AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಪಾಸ್​ಪೋರ್ಟ್​ನಲ್ಲಿ ಒಂದೇ ಹೆಸರಿದ್ದರೆ ಈ ದೇಶಕ್ಕೆ ಪ್ರಯಾಣಿಸುವಂತಿಲ್ಲ

ಪಾಸ್​ಪೋರ್ಟ್​ನಲ್ಲಿ ಪ್ರಯಾಣಿಕರ ಮೊದಲ ಮತ್ತು ಕೊನೆಯ ಹೆಸರುಗಳನ್ನು ಸ್ಪಷ್ಟವಾಗಿ ಘೋಷಿಸಿರಬೇಕು. ಮಧ್ಯದ ಹೆಸರು ಮಾತ್ರ ಇದ್ದರೆ ಯುಎಇಯಲ್ಲಿ ಅದಕ್ಕೆ ಮಾನ್ಯತೆಯಿಲ್ಲ.

ನಿಮ್ಮ ಪಾಸ್​ಪೋರ್ಟ್​ನಲ್ಲಿ ಒಂದೇ ಹೆಸರಿದ್ದರೆ ಈ ದೇಶಕ್ಕೆ ಪ್ರಯಾಣಿಸುವಂತಿಲ್ಲ
ಪಾಸ್‌ಪೋರ್ಟ್‌Image Credit source: NDTV
TV9 Web
| Edited By: |

Updated on: Nov 24, 2022 | 10:54 AM

Share

ನವದೆಹಲಿ: ಇನ್ನುಮುಂದೆ ನಿಮ್ಮ ಪಾಸ್​ಪೋರ್ಟ್​ನಲ್ಲಿ ಫಸ್ಟ್​ ನೇಮ್ (First Name) ಮತ್ತು ಲಾಸ್ಟ್​ ನೇಮ್ (Last Name) ಇಲ್ಲದೆ ಕೇವಲ ಒಂದೇ ಹೆಸರಿದ್ದರೆ ನೀವು ಯುಎಇ (United Arab Emirates)ಗೆ ವಿಮಾನದಲ್ಲಿ ಪ್ರಯಾಣ ಮಾಡುವಂತಿಲ್ಲ. ಪ್ರವಾಸಕ್ಕೆ ಅಥವಾ ಇತರ ಯಾವುದೇ ರೀತಿಯ ಭೇಟಿಗಾಗಿ ವೀಸಾದಲ್ಲಿ ಪ್ರಯಾಣಿಸುವವರ ಪಾಸ್‌ಪೋರ್ಟ್‌ನಲ್ಲಿ (Passport)  ಒಂದೇ ಹೆಸರಿದ್ದರೆ ಆ ಪ್ರಯಾಣಿಕರಿಗೆ ಯುಎಇಯಲ್ಲಿ ವಾಸ್ತವ್ಯ ಹೂಡಲು ಅನುಮತಿಯಿಲ್ಲ. ಕಳೆದ ಸೋಮವಾರದಿಂದಲೇ ಜಾರಿಗೆ ಬರುವಂತೆ ಈ ನಿಯಮ ಜಾರಿಗೆ ತರಲಾಗುತ್ತಿದೆ ಎಂದು ಯುನೈಟೆಡ್ ಅರಬ್ ಎಮಿರೇಟ್ಸ್ ಅಧಿಕಾರಿಗಳು ಇಂಡಿಗೋ ಏರ್‌ಲೈನ್ಸ್​ಗೆ ತಿಳಿಸಿದ್ದಾರೆ.

ಇದರರ್ಥವೇನೆಂದರೆ, ಪಾಸ್​ಪೋರ್ಟ್​ನಲ್ಲಿ ಪ್ರಯಾಣಿಕರ ಮೊದಲ ಮತ್ತು ಕೊನೆಯ ಹೆಸರುಗಳನ್ನು ಸ್ಪಷ್ಟವಾಗಿ ಘೋಷಿಸಿರಬೇಕು. ಮಧ್ಯದ ಹೆಸರು ಮಾತ್ರ ಇದ್ದರೆ ಯುಎಇಯಲ್ಲಿ ಅದಕ್ಕೆ ಮಾನ್ಯತೆಯಿಲ್ಲ.

ಇದನ್ನೂ ಓದಿ: ಕೇವಲ ಪಾಸ್​ಪೋರ್ಟ್​ ಇದ್ದರೆ ಸಾಕು, ವೀಸಾವಿಲ್ಲದೆ ಭಾರತದಿಂದ ಪ್ರಯಾಣಿಸಬಹುದಾದ ದೇಶಗಳಿವು

ಯುಎಇ ಅಧಿಕಾರಿಗಳ ಸೂಚನೆಗಳ ಪ್ರಕಾರ, ನವೆಂಬರ್ 21ರಿಂದ ಜಾರಿಗೆ ಬರುವಂತೆ ಪ್ರವಾಸಿ, ವಿಸಿಟಿಂಗ್ ಅಥವಾ ಇತರ ಯಾವುದೇ ರೀತಿಯ ವೀಸಾದಡಿ ಪ್ರಯಾಣಿಸುವವರು ತಮ್ಮ ಪಾಸ್‌ಪೋರ್ಟ್‌ಗಳಲ್ಲಿ ಒಂದೇ ಹೆಸರನ್ನು ಹೊಂದಿದ್ದರೆ ಆ ಪ್ರಯಾಣಿಕರಿಗೆ ಯುಎಇಗೆ ಪ್ರಯಾಣಿಸಲು ಅನುಮತಿ ನೀಡಲಾಗುವುದಿಲ್ಲ. ಹೀಗಾಗಿ, ಪಾಸ್​ಪೋರ್ಟ್​ನಲ್ಲಿ ಆ ರೀತಿಯ ದೋಷ ಇರುವವರು ಕೂಡಲೆ ಅದನ್ನು ಸರಿಪಡಿಸಬೇಕು.

ಹೆಚ್ಚಿನ ವಿವರಗಳಿಗಾಗಿ ತಮ್ಮ ಖಾತೆ ವ್ಯವಸ್ಥಾಪಕರನ್ನು ಸಂಪರ್ಕಿಸಲು ಅಥವಾ ಅವರ ವೆಬ್‌ಸೈಟ್ goindigo.comಗೆ ಭೇಟಿ ನೀಡುವಂತೆ ವಿಮಾನಯಾನ ಸಂಸ್ಥೆಯು ಸೂಚಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್