AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ 5 ವರ್ಷದೊಳಗೆ ದೇಶದಲ್ಲಿ ರಸ್ತೆ ಅಪಘಾತ ಪ್ರಮಾಣ ಶೇ 50ರಷ್ಟು ತಗ್ಗಲಿದೆ: ನಿತಿನ್​ ಗಡ್ಕರಿ

ಭಾರತದಲ್ಲಿ ಪ್ರತಿನಿತ್ಯ ಸುಮಾರು 415 ಜನ ರಸ್ತೆ ಅಪಘಾತಗಳಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ತಡೆಗಟ್ಟಬೇಕಾದ ಸವಾಲು ನಮ್ಮ ಮುಂದಿದ್ದು ಸರ್ಕಾರ ಇದಕ್ಕಾಗಿ ಶ್ರಮಿಸಲಿದೆ.

ಮುಂದಿನ 5 ವರ್ಷದೊಳಗೆ ದೇಶದಲ್ಲಿ ರಸ್ತೆ ಅಪಘಾತ ಪ್ರಮಾಣ ಶೇ 50ರಷ್ಟು ತಗ್ಗಲಿದೆ: ನಿತಿನ್​ ಗಡ್ಕರಿ
ನಿತಿನ್​ ಗಡ್ಕರಿ
Skanda
| Edited By: |

Updated on: Jan 18, 2021 | 7:27 PM

Share

ದೆಹಲಿ: ದೇಶದಲ್ಲಿ 2025ರ ವೇಳೆಗೆ ರಸ್ತೆ ಅಪಘಾತ ಹಾಗೂ ಅಪಘಾತಗಳಿಂದ ಸಾವಿಗೀಡಾಗುವವರ ಪ್ರಮಾಣ ಶೇ 50ರಷ್ಟು ಕುಸಿಯಲಿದೆ ಎಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಭರವಸೆ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಪ್ರತಿನಿತ್ಯ ಸುಮಾರು 415 ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ತಡೆಗಟ್ಟಬೇಕಾದ ಸವಾಲು ನಮ್ಮ ಮುಂದಿದ್ದು ಸರ್ಕಾರ ಇದಕ್ಕಾಗಿ ಶ್ರಮಿಸಲಿದೆ ಎಂದು ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದ್ದಾರೆ.

ಕಳೆದ ಬಾರಿ ಸ್ವೀಡನ್​ನಲ್ಲಿ ಆಯೋಜಿಸಲಾಗಿದ್ದ ಸಮ್ಮೇಳನದಲ್ಲಿ 2030ರ ವೇಳೆಗೆ ಭಾರತದಲ್ಲಿ ರಸ್ತೆ ಅಪಘಾತಗಳಿಂದ ಯಾರೊಬ್ಬರೂ ಸಾಯದಂತೆ ನೋಡಿಕೊಳ್ಳುವ ಉದ್ದೇಶ ವ್ಯಕ್ತಪಡಿಸಲಾಗಿದೆ. ಅದರಂತೆ ನಾವು 2025ರೊಳಗೆ ಶೇ.50ರಷ್ಟು ರಸ್ತೆ ಅಪಘಾತ ಮತ್ತು ಅದರಿಂದಾಗುವ ಸಾವುಗಳನ್ನು ತಡೆಗಟ್ಟುವ ಬಗ್ಗೆ ಯೋಜನೆ ರೂಪಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವ ತಮಿಳುನಾಡು ಈಗಾಗಲೇ ರಸ್ತೆ ಅಪಘಾತದ ಪ್ರಮಾಣವನ್ನು ಶೇ 53ರಷ್ಟು ತಗ್ಗಿಸಿದೆ. ಅದು ನಮಗೆ ಮಾದರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ದೇಶಾದ್ಯಂತ ರಸ್ತೆಗಳಲ್ಲಿನ ಅತಿ ಹೆಚ್ಚು ಅಪಾಯಕಾರಿ ಸ್ಥಳಗಳನ್ನು ಪತ್ತೆಹಚ್ಚಿ ಅವುಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ₹ 14 ಸಾವಿರ ಕೋಟಿ ವ್ಯಯಿಸಲಿದೆ. ಇದಕ್ಕಾಗಿ ವಿಶ್ವ ಬ್ಯಾಂಕ್​ ಮತ್ತು ಏಷ್ಯನ್​ ಡೆವಲಪ್​ಮೆಂಟ್​ ಬ್ಯಾಂಕ್​ (ಎಡಿಬಿ) ತಲಾ ₹ 7 ಸಾವಿರ ಕೋಟಿ ವೆಚ್ಚದ ಎರಡು ಯೋಜನೆಗಳಿಗೆ ಒಪ್ಪಿಗೆ ಸೂಚಿಸಿವೆ. ಕೇಂದ್ರ ಹಣಕಾಸು ಸಚಿವಾಲಯದಿಂದಲೂ ಈ ಯೋಜನೆಗಳಿಗೆ ಶೀಘ್ರದಲ್ಲಿ ಅನುಮತಿ ಸಿಗುವ ನಿರೀಕ್ಷೆ ಇದೆ. ನಾವು ಈಗಾಗಲೇ ದಿನಕ್ಕೆ 30 ಕಿ.ಮೀ ರಸ್ತೆ ನಿರ್ಮಿಸುವ ಗುರಿ ತಲುಪಿದ್ದೇವೆ. ಮಾರ್ಚ್​ ಅಂತ್ಯದ ಒಳಗೆ ದಿನಕ್ಕೆ 40 ಕಿ.ಮೀನಷ್ಟು ರಸ್ತೆ ನಿರ್ಮಿಸುವ ಧ್ಯೇಯ ಸಾಕಾರಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ರಕ್ಷಣಾ ಸಚಿವ ರಾಜನಾಥ್​ ಸಿಂಗ್, ರಸ್ತೆ ಅಪಘಾತಗಳಿಂದಾಗುವ ಸಾವು ಕೇವಲ ಜೀವಗಳನ್ನಷ್ಟೇ ಬಲಿಪಡೆಯುವುದಿಲ್ಲ. ಪ್ರಾಣದ ಜೊತೆಗೆ ದೇಶದ ಆರ್ಥಿಕತೆಯ ಕುಸಿತಕ್ಕೂ ಕಾರಣವಾಗುತ್ತಿದೆ. ರಾಷ್ಟ್ರೀಯ ರಸ್ತೆ ಸುರಕ್ಷತಾ ಕಾರ್ಯಕ್ರಮಗಳು ಜನರ ಆತ್ಮವಿಶ್ವಾಸ ವೃದ್ಧಿಸುವ ಜೊತೆಗೆ, ಜಾಗೃತಿ ಮೂಡಿಸುವಲ್ಲಿಯೂ ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೈಕ್​ಗೆ ಹಿಂದಿನಿಂದ ಕಾರ್​ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

Follow Us
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ
'ಉಚಿತ ವಿದ್ಯುತ್' ಯೋಜನೆಗೆ ಸಹಿ ಹಾಕಿದ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್
'ಉಚಿತ ವಿದ್ಯುತ್' ಯೋಜನೆಗೆ ಸಹಿ ಹಾಕಿದ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್
Live: ಆರ್ಟ್ ಆಫ್ ಲಿವಿಂಗ್​ನಲ್ಲಿ ಪ್ರಧಾನಿ ಮೋದಿ ಭಾಷಣ, ನೇರ ಪ್ರಸಾರ
Live: ಆರ್ಟ್ ಆಫ್ ಲಿವಿಂಗ್​ನಲ್ಲಿ ಪ್ರಧಾನಿ ಮೋದಿ ಭಾಷಣ, ನೇರ ಪ್ರಸಾರ
ಮೋದಿಗೆ 13ಕೆಜಿ ತೂಕದ ಬೆಳ್ಳಿ ಪ್ರತಿಮೆ ನೀಡಿ ಸನ್ಮಾನಿಸಿದ ಬಿಜೆಪಿ ನಾಯಕರು
ಮೋದಿಗೆ 13ಕೆಜಿ ತೂಕದ ಬೆಳ್ಳಿ ಪ್ರತಿಮೆ ನೀಡಿ ಸನ್ಮಾನಿಸಿದ ಬಿಜೆಪಿ ನಾಯಕರು