AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್​ ವ್ಯತ್ಯಯ ತಪ್ಪಿಸಲು ಮಹತ್ವದ ಹೆಜ್ಜೆ; 24ಗಂಟೆಯೂ ಕಲ್ಲಿದ್ದಲು ಪೂರೈಕೆಗಾಗಿ ರೈಲು ಸಂಚಾರ

Coal Crisis: ಸೋಮವಾರ 1.77 ಮಿಲಿಯನ್​ ಟನ್​​ಗಳಷ್ಟು ಕಲ್ಲಿದ್ದಲನ್ನು ವರ್ಗಾಯಿಸಲಾಗಿದೆ. ಕಳೆದ ವರ್ಷ ಇದೇ ದಿನ 1.48 ಮಿಲಿಯನ್​ ಟನ್​​ಗಳಷ್ಟು ಕಲ್ಲಿದ್ದಲು ಮಾತ್ರ ಟ್ರಾನ್ಸ್​ಫರ್​ ಆಗಿತ್ತು.

ವಿದ್ಯುತ್​ ವ್ಯತ್ಯಯ ತಪ್ಪಿಸಲು ಮಹತ್ವದ ಹೆಜ್ಜೆ; 24ಗಂಟೆಯೂ ಕಲ್ಲಿದ್ದಲು ಪೂರೈಕೆಗಾಗಿ ರೈಲು ಸಂಚಾರ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 12, 2021 | 10:35 AM

Share

ದೇಶದಲ್ಲಿ ಸದ್ಯ ಬಹುಮಟ್ಟಿಗೆ ಸುದ್ದಿಯಾಗುತ್ತಿರುವುದು ಕಲ್ಲಿದ್ದಲು ಕೊರತೆ (Coal Crisis)ಮತ್ತು ವಿದ್ಯುತ್ ಪೂರೈಕೆ (Power Supply)ಯಲ್ಲಿ ವ್ಯತ್ಯಯ. ಈ ಕಲ್ಲಿದ್ದಲು ಅಭಾವ ದೇಶದ ದೆಹಲಿ, ತಮಿಳುನಾಡು, ರಾಜಸ್ಥಾನ, ಪಂಜಾಬ್​ ರಾಜ್ಯಗಳಲ್ಲಿ ವಿದ್ಯುತ್​ ಸಮಸ್ಯೆ ತಂದೊಡ್ಡಬಹುದು. ಹಾಗೇ ಇನ್ನೂ ಕೆಲವು ರಾಜ್ಯಗಳಲ್ಲೂ ಕೂಡ ವಿದ್ಯುತ್​ ವ್ಯತ್ಯಯ ಆಗಬಹುದು ಎಂದು ವಿಶ್ಲೇಷಿಸಲಾಗಿದೆ. ಈ ಮಧ್ಯೆ ಭಾರತೀಯ ರೈಲ್ವೆ ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ವಿದ್ಯುತ್​ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಸಲು ರೈಲುಗಳು ದಿನದ 24 ಗಂಟೆ ಸಂಚಾರ ನಡೆಸಲು ಪ್ರಾರಂಭ ಮಾಡಿವೆ. ಕಲ್ಲಿದ್ದಲಿನ ಅಭಾವ ಒಂದು ತುರ್ತುಪರಿಸ್ಥಿತಿ ಎಂದು ರಾಷ್ಟ್ರೀಯ ಸಾಗಣೆದಾರರು ಘೋಷಣೆ ಮಾಡಿದ್ದು, 24 ಗಂಟೆ ಕಲ್ಲಿದ್ದಲು ಸಾಗಣೆಗಾಗಿ ಕಂಟ್ರೋಲ್​ ರೂಂ ರಚನೆ ಮಾಡಿ ಎಂದು ರೈಲ್ವೆ ಎಲ್ಲ ವಲಯಗಳ ಪ್ರಧಾನ ಮುಖ್ಯ ಕಾರ್ಯನಿರ್ವಾಹಕರಿಗೆ ಸೂಚನೆ ನೀಡಲಾಗಿದೆ. 

ಸೋಮವಾರ 1.77 ಮಿಲಿಯನ್​ ಟನ್​​ಗಳಷ್ಟು ಕಲ್ಲಿದ್ದಲನ್ನು ವರ್ಗಾಯಿಸಲಾಗಿದೆ. ಕಳೆದ ವರ್ಷ ಇದೇ ದಿನ 1.48 ಮಿಲಿಯನ್​ ಟನ್​​ಗಳಷ್ಟು ಕಲ್ಲಿದ್ದಲು ಮಾತ್ರ ಟ್ರಾನ್ಸ್​ಫರ್​ ಆಗಿತ್ತು. ಇನ್ನು ಒಂದು ದಿನ ಬೇಡಿಕೆ 500 ರೇಕ್ಸ್​ಗೆ ತಲುಪಿದರೂ, ಸಾಗಣೆದಾರರು ಅದನ್ನು ಆರಾಮಾಗಿ ಪೂರೈಕೆ ಮಾಡುತ್ತಾರೆ.  ದೇಶದ ಪೂರ್ವ ಭಾಗದ ಕಲ್ಲಿದ್ದಲು ವಲಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಕಲ್ಲಿದ್ದಲು ಬರುತ್ತಿದೆ. ಪೂರ್ವ ಮಧ್ಯ ರೈಲ್ವೆ ವಲಯದ ರೈಲುಗಳು ಆ ಕಲ್ಲಿದ್ದಲನ್ನು ಪೂರೈಸುತ್ತವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೇಶಾದ್ಯಂತ ಕಲ್ಲಿದ್ದಲು ಅಗತ್ಯ ಇರುವ ರಾಜ್ಯಗಳಿಗೆ ಸಂಪೂರ್ಣ ಪ್ರಮಾಣದಲ್ಲಿ ಅದನ್ನು ಪೂರೈಸುವ ಮೂಲಕ ವಿದ್ಯುತ್​ ಕೊರತೆ ನೀಗಿಸಲು ಸಿದ್ಧರಿದ್ದೇವೆ ಎಂದು ರೈಲ್ವೆ ರಾಷ್ಟ್ರೀಯ ಸಾಗಣೆದಾರರು ವಿದ್ಯುತ್ ಮತ್ತು ಕಲ್ಲಿದ್ದಲು ಸಚಿವಾಲಯಕ್ಕೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಈಗ ಎದುರಾಗಿರುವ ಸಂದರ್ಭ ಒಂದೆರಡು ದಿನಕ್ಕೆಲ್ಲ ಸರಿ ಹೋಗುವಂಥದ್ದಲ್ಲ. ಆದರೆ ಕಲ್ಲಿದ್ದಲು ಸಾಗಣೆಗೆ ಎಲ್ಲ ರೀತಿಯಿಂದಲೂ ಸಿದ್ಧರಾಗಿದ್ದೇವೆ. ಕಲ್ಲಿದ್ದಲು ಲೋಡಿಂಗ್​, ಅನ್​ಲೋಡಿಂಗ್​ ಸೇರಿ ಎಲ್ಲ ರೀತಿಯ ಮೇಲ್ವಿಚಾರಣೆಗಳನ್ನೂ ಸರಿಯಾಗಿ ಮಾಡಲಾಗುವುದು ಎಂದು ರೈಲ್ವೆ ವಲಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಟ್ಯೂಷನ್‌ ಕ್ಲಾಸ್​ನಲ್ಲಿ ಅನ್ಯ ಧರ್ಮದ ಟೋಪಿ ಧರಿಸಿದಕ್ಕೆ ಗಲಾಟೆ; ಐವರ ಮೇಲೆ ಹಲ್ಲೆ

Karnataka Rain: ಕರ್ನಾಟಕದ ಹಲವು ಕಡೆ ಭಾರಿ ಮಳೆ; ಫೋಟೋಗಳು ಇಲ್ಲಿವೆ

Published On - 9:54 am, Tue, 12 October 21

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ