AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದ ಅಸನ್ಸೋಲ್​ನಲ್ಲಿ ಹಳಿ ತಪ್ಪಿದ 40 ಪ್ರಯಾಣಿಕರಿದ್ದ ಪ್ಯಾಸೆಂಜರ್ ರೈಲು

ಅಸನ್ಸೋಲ್ ನಿಲ್ದಾಣದ ಪ್ಲಾಟ್‌ಫಾರ್ಮ್‌ನಿಂದ ರೈಲು ಅತ್ಯಂತ ಕಡಿಮೆ ವೇಗದಲ್ಲಿ ಹೊರಟಿದ್ದರಿಂದ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಇಆರ್ ವಕ್ತಾರ ಏಕಲವ್ಯ ಚಕ್ರವರ್ತಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಅಸನ್ಸೋಲ್​ನಲ್ಲಿ ಹಳಿ ತಪ್ಪಿದ 40 ಪ್ರಯಾಣಿಕರಿದ್ದ ಪ್ಯಾಸೆಂಜರ್ ರೈಲು
ಅಸನ್ಸೋಲ್​ನಲ್ಲಿ ರೈಲು ಅಪಘಾತImage Credit source: times now
TV9 Web
| Edited By: |

Updated on: Jun 08, 2022 | 8:18 AM

Share

ಕೊಲ್ಕತ್ತಾ: 30ರಿಂದ 40 ಜನರಿದ್ದ ಪ್ಯಾಸೆಂಜರ್ ರೈಲು (Passenger Train) ಮಂಗಳವಾರ ಸಂಜೆ ಪಶ್ಚಿಮ ಬಂಗಾಳದ ಅಸನ್ಸೋಲ್‌ನಲ್ಲಿ (Asansol) ಹಳಿ ತಪ್ಪಿದೆ. ಆದರೆ, ಈ ಘಟನೆಯಲ್ಲಿ ಯಾವುದೇ ಗಂಭೀರ ಗಾಯಗಳಾಗಿಲ್ಲ. ರೈಲು ಹಳಿತಪ್ಪಿದ ಕಾರಣ ಎರಡು ರಾಜಧಾನಿ ಎಕ್ಸ್‌ಪ್ರೆಸ್ (Rajdhani Express) ರೈಲುಗಳು ವಿಳಂಬಗೊಂಡವು. ವರದಿಗಳ ಪ್ರಕಾರ, ಅಸನ್ಸೋಲ್- ಬೊಕಾರೊ MEMU ರೈಲಿನ ಕಂಪಾರ್ಟ್‌ಮೆಂಟ್‌ನ ನಾಲ್ಕು ಚಕ್ರಗಳು ಅಸನ್ಸೋಲ್ ರೈಲು ನಿಲ್ದಾಣದ ಬಳಿ ಹಳಿ ತಪ್ಪಿದವು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅಸನ್ಸೋಲ್ ರೈಲು ವಿಭಾಗದ ಡಿಆರ್‌ಎಂ ಪರಮಾನಂದ್ ಶರ್ಮಾ, ಅಸನ್ಸೋಲ್ ರೈಲು ನಿಲ್ದಾಣದಿಂದ ಹೊರಟ ಸ್ವಲ್ಪ ಸಮಯದ ನಂತರ ರೈಲು ಹಳಿತಪ್ಪಿತು. ಈ ಕೋಚ್‌ನಲ್ಲಿ ಸುಮಾರು 30ರಿಂದ 40 ಜನರಿದ್ದರು. ಆದರೆ, ಯಾವುದೇ ಪ್ರಾಣಹಾನಿಯಾಗಿಲ್ಲ. ಹಳಿ ತಪ್ಪಿದ ಕಾರಣ ನಾವು ಕೆಲವು ಎಕ್ಸ್‌ಪ್ರೆಸ್ ರೈಲುಗಳನ್ನು ಸ್ವಲ್ಪ ಸಮಯದವರೆಗೆ ನಿಲ್ಲಿಸಬೇಕಾಯಿತು. ಆದರೆ, ಯಾವುದೇ ಗಂಭೀರ ಪರಿಣಾಮ ಬೀರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಉಪನಗರ ರೈಲು ಯೋಜನೆಗೆ ಜೂನ್​​ 20ರಂದು ಶಂಕುಸ್ಥಾಪನೆ ಮಾಡಲಿದ್ದಾರೆ ಪ್ರಧಾನಿ ಮೋದಿ

ಅಸನ್ಸೋಲ್ ನಿಲ್ದಾಣದ ಪ್ಲಾಟ್‌ಫಾರ್ಮ್‌ನಿಂದ ರೈಲು ಅತ್ಯಂತ ಕಡಿಮೆ ವೇಗದಲ್ಲಿ ಹೊರಟಿದ್ದರಿಂದ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಇಆರ್ ವಕ್ತಾರ ಏಕಲವ್ಯ ಚಕ್ರವರ್ತಿ ತಿಳಿಸಿದ್ದಾರೆ. ನಿನ್ನೆ ಸಂಜೆ 6.10ಕ್ಕೆ ಪ್ಲಾಟ್‌ಫಾರ್ಮ್‌ನಿಂದ ಹೊರಡುವಾಗ ಅಸನ್ಸೋಲ್-ಬೊಕಾರೊ ಮೆಮು ರೈಲಿನ ಹಿಂದಿನ ಕೋಚ್‌ನ ನಾಲ್ಕು ಚಕ್ರಗಳು ಹಳಿ ತಪ್ಪಿದವು ಎಂದು ಅವರು ಹೇಳಿದ್ದಾರೆ.

ಇದು ಹೌರಾ- ನವದೆಹಲಿ ಮತ್ತು ಸೀಲ್ದಾ- ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್ ರೈಲುಗಳ ತಲಾ ಅರ್ಧ ಗಂಟೆ ವಿಳಂಬಕ್ಕೆ ಕಾರಣವಾಯಿತು. ಚಕ್ರಗಳನ್ನು ಮತ್ತೆ ಹಳಿಗಳಿಗೆ ಹಾಕಿದ ನಂತರ ರೈಲು ಸೇವೆಗಳನ್ನು ರಾತ್ರಿ 7.45ರ ಹೊತ್ತಿಗೆ ಸಾಮಾನ್ಯಗೊಳಿಸಲಾಯಿತು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ