AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aircraft Crash: ಉತ್ತರ ಪ್ರದೇಶದ ಅಮೇಥಿಯಲ್ಲಿ ತರಬೇತಿ ವಿಮಾನ ಪತನ; ಪೈಲಟ್ ಸೇಫ್

ಪೈಲಟ್ ಅಭಯ್ ಪಟೇಲ್ ಅವರು ಅಕಾಡೆಮಿಯಿಂದ ತರಬೇತಿಗಾಗಿ ಹೊರಟಿದ್ದರು. ಆದರೆ ಅಮೇಥಿ-ರಾಯ್ ಬರೇಲಿ ಗಡಿಯಲ್ಲಿರುವ ಮೊಹಮ್ಮದ್‌ಪುರ ಚುರೈ ಗ್ರಾಮದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಬೇಕಾಯಿತು.

Aircraft Crash: ಉತ್ತರ ಪ್ರದೇಶದ ಅಮೇಥಿಯಲ್ಲಿ ತರಬೇತಿ ವಿಮಾನ ಪತನ; ಪೈಲಟ್ ಸೇಫ್
ಸಾಂದರ್ಭಿಕ ಚಿತ್ರImage Credit source: Zee News
TV9 Web
| Edited By: |

Updated on:Jun 13, 2022 | 4:23 PM

Share

ಅಮೇಥಿ: ಉತ್ತರ ಪ್ರದೇಶದ ಅಮೇಥಿಯಲ್ಲಿ ತರಬೇತಿ ವಿಮಾನವೊಂದು (Aircraft Crash) ಪತನವಾಗಿದ್ದು, ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು (ಜೂನ್ 13) ಲಘು ವಿಮಾನವು ತುರ್ತು ಭೂಸ್ಪರ್ಶವಾಗಿದ್ದು, ವಿಮಾನಕ್ಕೆ ಭಾರೀ ಹಾನಿಯುಂಟಾಗಿದೆ. ಆದರೆ, ಟ್ರೈನಿ ಪೈಲಟ್ (Trainee Pilot) ಸ್ವಲ್ಪದರಲ್ಲೇ ಸಾವಿನಿಂದ ಪಾರಾಗಿದ್ದಾರೆ. ತುರ್ತು ಭೂಸ್ಪರ್ಶದ ನಂತರ ತರಬೇತಿ ನಿರತ ಪೈಲಟ್ ಅಭಯ್ ಪಟೇಲ್ ಸುರಕ್ಷಿತವಾಗಿದ್ದಾರೆ ಎಂದು ಇಂದಿರಾಗಾಂಧಿ ರಾಷ್ಟ್ರೀಯ ಉರಾನ್ ಅಕಾಡೆಮಿಯ (IGRUA) ಮಾಧ್ಯಮ ಉಸ್ತುವಾರಿ ಆರ್ ಕೆ ದ್ವಿವೇದಿ ತಿಳಿಸಿದ್ದಾರೆ.

ತರಬೇತಿಯಲ್ಲಿದ್ದ ಪೈಲಟ್ ಅಭಯ್ ಪಟೇಲ್ ಅವರು ಅಕಾಡೆಮಿಯಿಂದ ತರಬೇತಿಗಾಗಿ ಹೊರಟಿದ್ದರು. ಆದರೆ ಅಮೇಥಿ-ರಾಯ್ ಬರೇಲಿ ಗಡಿಯಲ್ಲಿರುವ ಮೊಹಮ್ಮದ್‌ಪುರ ಚುರೈ ಗ್ರಾಮದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಲ್ಯಾಂಡಿಂಗ್ ಸಮಯದಲ್ಲಿ, ವಿಮಾನದ ಮುಂಭಾಗದ ಭಾಗವು ಹಾನಿಗೊಳಗಾಯಿತು ಎಂದು ದ್ವಿವೇದಿ ಹೇಳಿದ್ದಾರೆ. ಅಭಯ್ ಪಟೇಲ್ ಅವರು 2021ರಲ್ಲಿ IGRUAನಲ್ಲಿ ದಾಖಲಾಗಿದ್ದರು. ಅವರು 27 ಗಂಟೆಗಳ ವಿಮಾನ ಹಾರಾಟ ತರಬೇತಿಯನ್ನು ಪೂರ್ಣಗೊಳಿಸಿದ್ದಾರೆ.

ಇದನ್ನೂ ಓದಿ: ವಿಮಾನದಲ್ಲಿ ಪ್ರಯಾಣಿಸುವಾಗ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ತಿನ್ನಬೇಡಿ, ನೀವು ಅನಾರೋಗ್ಯಕ್ಕೆ ಒಳಗಾಗಬಹುದು

ಇದನ್ನೂ ಓದಿ
Image
National Herald Case: ಏನಿದು ನ್ಯಾಷನಲ್ ಹೆರಾಲ್ಡ್​ ಪ್ರಕರಣ? ಈ ಕೇಸಿನಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಪಾತ್ರವೇನು?
Image
ಸೋದರ ಸಂಬಂಧಿ ಸಾವಿನ ಆಘಾತ ತಾಳಲಾರದೇ ಚಿತೆಗೆ ಹಾರಿ ಯುವಕ ಆತ್ಮಹತ್ಯೆ
Image
National Herald Case: ರಾಹುಲ್ ಗಾಂಧಿಗೆ ಸಮನ್ಸ್: ಕಾಂಗ್ರೆಸ್ ಪ್ರತಿಭಟನೆ, ಹಲವು ಮಂದಿ ಪೊಲೀಸ್ ವಶಕ್ಕೆ

ವಿಮಾನ ಪತನವಾದ್ದರಿಂದ ಪೈಲಟ್​ಗೆ ಸಣ್ಣಪುಟ್ಟ ಗಾಯಗಳಾಗಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಮಾನ ತುರ್ತು ಭೂಸ್ಪರ್ಶವಾದ ಕೂಡಲೆ ಐವರು ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಪೈಲಟ್ ಅನ್ನು ಹೊರಗೆಳೆದು ರಕ್ಷಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Mon, 13 June 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್