AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಸಮುದಾಯ ಪ್ರಸರಣ ಹಂತ ತಲುಪಿದ ಒಮಿಕ್ರಾನ್​ ಸೋಂಕು; ಐಎನ್​​ಎಸ್​ಎಸಿಒಜಿ ಮಾಹಿತಿ

ಭಾರತದಲ್ಲಿ ಒಮಿಕ್ರಾನ್​ ಸಮುದಾಯ ಪ್ರಸರಣ ಆಗುತ್ತಿದೆ ಎಂಬುದನ್ನು ಈಗಾಗಲೇ ಹಲವು ರಾಜ್ಯಗಳು ಹೇಳಿದ್ದವು. ವಿದೇಶಿ ಪ್ರವಾಸದ ಹಿನ್ನೆಲೆ ಇಲ್ಲದವರು, ವಿದೇಶಕ್ಕೆ ಹೋಗಿಬಂದವರ ಸಂಪರ್ಕಕ್ಕೆ ಹೋಗದೆ ಇರುವವರಿಗೂ ಒಮಿಕ್ರಾನ್​ ತಗುಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದವು. 

ಭಾರತದಲ್ಲಿ ಸಮುದಾಯ ಪ್ರಸರಣ ಹಂತ ತಲುಪಿದ ಒಮಿಕ್ರಾನ್​ ಸೋಂಕು; ಐಎನ್​​ಎಸ್​ಎಸಿಒಜಿ ಮಾಹಿತಿ
ಸಾಂಕೇತಿಕ ಚಿತ್ರ​
TV9 Web
| Updated By: Lakshmi Hegde|

Updated on:Jan 23, 2022 | 2:47 PM

Share

ದೆಹಲಿ: ಒಮಿಕ್ರಾನ್​ ರೂಪಾಂತರದ ಹರಡುವಿಕೆ ಭಾರತದಲ್ಲಿ ಸಮುದಾಯ ಪ್ರಸರಣದ (Omicron Community Transmission) ಹಂತ ತಲುಪಿದೆ. ಅದರಲ್ಲೂ ವಿವಿಧ ಮೆಟ್ರೋ ನಗರಗಳಲ್ಲಿಯೇ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿದೆ. ಪ್ರತಿದಿನವೂ ಕೇಸ್​ಗಳ ಸಂಖ್ಯೆ ವೇಗವಾಗಿ ಬೆಳೆಯುತ್ತಿದೆ ಎಂದು ಭಾರತೀಯ ಸಾರ್ಸ್​-ಕೊವ್​-1 ಜಿನೋಮಿಕ್ಸ್ ಕನ್ಸೋರ್ಟಿಯಂ (INSACOG) ತಿಳಿಸಿದೆ. ಒಮಿಕ್ರಾನ್​ ರೂಪಾಂತರದ ಸಾಂಕ್ರಾಮಿಕ  ಉಪ-ರೂಪಾಂತರ ಬಿಎ .2 ಎಂಬ ವಂಶಾವಳಿ ಭಾರತದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಹೀಗಾಗಿ ಎಸ್​ ಜೀನ್​​ ಡ್ರಾಪ್​ಔಟ್​ ಆಧಾರಿತ ಸ್ಕ್ರೀನಿಂಗ್​ ಗಳು ಹೆಚ್ಚಿನ ತಪ್ಪು ನೆಗೆಟಿವ್​ ವರದಿ ಕೊಡುವ ಸಾಧ್ಯತೆಯಿದೆ ಎಂದು ಹೇಳಿದೆ. 

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಡಿಯಲ್ಲಿ ಬರುವ ಈ ಐಎನ್​​ಎಸ್​ಎಸಿಒಜಿ ಇಂದು ಲಘುಪ್ರಕಟಣೆ ಬಿಡುಗಡೆ ಮಾಡಿದ್ದು, ಸದ್ಯ ಬಹುತೇಕ ಒಮಿಕ್ರಾನ್ ಸೋಂಕಿತರಿಗೆ ಯಾವುದೇ ಲಕ್ಷಣಗಳು ಇಲ್ಲ ಅಥವಾ ಸೌಮ್ಯವಾದ ಲಕ್ಷಣಗಳಿವೆ. ಆದರೆ ನಿರ್ಲಕ್ಷಿಸುವಂತಿಲ್ಲ. ಕೊವಿಡ್​ 19 ಮೂರನೇ ಅಲೆಯಲ್ಲೂ ಕೂಡ ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಮತ್ತು ಐಸಿಯು ಚಿಕಿತ್ಸೆ ಪಡೆಯುವವರ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ.  ಅಪಾಯದ ಪ್ರಮಾಣ ಹೆಚ್ಚಲಿದೆ ಎಂದು ಎಚ್ಚರಿಕೆ ನೀಡಿದೆ. ಇತ್ತೀಚೆಗೆ ಫ್ರಾನ್ಸ್​​ನಲ್ಲಿ ಪತ್ತೆಯಾಗಲಿದೆ ಎಂದು ಹೇಳಲಾದ B.1.640.2 ತಳಿ ಇದುವರೆಗೂ ಭಾರತದಲ್ಲಿ ಕಂಡುಬಂದಿಲ್ಲ. ಹಾಗಾಗಿ ಆತಂಕ ಪಡುವ ಅಗತ್ಯವೂ ಸದ್ಯಕ್ಕೆ ಇಲ್ಲ ಎಂದೂ ಈ ಐಎನ್​​ಎಸ್​ಎಸಿಒಜಿ ತಿಳಿಸಿದೆ.

ಭಾರತದಲ್ಲಿ ಒಮಿಕ್ರಾನ್​ ಸಮುದಾಯ ಪ್ರಸರಣ ಆಗುತ್ತಿದೆ ಎಂಬುದನ್ನು ಈಗಾಗಲೇ ಹಲವು ರಾಜ್ಯಗಳು ಹೇಳಿದ್ದವು. ವಿದೇಶಿ ಪ್ರವಾಸದ ಹಿನ್ನೆಲೆ ಇಲ್ಲದವರು, ವಿದೇಶಕ್ಕೆ ಹೋಗಿಬಂದವರ ಸಂಪರ್ಕಕ್ಕೆ ಹೋಗದೆ ಇರುವವರಿಗೂ ಒಮಿಕ್ರಾನ್​ ತಗುಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದವು.  ಒಮಿಕ್ರಾನ್​ ವೈರಾಣು ಮೊದಲು ಪತ್ತೆಯಾಗಿದ್ದು ದಕ್ಷಿಣ ಆಫ್ರಿಕಾದಲ್ಲಿ. 2021ರ ನವೆಂಬರ್​ 24ರಂದು ಆ ದೇಶದಲ್ಲಿ ಪತ್ತೆಯಾದ ಒಮಿಕ್ರಾನ್​ ಇದೀಗ ಜಗತ್ತಿನ ಬಹುತೇಕ ದೇಶಗಳಲ್ಲಿ ಮತ್ತೊಮ್ಮೆ ಕೊರೊನಾ ಹೆಚ್ಚಲು ಕಾರಣವಾಗಿದೆ. ಅಷ್ಟೇ ಅಲ್ಲ, ಭಾರತದಲ್ಲಿಯೂ ಮೂರನೇ ಅಲೆ ಉಂಟಾಗಲು ಕಾರಣವಾಗಿದೆ. ದೇಶದಲ್ಲಿ ಮೊಟ್ಟಮೊದಲ ಒಮಿಕ್ರಾನ್​ ಪ್ರಕರಣ ಡಿಸೆಂಬರ್​​ನಲ್ಲಿ ಕಾಣಿಸಿಕೊಂಡಿತ್ತು. ಎರಡನೇ ಅಲೆಗೆ ಕಾರಣವಾಗಿದ್ದ ಡೆಲ್ಟಾ ವೈರಾಣುಗಿಂತಲೂ ಅತ್ಯಂತ ವೇಗವಾಗಿ ಒಮಿಕ್ರಾನ್​ ಹರಡುತ್ತಿದೆ. ಸದ್ಯ ದೇಶದಲ್ಲಿ 10,050 ಒಮಿಕ್ರಾನ್​ ಸೋಂಕಿತರು ಇದ್ದಾರೆ.

ಇದನ್ನೂ ಓದಿ: ನಿಮ್ಮ ಫೋನನ್ನು ಬೇರೆಯವರಿಗೆ ಕೊಡುವಾಗ ಹೀಗೆ ಮಾಡಿ: ಅವರೇನು ಮಾಡಿದ್ರು ಎಲ್ಲ ತಿಳಿಯುತ್ತೆ

Published On - 2:46 pm, Sun, 23 January 22

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ