AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Riyana Raju: ಮೊದಲ ಬಾರಿಗೆ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ತೃತೀಯಲಿಂಗಿ ಮಹಿಳೆ

ಇದೇ ಮೊದಲ ಬಾರಿ ತೃತೀಯಲಿಂಗಿ ಮಹಿಳೆಯೊಬ್ಬರು ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆದಿದ್ದಾರೆ. ಅಯ್ಯಪ್ಪಸ್ವಾಮಿ ದರ್ಶನ ಪಡೆದ ಮೊದಲ ತೃತೀಯಲಿಂಗಿ ಮಹಿಳೆ ಎನ್ನುವ ಕೀರ್ತಿಗೆ ರಿಯಾನಾ ರಾಜು ಪಾತ್ರರಾಗಿದ್ದಾರೆ. ರಿಯಾನಾ ಹಲವು ವರ್ಷಗಳ ಹಿಂದೆ ಪುರುಷನಿಂದ ಹೆಣ್ಣಾಗಿ ಬದಲಾಗಿದ್ದಾರೆ. ರಿಯಾನಾ ಕೇರಳ ಸರ್ಕಾರದ ದೇವಸ್ವಂ ಬೋರ್ಡ್ ವೆಬ್‌ಸೈಟ್ ಮೂಲಕ ಪದೇ ಪದೇ ಅರ್ಜಿ ಸಲ್ಲಿಸುತ್ತಲೇ ಇದ್ದರು. ಆದರೂ ಅನುಮತಿ ಸಿಕ್ಕಿರಲಿಲ್ಲ.

Riyana Raju: ಮೊದಲ ಬಾರಿಗೆ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ತೃತೀಯಲಿಂಗಿ ಮಹಿಳೆ
ನಯನಾ ರಾಜೀವ್
|

Updated on:Jan 10, 2024 | 10:11 AM

Share

ಇದೇ ಮೊದಲ ಬಾರಿ ತೃತೀಯಲಿಂಗಿ ಮಹಿಳೆಯೊಬ್ಬರು ಶಬರಿಮಲೆ(Sabarimala) ಅಯ್ಯಪ್ಪಸ್ವಾಮಿ(Ayyappa Swamy) ದರ್ಶನ ಪಡೆದಿದ್ದಾರೆ. ಅಯ್ಯಪ್ಪಸ್ವಾಮಿ ದರ್ಶನ ಪಡೆದ ಮೊದಲ ತೃತೀಯಲಿಂಗಿ ಮಹಿಳೆ ಎನ್ನುವ ಕೀರ್ತಿಗೆ ರಿಯಾನಾ ರಾಜು ಪಾತ್ರರಾಗಿದ್ದಾರೆ. ರಿಯಾನಾ ಹಲವು ವರ್ಷಗಳ ಹಿಂದೆ ಪುರುಷನಿಂದ ಹೆಣ್ಣಾಗಿ ಬದಲಾಗಿದ್ದಾರೆ. ರಿಯಾನಾ ಕೇರಳ ಸರ್ಕಾರದ ದೇವಸ್ವಂ ಬೋರ್ಡ್ ವೆಬ್‌ಸೈಟ್ ಮೂಲಕ ಪದೇ ಪದೇ ಅರ್ಜಿ ಸಲ್ಲಿಸುತ್ತಲೇ ಇದ್ದರು. ಆದರೂ ಅನುಮತಿ ಸಿಕ್ಕಿರಲಿಲ್ಲ.

ಆದರೆ ಶಬರಿಮಲೆಗೆ ಪುರುಷರು, ಅಪ್ರಾಪ್ತರಯ, ಮಹಿಳೆಯರು ವಯಸ್ಕರು ಮಾತ್ರ ಪ್ರವೇಶಿಸಲು ಅನುಮತಿ ಇತ್ತು. ಆದರೆ ಸತತ ಪ್ರಯತ್ನದ ಫಲವಾಗಿ ರಿಯಾನಾ ಅವರು ಶಬರಿಮಲೆಗೆ ತೆರಳಲು ಅನುಮತಿ ಪಡೆದು ದರ್ಶನ ಪೂರ್ಣಗೊಳಿಸಿದ್ದಾರೆ.

ನನ್ನ ಮನೆಯವರು ಈ ವಿಚಾರವಾಗಿ ಚಿಂತಿಸಿದ್ದರು, ಜನವರಿ 4 ರಂದು ಬೆಳಗ್ಗೆ ನನ್ನ ಪ್ರಯಾಣ ಆರಂಭಿಸಿದೆ ಮತ್ತು ಜನವರಿ 5 ರಂದು ಸಂಜೆ ದರ್ಶನ ಮಾಡಿದೆ. ನಾನು ಸುರಕ್ಷಿತವಾಗಿದ್ದು ಮನೆಗೆ ಮರಳುತ್ತಿದ್ದೇನೆ ಎಂದು ಕರೆ ಮಾಡಿ ತಿಳಿಸಿದ್ದಾಗಿ ಹೇಳಿದ್ದಾರೆ.

ಮತ್ತಷ್ಟು ಓದಿ: ಅಯ್ಯಪ್ಪ ವ್ರತಧಾರಿಗಳಿಗೆ ಮಸೀದಿಯಲ್ಲಿ ಪೂಜೆ ಮಾಡಲು, ತಂಗಲು ಅವಕಾಶ ಕೊಟ್ಟು ಭಾವೈಕ್ಯತೆ ಮೆರೆದ ಧರ್ಮಗುರು

ರಿಯಾನಾ ಮಹಿಳೆಯ ಬಟ್ಟೆ ತೊಟ್ಟಿದ್ದಕ್ಕಾಗಿ ಅಲ್ಲಿ ಭಕ್ತರು ಹಾಗೂ ಅರ್ಚಕರಿಂದ ನಿಂದನೆಗೆ ಒಳಗಾಗಬೇಕಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ತಾನು ಪುರುಷನಿಂದ ಹೆಣ್ಣಾಗಿ ಬದಲಾಗಿರುವವಳು, ಮಕ್ಕಳನ್ನು ಹೆರಲು ಸಾಧ್ಯವಿಲ್ಲ, ಹೀಗಾಗಿ ದರ್ಶನ ಪಡೆಯಬಹುದು ಎಂದು ವಿವರಿಸಿದ್ದಾರೆ. ಈ ದೇವಾಲಯ ಭೇಟಿಯು ತೃತೀಯಲಿಂಗಿ ಮಹಿಳೆಯರ ಹಕ್ಕುಗಳನ್ನು ಜನರಿಗೆ ತಿಳಿಸಲು ಅವಕಾಶ ಮಾಡಿಕೊಟ್ಟಿತು ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:11 am, Wed, 10 January 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ