AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಕಾಲೇಜು ಕಟ್ಟಡದಿಂದ ಜಿಗಿದು ಟ್ರೈನಿ ವೈದ್ಯೆ ಆತ್ಮಹತ್ಯೆ

ತರಬೇತಿ ನಿರತ ವೈದ್ಯೆಯೊಬ್ಬರು ಕಾಲೇಜು ಕಟ್ಟಡದಿಂದ ಜಿಗಿದು ಪ್ರಾಣ ಬಿಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.ಕಾಂಚಿಪುರಂ ಜಿಲ್ಲೆಯ ಖಾಸಗಿ ಆಸ್ಪತ್ರೆ ಮೀನಾಕ್ಷಿ ವೈದ್ಯಕೀಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ತಮಿಳುನಾಡು: ಕಾಲೇಜು ಕಟ್ಟಡದಿಂದ ಜಿಗಿದು ಟ್ರೈನಿ ವೈದ್ಯೆ ಆತ್ಮಹತ್ಯೆ
ಸಾವು
ನಯನಾ ರಾಜೀವ್
|

Updated on: Sep 02, 2024 | 1:04 PM

Share

ತಮಿಳುನಾಡಿನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದ ಟ್ರೈನಿ ವೈದ್ಯೆಯೊಬ್ಬರು ಕ್ಯಾಂಪಸ್‌ನಲ್ಲಿರುವ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದಾರೆ. ಕಾಂಚಿಪುರಂ ಜಿಲ್ಲೆಯ ಖಾಸಗಿ ಆಸ್ಪತ್ರೆ ಮೀನಾಕ್ಷಿ ವೈದ್ಯಕೀಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

23 ವರ್ಷದ ಶೆರ್ಲಿನ್, ತಿರುನಲ್ವೇಲಿ ಮೂಲದವರಾಗಿದ್ದು, ಸಂಸ್ಥೆಯಲ್ಲಿ ಐದನೇ ವರ್ಷದ ವಿದ್ಯಾರ್ಥಿ ಮತ್ತು ತರಬೇತಿ ವೈದ್ಯರಾಗಿದ್ದರು. ಭಾನುವಾರ ರಾತ್ರಿ, ಐದನೇ ಮಹಡಿಯ ಕಿಟಕಿಯ ಹಲಗೆಯ ಹೊರಗೆ ಬಹಳ ಹೊತ್ತು ಕುಳಿತಿದ್ದ ಇತರ ವಿದ್ಯಾರ್ಥಿಗಳ ಕ್ಯಾಮರಾದಲ್ಲಿ ಸೆರೆಯಾಗಿದೆ.

ಯಾರಾದರೂ ಅವಳನ್ನು ಸಂಪರ್ಕಿಸುವ ಅಥವಾ ಮಾತನಾಡುವ ಮೊದಲು, ಶೆರ್ಲಿನ್ ಹಾರಿದ್ದಾರೆ ಎಂದು ವರದಿಯಾಗಿದೆ. ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಉಪನ್ಯಾಸಕ ವಶಕ್ಕೆ

ವೈಯಕ್ತಿಕ ಕಾರಣಗಳಿಂದಾಗಿ ಶೆರ್ಲಿನ್ ಖಿನ್ನತೆಗೆ ಒಳಗಾಗಿದ್ದರು ಎಂದು ಪ್ರಾಥಮಿಕ ಮಾಹಿತಿಗಳು ಸೂಚಿಸಿವೆ. ಈ ಕುರಿತು ಸ್ಥಳೀಯ ಪೊಲೀಸರು ವಿವರವಾದ ತನಿಖೆ ಆರಂಭಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇತ್ತೀಚೆಗಷ್ಟೇ ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಪ್ರಕರಣ ಇನ್ನೂ ಜನರ ಮನಸ್ಸಿಂದ ಮಾಸಿಲ್ಲ, ಇದೀಗ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಸಾವಿನ ನಿರ್ಧಾರ ತೆಗೆದುಕೊಳ್ಳಲು ಅವರಿಗಿದ್ದ ಕಾರಣಗಳ ಬಗ್ಗೆ ತನಿಖೆ ಆರಂಭವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ