AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಪಾಸ್​ಪೋರ್ಟ್​ನಲ್ಲಿ ಒಂದೇ ಹೆಸರಿದ್ದರೆ ಈ ದೇಶಕ್ಕೆ ಪ್ರಯಾಣಿಸುವಂತಿಲ್ಲ

ಪಾಸ್​ಪೋರ್ಟ್​ನಲ್ಲಿ ಪ್ರಯಾಣಿಕರ ಮೊದಲ ಮತ್ತು ಕೊನೆಯ ಹೆಸರುಗಳನ್ನು ಸ್ಪಷ್ಟವಾಗಿ ಘೋಷಿಸಿರಬೇಕು. ಮಧ್ಯದ ಹೆಸರು ಮಾತ್ರ ಇದ್ದರೆ ಯುಎಇಯಲ್ಲಿ ಅದಕ್ಕೆ ಮಾನ್ಯತೆಯಿಲ್ಲ.

ನಿಮ್ಮ ಪಾಸ್​ಪೋರ್ಟ್​ನಲ್ಲಿ ಒಂದೇ ಹೆಸರಿದ್ದರೆ ಈ ದೇಶಕ್ಕೆ ಪ್ರಯಾಣಿಸುವಂತಿಲ್ಲ
ಪಾಸ್‌ಪೋರ್ಟ್‌Image Credit source: NDTV
TV9 Web
| Updated By: ಸುಷ್ಮಾ ಚಕ್ರೆ|

Updated on: Nov 24, 2022 | 10:54 AM

Share

ನವದೆಹಲಿ: ಇನ್ನುಮುಂದೆ ನಿಮ್ಮ ಪಾಸ್​ಪೋರ್ಟ್​ನಲ್ಲಿ ಫಸ್ಟ್​ ನೇಮ್ (First Name) ಮತ್ತು ಲಾಸ್ಟ್​ ನೇಮ್ (Last Name) ಇಲ್ಲದೆ ಕೇವಲ ಒಂದೇ ಹೆಸರಿದ್ದರೆ ನೀವು ಯುಎಇ (United Arab Emirates)ಗೆ ವಿಮಾನದಲ್ಲಿ ಪ್ರಯಾಣ ಮಾಡುವಂತಿಲ್ಲ. ಪ್ರವಾಸಕ್ಕೆ ಅಥವಾ ಇತರ ಯಾವುದೇ ರೀತಿಯ ಭೇಟಿಗಾಗಿ ವೀಸಾದಲ್ಲಿ ಪ್ರಯಾಣಿಸುವವರ ಪಾಸ್‌ಪೋರ್ಟ್‌ನಲ್ಲಿ (Passport)  ಒಂದೇ ಹೆಸರಿದ್ದರೆ ಆ ಪ್ರಯಾಣಿಕರಿಗೆ ಯುಎಇಯಲ್ಲಿ ವಾಸ್ತವ್ಯ ಹೂಡಲು ಅನುಮತಿಯಿಲ್ಲ. ಕಳೆದ ಸೋಮವಾರದಿಂದಲೇ ಜಾರಿಗೆ ಬರುವಂತೆ ಈ ನಿಯಮ ಜಾರಿಗೆ ತರಲಾಗುತ್ತಿದೆ ಎಂದು ಯುನೈಟೆಡ್ ಅರಬ್ ಎಮಿರೇಟ್ಸ್ ಅಧಿಕಾರಿಗಳು ಇಂಡಿಗೋ ಏರ್‌ಲೈನ್ಸ್​ಗೆ ತಿಳಿಸಿದ್ದಾರೆ.

ಇದರರ್ಥವೇನೆಂದರೆ, ಪಾಸ್​ಪೋರ್ಟ್​ನಲ್ಲಿ ಪ್ರಯಾಣಿಕರ ಮೊದಲ ಮತ್ತು ಕೊನೆಯ ಹೆಸರುಗಳನ್ನು ಸ್ಪಷ್ಟವಾಗಿ ಘೋಷಿಸಿರಬೇಕು. ಮಧ್ಯದ ಹೆಸರು ಮಾತ್ರ ಇದ್ದರೆ ಯುಎಇಯಲ್ಲಿ ಅದಕ್ಕೆ ಮಾನ್ಯತೆಯಿಲ್ಲ.

ಇದನ್ನೂ ಓದಿ: ಕೇವಲ ಪಾಸ್​ಪೋರ್ಟ್​ ಇದ್ದರೆ ಸಾಕು, ವೀಸಾವಿಲ್ಲದೆ ಭಾರತದಿಂದ ಪ್ರಯಾಣಿಸಬಹುದಾದ ದೇಶಗಳಿವು

ಯುಎಇ ಅಧಿಕಾರಿಗಳ ಸೂಚನೆಗಳ ಪ್ರಕಾರ, ನವೆಂಬರ್ 21ರಿಂದ ಜಾರಿಗೆ ಬರುವಂತೆ ಪ್ರವಾಸಿ, ವಿಸಿಟಿಂಗ್ ಅಥವಾ ಇತರ ಯಾವುದೇ ರೀತಿಯ ವೀಸಾದಡಿ ಪ್ರಯಾಣಿಸುವವರು ತಮ್ಮ ಪಾಸ್‌ಪೋರ್ಟ್‌ಗಳಲ್ಲಿ ಒಂದೇ ಹೆಸರನ್ನು ಹೊಂದಿದ್ದರೆ ಆ ಪ್ರಯಾಣಿಕರಿಗೆ ಯುಎಇಗೆ ಪ್ರಯಾಣಿಸಲು ಅನುಮತಿ ನೀಡಲಾಗುವುದಿಲ್ಲ. ಹೀಗಾಗಿ, ಪಾಸ್​ಪೋರ್ಟ್​ನಲ್ಲಿ ಆ ರೀತಿಯ ದೋಷ ಇರುವವರು ಕೂಡಲೆ ಅದನ್ನು ಸರಿಪಡಿಸಬೇಕು.

ಹೆಚ್ಚಿನ ವಿವರಗಳಿಗಾಗಿ ತಮ್ಮ ಖಾತೆ ವ್ಯವಸ್ಥಾಪಕರನ್ನು ಸಂಪರ್ಕಿಸಲು ಅಥವಾ ಅವರ ವೆಬ್‌ಸೈಟ್ goindigo.comಗೆ ಭೇಟಿ ನೀಡುವಂತೆ ವಿಮಾನಯಾನ ಸಂಸ್ಥೆಯು ಸೂಚಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?