AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್​ ವ್ಯತ್ಯಯ ತಪ್ಪಿಸಲು ಮಹತ್ವದ ಹೆಜ್ಜೆ; 24ಗಂಟೆಯೂ ಕಲ್ಲಿದ್ದಲು ಪೂರೈಕೆಗಾಗಿ ರೈಲು ಸಂಚಾರ

Coal Crisis: ಸೋಮವಾರ 1.77 ಮಿಲಿಯನ್​ ಟನ್​​ಗಳಷ್ಟು ಕಲ್ಲಿದ್ದಲನ್ನು ವರ್ಗಾಯಿಸಲಾಗಿದೆ. ಕಳೆದ ವರ್ಷ ಇದೇ ದಿನ 1.48 ಮಿಲಿಯನ್​ ಟನ್​​ಗಳಷ್ಟು ಕಲ್ಲಿದ್ದಲು ಮಾತ್ರ ಟ್ರಾನ್ಸ್​ಫರ್​ ಆಗಿತ್ತು.

ವಿದ್ಯುತ್​ ವ್ಯತ್ಯಯ ತಪ್ಪಿಸಲು ಮಹತ್ವದ ಹೆಜ್ಜೆ; 24ಗಂಟೆಯೂ ಕಲ್ಲಿದ್ದಲು ಪೂರೈಕೆಗಾಗಿ ರೈಲು ಸಂಚಾರ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 12, 2021 | 10:35 AM

Share

ದೇಶದಲ್ಲಿ ಸದ್ಯ ಬಹುಮಟ್ಟಿಗೆ ಸುದ್ದಿಯಾಗುತ್ತಿರುವುದು ಕಲ್ಲಿದ್ದಲು ಕೊರತೆ (Coal Crisis)ಮತ್ತು ವಿದ್ಯುತ್ ಪೂರೈಕೆ (Power Supply)ಯಲ್ಲಿ ವ್ಯತ್ಯಯ. ಈ ಕಲ್ಲಿದ್ದಲು ಅಭಾವ ದೇಶದ ದೆಹಲಿ, ತಮಿಳುನಾಡು, ರಾಜಸ್ಥಾನ, ಪಂಜಾಬ್​ ರಾಜ್ಯಗಳಲ್ಲಿ ವಿದ್ಯುತ್​ ಸಮಸ್ಯೆ ತಂದೊಡ್ಡಬಹುದು. ಹಾಗೇ ಇನ್ನೂ ಕೆಲವು ರಾಜ್ಯಗಳಲ್ಲೂ ಕೂಡ ವಿದ್ಯುತ್​ ವ್ಯತ್ಯಯ ಆಗಬಹುದು ಎಂದು ವಿಶ್ಲೇಷಿಸಲಾಗಿದೆ. ಈ ಮಧ್ಯೆ ಭಾರತೀಯ ರೈಲ್ವೆ ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ವಿದ್ಯುತ್​ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಸಲು ರೈಲುಗಳು ದಿನದ 24 ಗಂಟೆ ಸಂಚಾರ ನಡೆಸಲು ಪ್ರಾರಂಭ ಮಾಡಿವೆ. ಕಲ್ಲಿದ್ದಲಿನ ಅಭಾವ ಒಂದು ತುರ್ತುಪರಿಸ್ಥಿತಿ ಎಂದು ರಾಷ್ಟ್ರೀಯ ಸಾಗಣೆದಾರರು ಘೋಷಣೆ ಮಾಡಿದ್ದು, 24 ಗಂಟೆ ಕಲ್ಲಿದ್ದಲು ಸಾಗಣೆಗಾಗಿ ಕಂಟ್ರೋಲ್​ ರೂಂ ರಚನೆ ಮಾಡಿ ಎಂದು ರೈಲ್ವೆ ಎಲ್ಲ ವಲಯಗಳ ಪ್ರಧಾನ ಮುಖ್ಯ ಕಾರ್ಯನಿರ್ವಾಹಕರಿಗೆ ಸೂಚನೆ ನೀಡಲಾಗಿದೆ. 

ಸೋಮವಾರ 1.77 ಮಿಲಿಯನ್​ ಟನ್​​ಗಳಷ್ಟು ಕಲ್ಲಿದ್ದಲನ್ನು ವರ್ಗಾಯಿಸಲಾಗಿದೆ. ಕಳೆದ ವರ್ಷ ಇದೇ ದಿನ 1.48 ಮಿಲಿಯನ್​ ಟನ್​​ಗಳಷ್ಟು ಕಲ್ಲಿದ್ದಲು ಮಾತ್ರ ಟ್ರಾನ್ಸ್​ಫರ್​ ಆಗಿತ್ತು. ಇನ್ನು ಒಂದು ದಿನ ಬೇಡಿಕೆ 500 ರೇಕ್ಸ್​ಗೆ ತಲುಪಿದರೂ, ಸಾಗಣೆದಾರರು ಅದನ್ನು ಆರಾಮಾಗಿ ಪೂರೈಕೆ ಮಾಡುತ್ತಾರೆ.  ದೇಶದ ಪೂರ್ವ ಭಾಗದ ಕಲ್ಲಿದ್ದಲು ವಲಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಕಲ್ಲಿದ್ದಲು ಬರುತ್ತಿದೆ. ಪೂರ್ವ ಮಧ್ಯ ರೈಲ್ವೆ ವಲಯದ ರೈಲುಗಳು ಆ ಕಲ್ಲಿದ್ದಲನ್ನು ಪೂರೈಸುತ್ತವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೇಶಾದ್ಯಂತ ಕಲ್ಲಿದ್ದಲು ಅಗತ್ಯ ಇರುವ ರಾಜ್ಯಗಳಿಗೆ ಸಂಪೂರ್ಣ ಪ್ರಮಾಣದಲ್ಲಿ ಅದನ್ನು ಪೂರೈಸುವ ಮೂಲಕ ವಿದ್ಯುತ್​ ಕೊರತೆ ನೀಗಿಸಲು ಸಿದ್ಧರಿದ್ದೇವೆ ಎಂದು ರೈಲ್ವೆ ರಾಷ್ಟ್ರೀಯ ಸಾಗಣೆದಾರರು ವಿದ್ಯುತ್ ಮತ್ತು ಕಲ್ಲಿದ್ದಲು ಸಚಿವಾಲಯಕ್ಕೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಈಗ ಎದುರಾಗಿರುವ ಸಂದರ್ಭ ಒಂದೆರಡು ದಿನಕ್ಕೆಲ್ಲ ಸರಿ ಹೋಗುವಂಥದ್ದಲ್ಲ. ಆದರೆ ಕಲ್ಲಿದ್ದಲು ಸಾಗಣೆಗೆ ಎಲ್ಲ ರೀತಿಯಿಂದಲೂ ಸಿದ್ಧರಾಗಿದ್ದೇವೆ. ಕಲ್ಲಿದ್ದಲು ಲೋಡಿಂಗ್​, ಅನ್​ಲೋಡಿಂಗ್​ ಸೇರಿ ಎಲ್ಲ ರೀತಿಯ ಮೇಲ್ವಿಚಾರಣೆಗಳನ್ನೂ ಸರಿಯಾಗಿ ಮಾಡಲಾಗುವುದು ಎಂದು ರೈಲ್ವೆ ವಲಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಟ್ಯೂಷನ್‌ ಕ್ಲಾಸ್​ನಲ್ಲಿ ಅನ್ಯ ಧರ್ಮದ ಟೋಪಿ ಧರಿಸಿದಕ್ಕೆ ಗಲಾಟೆ; ಐವರ ಮೇಲೆ ಹಲ್ಲೆ

Karnataka Rain: ಕರ್ನಾಟಕದ ಹಲವು ಕಡೆ ಭಾರಿ ಮಳೆ; ಫೋಟೋಗಳು ಇಲ್ಲಿವೆ

Published On - 9:54 am, Tue, 12 October 21

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ