AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಹಳಿ ಮೇಲೆ ಕಿಡಿಗೇಡಿಗಳು ಇರಿಸಿದ್ದ ಸಿಮೆಂಟ್ ಮೈಲಿಗಲ್ಲಿಗೆ ಗುದ್ದಿದ ರೈಲು

ರಾಜಸ್ಥಾನದ ಅಜ್ಮೀರ್​ನಿಂದ ಅಹಮದಾಬಾದ್​ಗೆ ಹೋಗುವ ಮಾರ್ಗದಲ್ಲಿ ರೈಲಿನ ಹಳಿ ತಪ್ಪಿಸುವ ಪ್ರಯತ್ನ ನಡೆದಿದೆ. ರೈಲ್ವೆ ಹಳಿ ಮೇಲಿದ್ದ ಸಿಮೆಂಟ್​ ಮೈಲಿಗಲ್ಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದು ಹಳಿ ತಪ್ಪಿದೆ. ಕಾನ್ಪುರದಲ್ಲಿ ಭಾನುವಾರ ಕಾಳಿಂದಿ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನವನ್ನು ಕಿಡಿಗೇಡಿಗಳು ನಡೆಸಿದ್ದರು, ಹಳಿ ಮೇಲೆ ಸಿಲಿಂಡರ್, ಪೆಟ್ರೋಲ್​ ತುಂಬಿದ ಬಾಟಲಿಗಳು, ಗನ್​ ಪೌಡರ್ ಸೇರಿದಂತೆ ಅಪಾಯಕಾರಿ ವಸ್ತುಗಳನ್ನು ಇರಿಸಲಾಗಿತ್ತು.

ರೈಲ್ವೆ ಹಳಿ ಮೇಲೆ ಕಿಡಿಗೇಡಿಗಳು ಇರಿಸಿದ್ದ ಸಿಮೆಂಟ್ ಮೈಲಿಗಲ್ಲಿಗೆ ಗುದ್ದಿದ ರೈಲು
ಸಿಮೆಂಟ್ ಮೈಲಿಗಲ್ಲುImage Credit source: News 9
ನಯನಾ ರಾಜೀವ್
|

Updated on: Sep 10, 2024 | 9:49 AM

Share

ರಾಜಸ್ಥಾನದ ಅಜ್ಮೀರ್​ನಿಂದ ಅಹಮದಾಬಾದ್​ಗೆ ಹೋಗುವ ಮಾರ್ಗದಲ್ಲಿ ರೈಲಿನ ಹಳಿ ತಪ್ಪಿಸುವ ಪ್ರಯತ್ನ ನಡೆದಿದೆ. ರೈಲ್ವೆ ಹಳಿ ಮೇಲಿದ್ದ ಸಿಮೆಂಟ್​ ಮೈಲಿಗಲ್ಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದು ಹಳಿ ತಪ್ಪಿದೆ. ಕಾನ್ಪುರದಲ್ಲಿ ಭಾನುವಾರ ಕಾಳಿಂದಿ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನವನ್ನು ಕಿಡಿಗೇಡಿಗಳು ನಡೆಸಿದ್ದರು, ಹಳಿ ಮೇಲೆ ಸಿಲಿಂಡರ್, ಪೆಟ್ರೋಲ್​ ತುಂಬಿದ ಬಾಟಲಿಗಳು, ಗನ್​ ಪೌಡರ್ ಸೇರಿದಂತೆ ಅಪಾಯಕಾರಿ ವಸ್ತುಗಳನ್ನು ಇರಿಸಲಾಗಿತ್ತು.

ರೈಲು ಸಿಲಿಂಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಅದು ಸ್ಫೋಟಗೊಂಡಿತ್ತು, ಆದರೆ ರೈಲಿಗಾಗಲಿ ಅಥವಾ ಪ್ರಯಾಣಿಕರಿಗಾಗಲಿ ಯಾವುದೇ ರೀತಿಯ ಸಮಸ್ಯೆಯಾಗಿರಲಿಲ್ಲ. ಲೊಕೊ ಪೈಲಟ್ ತುರ್ತು ಬ್ರೇಕ್ ಹಾಕಿದ್ದರಿಂದ ರೈಲು ಹಳಿಯಲ್ಲಿ ಅಡಚಣೆ ಉಂಟಾದ ಕಾರಣ ತಕ್ಷಣ ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್) ಗೆ ಎಚ್ಚರಿಕೆ ನೀಡಿ ಸಂಪೂರ್ಣ ತಪಾಸಣೆ ನಡೆಸಿದ ನಂತರ ದೊಡ್ಡ ರೈಲು ಅಪಘಾತವನ್ನು ತಪ್ಪಿಸಲಾಯಿತು.

ಅಜ್ಮೀರ್‌ನ ಫುಲೇರಾದಿಂದ ಗುಜರಾತ್‌ನ ಅಹಮದಾಬಾದ್‌ಗೆ ರೈಲು ಪ್ರಯಾಣಿಸುತ್ತಿದ್ದಾಗ ಮಂಗಳವಾರ ನಸುಕಿನ ವೇಳೆ ಈ ಘಟನೆ ನಡೆದಿದೆ. ರೈಲು ಶಾರಧನ ನಿಲ್ದಾಣದ ಬಳಿ ಇದ್ದಾಗ ಇಂಜಿನ್ ಹಳಿಯಲ್ಲಿ ಯಾವುದೋ ವಸ್ತುವಿಗೆ ಡಿಕ್ಕಿ ಹೊಡೆದಿದೆ.

ಮತ್ತಷ್ಟು ಓದಿ: ಕಾಳಿಂದಿ ರೈಲು ಹಳಿ ತಪ್ಪಿಸಲು ಯತ್ನ, ಹಳಿಯಲ್ಲಿ ಸಿಲಿಂಡರ್​, ಪೆಟ್ರೋಲ್​ ಬಾಟಲಿಗಳು ಪತ್ತೆ

ತಪಾಸಣೆ ನಡೆಸಿದಾಗ, ರೈಲನ್ನು ಹಳಿತಪ್ಪಿಸುವ ಪ್ರಯತ್ನದಲ್ಲಿ 100 ಕಿಲೋಗ್ರಾಂಗಳಷ್ಟು ತೂಕದ ದೊಡ್ಡ ಕಾಂಕ್ರೀಟ್ ಬ್ಲಾಕ್ ನಿರ್ಮಿಸಲಾಗಿತ್ತು ಎಂಬುದು ತಿಳಿದುಬಂದಿದೆ. ಈ ಸಂಬಂಧ ಮಾಂಗಲ್ಯವಾಸ್ ಠಾಣೆಯಲ್ಲಿ ಆರ್‌ಪಿಎಫ್ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು