲು ಶಾರಧನ ನಿಲ್ದಾಣದ ಬಳಿ ಇದ್ದಾಗ ಇಂಜಿನ್ ಹಳಿಯಲ್ಲಿ ಯಾವುದೋ ವಸ್ತುವಿಗೆ ಡಿಕ್ಕಿ ಹೊಡೆದಿದೆ.

ಮತ್ತಷ್ಟು ಓದಿ: ಕಾಳಿಂದಿ ರೈಲು ಹಳಿ ತಪ್ಪಿಸಲು ಯತ್ನ, ಹಳಿಯಲ್ಲಿ ಸಿಲಿಂಡರ್​, ಪೆಟ್ರೋಲ್​ ಬಾಟಲಿಗಳು ಪತ್ತೆ

ತಪಾಸಣೆ ನಡೆಸಿದಾಗ, ರೈಲನ್ನು ಹಳಿತಪ್ಪಿಸುವ ಪ್ರಯತ್ನದಲ್ಲಿ 100 ಕಿಲೋಗ್ರಾಂಗಳಷ್ಟು ತೂಕದ ದೊಡ್ಡ ಕಾಂಕ್ರೀಟ್ ಬ್ಲಾಕ್ ನಿರ್ಮಿಸಲಾಗಿತ್ತು ಎಂಬುದು ತಿಳಿದುಬಂದಿದೆ. ಈ ಸಂಬಂಧ ಮಾಂಗಲ್ಯವಾಸ್ ಠಾಣೆಯಲ್ಲಿ ಆರ್‌ಪಿಎಫ್ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್