AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಸಮುದಾಯ ಪ್ರಸರಣ ಹಂತ ತಲುಪಿದ ಒಮಿಕ್ರಾನ್​ ಸೋಂಕು; ಐಎನ್​​ಎಸ್​ಎಸಿಒಜಿ ಮಾಹಿತಿ

ಭಾರತದಲ್ಲಿ ಒಮಿಕ್ರಾನ್​ ಸಮುದಾಯ ಪ್ರಸರಣ ಆಗುತ್ತಿದೆ ಎಂಬುದನ್ನು ಈಗಾಗಲೇ ಹಲವು ರಾಜ್ಯಗಳು ಹೇಳಿದ್ದವು. ವಿದೇಶಿ ಪ್ರವಾಸದ ಹಿನ್ನೆಲೆ ಇಲ್ಲದವರು, ವಿದೇಶಕ್ಕೆ ಹೋಗಿಬಂದವರ ಸಂಪರ್ಕಕ್ಕೆ ಹೋಗದೆ ಇರುವವರಿಗೂ ಒಮಿಕ್ರಾನ್​ ತಗುಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದವು. 

ಭಾರತದಲ್ಲಿ ಸಮುದಾಯ ಪ್ರಸರಣ ಹಂತ ತಲುಪಿದ ಒಮಿಕ್ರಾನ್​ ಸೋಂಕು; ಐಎನ್​​ಎಸ್​ಎಸಿಒಜಿ ಮಾಹಿತಿ
ಸಾಂಕೇತಿಕ ಚಿತ್ರ​
TV9 Web
| Edited By: |

Updated on:Jan 23, 2022 | 2:47 PM

Share

ದೆಹಲಿ: ಒಮಿಕ್ರಾನ್​ ರೂಪಾಂತರದ ಹರಡುವಿಕೆ ಭಾರತದಲ್ಲಿ ಸಮುದಾಯ ಪ್ರಸರಣದ (Omicron Community Transmission) ಹಂತ ತಲುಪಿದೆ. ಅದರಲ್ಲೂ ವಿವಿಧ ಮೆಟ್ರೋ ನಗರಗಳಲ್ಲಿಯೇ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿದೆ. ಪ್ರತಿದಿನವೂ ಕೇಸ್​ಗಳ ಸಂಖ್ಯೆ ವೇಗವಾಗಿ ಬೆಳೆಯುತ್ತಿದೆ ಎಂದು ಭಾರತೀಯ ಸಾರ್ಸ್​-ಕೊವ್​-1 ಜಿನೋಮಿಕ್ಸ್ ಕನ್ಸೋರ್ಟಿಯಂ (INSACOG) ತಿಳಿಸಿದೆ. ಒಮಿಕ್ರಾನ್​ ರೂಪಾಂತರದ ಸಾಂಕ್ರಾಮಿಕ  ಉಪ-ರೂಪಾಂತರ ಬಿಎ .2 ಎಂಬ ವಂಶಾವಳಿ ಭಾರತದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಹೀಗಾಗಿ ಎಸ್​ ಜೀನ್​​ ಡ್ರಾಪ್​ಔಟ್​ ಆಧಾರಿತ ಸ್ಕ್ರೀನಿಂಗ್​ ಗಳು ಹೆಚ್ಚಿನ ತಪ್ಪು ನೆಗೆಟಿವ್​ ವರದಿ ಕೊಡುವ ಸಾಧ್ಯತೆಯಿದೆ ಎಂದು ಹೇಳಿದೆ. 

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಡಿಯಲ್ಲಿ ಬರುವ ಈ ಐಎನ್​​ಎಸ್​ಎಸಿಒಜಿ ಇಂದು ಲಘುಪ್ರಕಟಣೆ ಬಿಡುಗಡೆ ಮಾಡಿದ್ದು, ಸದ್ಯ ಬಹುತೇಕ ಒಮಿಕ್ರಾನ್ ಸೋಂಕಿತರಿಗೆ ಯಾವುದೇ ಲಕ್ಷಣಗಳು ಇಲ್ಲ ಅಥವಾ ಸೌಮ್ಯವಾದ ಲಕ್ಷಣಗಳಿವೆ. ಆದರೆ ನಿರ್ಲಕ್ಷಿಸುವಂತಿಲ್ಲ. ಕೊವಿಡ್​ 19 ಮೂರನೇ ಅಲೆಯಲ್ಲೂ ಕೂಡ ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಮತ್ತು ಐಸಿಯು ಚಿಕಿತ್ಸೆ ಪಡೆಯುವವರ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ.  ಅಪಾಯದ ಪ್ರಮಾಣ ಹೆಚ್ಚಲಿದೆ ಎಂದು ಎಚ್ಚರಿಕೆ ನೀಡಿದೆ. ಇತ್ತೀಚೆಗೆ ಫ್ರಾನ್ಸ್​​ನಲ್ಲಿ ಪತ್ತೆಯಾಗಲಿದೆ ಎಂದು ಹೇಳಲಾದ B.1.640.2 ತಳಿ ಇದುವರೆಗೂ ಭಾರತದಲ್ಲಿ ಕಂಡುಬಂದಿಲ್ಲ. ಹಾಗಾಗಿ ಆತಂಕ ಪಡುವ ಅಗತ್ಯವೂ ಸದ್ಯಕ್ಕೆ ಇಲ್ಲ ಎಂದೂ ಈ ಐಎನ್​​ಎಸ್​ಎಸಿಒಜಿ ತಿಳಿಸಿದೆ.

ಭಾರತದಲ್ಲಿ ಒಮಿಕ್ರಾನ್​ ಸಮುದಾಯ ಪ್ರಸರಣ ಆಗುತ್ತಿದೆ ಎಂಬುದನ್ನು ಈಗಾಗಲೇ ಹಲವು ರಾಜ್ಯಗಳು ಹೇಳಿದ್ದವು. ವಿದೇಶಿ ಪ್ರವಾಸದ ಹಿನ್ನೆಲೆ ಇಲ್ಲದವರು, ವಿದೇಶಕ್ಕೆ ಹೋಗಿಬಂದವರ ಸಂಪರ್ಕಕ್ಕೆ ಹೋಗದೆ ಇರುವವರಿಗೂ ಒಮಿಕ್ರಾನ್​ ತಗುಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದವು.  ಒಮಿಕ್ರಾನ್​ ವೈರಾಣು ಮೊದಲು ಪತ್ತೆಯಾಗಿದ್ದು ದಕ್ಷಿಣ ಆಫ್ರಿಕಾದಲ್ಲಿ. 2021ರ ನವೆಂಬರ್​ 24ರಂದು ಆ ದೇಶದಲ್ಲಿ ಪತ್ತೆಯಾದ ಒಮಿಕ್ರಾನ್​ ಇದೀಗ ಜಗತ್ತಿನ ಬಹುತೇಕ ದೇಶಗಳಲ್ಲಿ ಮತ್ತೊಮ್ಮೆ ಕೊರೊನಾ ಹೆಚ್ಚಲು ಕಾರಣವಾಗಿದೆ. ಅಷ್ಟೇ ಅಲ್ಲ, ಭಾರತದಲ್ಲಿಯೂ ಮೂರನೇ ಅಲೆ ಉಂಟಾಗಲು ಕಾರಣವಾಗಿದೆ. ದೇಶದಲ್ಲಿ ಮೊಟ್ಟಮೊದಲ ಒಮಿಕ್ರಾನ್​ ಪ್ರಕರಣ ಡಿಸೆಂಬರ್​​ನಲ್ಲಿ ಕಾಣಿಸಿಕೊಂಡಿತ್ತು. ಎರಡನೇ ಅಲೆಗೆ ಕಾರಣವಾಗಿದ್ದ ಡೆಲ್ಟಾ ವೈರಾಣುಗಿಂತಲೂ ಅತ್ಯಂತ ವೇಗವಾಗಿ ಒಮಿಕ್ರಾನ್​ ಹರಡುತ್ತಿದೆ. ಸದ್ಯ ದೇಶದಲ್ಲಿ 10,050 ಒಮಿಕ್ರಾನ್​ ಸೋಂಕಿತರು ಇದ್ದಾರೆ.

ಇದನ್ನೂ ಓದಿ: ನಿಮ್ಮ ಫೋನನ್ನು ಬೇರೆಯವರಿಗೆ ಕೊಡುವಾಗ ಹೀಗೆ ಮಾಡಿ: ಅವರೇನು ಮಾಡಿದ್ರು ಎಲ್ಲ ತಿಳಿಯುತ್ತೆ

Published On - 2:46 pm, Sun, 23 January 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ