Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಕರನ್ನು ಕೊರೊನಾ ಫ್ರಂಟ್​ಲೈನ್​ ವಾರಿಯರ್ಸ್​ ಎಂದು ಪರಿಗಣಿಸಿ, ವಿಮಾ ಸೌಲಭ್ಯ ನೀಡಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

Corona Frontline Warriors: ಕೊವಿಡ್​ ಸಂದರ್ಭದಲ್ಲಿ ಕಾರ್ಯೋನ್ಮುಖರಾಗಿದ್ದು ತೊಂದರೆಗೆ ಒಳಪಡುವ ಶಿಕ್ಷಕರಿಗೆ ಶೀಘ್ರವೇ ಸೂಕ್ತ ವಿಮೆ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು. ಇತರೆ ಕೊರೊನಾ ವಾರಿಯರ್ಸ್​ಗೆ ಸಿಗುವಂತೆಯೇ ಎಲ್ಲಾ ಸೌಲಭ್ಯಗಳು ಯಾವುದೇ ತಾರತಮ್ಯವಿಲ್ಲದೇ ದೊರಕಬೇಕು. ಕೊರೊನಾದಿಂದ ಮೃತರಾಗುವ ಶಿಕ್ಷಕರಿಗೂ ಪರಿಹಾರ ದೊರಕಿಸಿಕೊಡಬೇಕು.

ಶಿಕ್ಷಕರನ್ನು ಕೊರೊನಾ ಫ್ರಂಟ್​ಲೈನ್​ ವಾರಿಯರ್ಸ್​ ಎಂದು ಪರಿಗಣಿಸಿ, ವಿಮಾ ಸೌಲಭ್ಯ ನೀಡಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ
Follow us
TV9 Web
| Updated By: Skanda

Updated on:Jun 19, 2021 | 4:12 PM

ದೆಹಲಿ: ಕೊವಿಡ್​ ಕರ್ತವ್ಯದಲ್ಲಿ ನಿರತರಾಗಿರುವ ಶಿಕ್ಷಕರನ್ನು ಕೊರೊನಾ ಫ್ರಂಟ್​ಲೈನ್​ ವಾರಿಯರ್ಸ್​ ಎಂದು ಪರಿಗಣಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಇಂದು (ಜೂನ್ 19) ಎಲ್ಲಾ ರಾಜ್ಯ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. ಅಲ್ಲದೇ, ಕೊವಿಡ್​ ಸಂದರ್ಭದಲ್ಲಿ ಕಾರ್ಯೋನ್ಮುಖರಾಗಿದ್ದು ತೊಂದರೆಗೆ ಒಳಪಡುವ ಶಿಕ್ಷಕರಿಗೆ ಶೀಘ್ರವೇ ಸೂಕ್ತ ವಿಮೆ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು. ಇತರೆ ಕೊರೊನಾ ವಾರಿಯರ್ಸ್​ಗೆ ಸಿಗುವಂತೆಯೇ ಎಲ್ಲಾ ಸೌಲಭ್ಯಗಳು ಯಾವುದೇ ತಾರತಮ್ಯವಿಲ್ಲದೇ ದೊರಕಬೇಕು. ಕೊರೊನಾದಿಂದ ಮೃತರಾಗುವ ಶಿಕ್ಷಕರಿಗೂ ಪರಿಹಾರ ದೊರಕಿಸಿಕೊಡಬೇಕು ಎಂದು ಆಯೋಗ ಸೂಚನೆ ನೀಡಿದೆ.

ಈ ಬಗ್ಗೆ ಮಾನವ ಹಕ್ಕುಗಳ ಹೋರಾಟಗಾರ ಹಾಗೂ ಸರ್ವೋಚ್ಛ ನ್ಯಾಯಾಲಯದ ವಕೀಲ ರಾಧಾಕೃಷ್ಣ ತ್ರಿಪಾಠಿ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ಆಯೋಗ, ಸದರಿ ನಿರ್ದೇಶನವನ್ನು ನೀಡಿದೆ. ಒಡಿಶಾದ ಗಂಜಮ್​ ಜಿಲ್ಲೆಯಲ್ಲಿ ಕೊವಿಡ್​ ಕರ್ತವ್ಯ ನಿರತ ಶಿಕ್ಷಕ ಸಿಮಂಚಲ್​ ಸತ್ಪತಿ ಎನ್ನುವವರು ಜುಲೈ 3, 2020ರಲ್ಲಿ ಮೃತಪಟ್ಟಿದ್ದು, ಇಲ್ಲಿಯ ತನಕ ಅವರ ಕುಟುಂಬಕ್ಕೆ ಯಾವುದೇ ಪರಿಹಾರ ಲಭಿಸಿಲ್ಲ. ಶಿಕ್ಷಕ ಸಿಮಂಚಲ್​ ಸತ್ಪತಿ (27 ವರ್ಷ) ನಿಧನ ನಂತರ ಅವರ ತಂದೆ ರಾಜ್​ಕಿಶೋರ್ ಸತ್ಪತಿ ಹಾಗೂ ತಾಯಿ ಸುಲೋಚನಾ ಸತ್ಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ದೇಶದಲ್ಲಿ ಇಂತಹ ಹಲವು ಘಟನೆಗಳಿವೆ ಎಂದು ಉದಾಹರಣೆ ನೀಡಿದ ಅರ್ಜಿದಾರರು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದ್ದರು.

ದೇಶದ ವಿವಿಧೆಡೆ ಈ ತೆರನಾದ ಹಲವು ದುರ್ಘಟನೆಗಳು ನಡೆದಿವೆ. ಅಲ್ಲದೇ, ಬೇರೆ ಬೇರೆ ಕಡೆ ನಡೆದ ಚುನಾವಣೆಗಳಲ್ಲೂ ಶಿಕ್ಷಕರನ್ನು ಕರ್ತವ್ಯಕ್ಕೆ ಬಳಸಿಕೊಳ್ಳಲಾಗಿತ್ತು. ಉತ್ತರ ಪ್ರದೇಶವೊಂದರಲ್ಲೇ ಪಂಚಾಯತಿ ಚುನಾವಣೆ ಸಂದರ್ಭ ನೂರಾರು ಶಿಕ್ಷಕರು ಸೋಂಕಿಗೆ ತುತ್ತಾಗಿ ಕಷ್ಟ ಅನುಭವಿಸಿದರು. ಮೇಲಾಗಿ, ಶಿಕ್ಷಕರಿಗೆ ಬೋಧನೆಯ ಹೊರತಾಗಿ ಸಾಕಷ್ಟು ಜವಾಬ್ದಾರಿ ನೀಡುವುದರಿಂದ ಅವರು ಮನೆಮನೆಗೆ ತೆರಳಿ ಕರ್ತವ್ಯ ನಿರ್ವಹಿಸುವ ಸ್ಥಿತಿಯೂ ಇದೆ. ಕೊರೊನಾ ಸಂದರ್ಭದಲ್ಲಿ ಶಿಕ್ಷಕರು ಅಪಾಯದ ಸುಳಿಯಲ್ಲೇ ಸಿಲುಕಿಕೊಂಡಿದ್ದಾರೆ. ಹೀಗಾಗಿ ಅವರನ್ನು ಕೊರೊನಾ ಫ್ರಂಟ್​ ಲೈನ್ ವಾರಿಯರ್ಸ್​ ಎಂದು ಪರಿಗಣಿಸಬೇಕು ಎಂದು ಮಾನವ ಹಕ್ಕುಗಳ ಆಯೋಗವನ್ನು ಒತ್ತಾಯಿಸಿದ್ದರು.

ಯುನೆಸ್ಕೋ ಹಾಗೂ ಕೆಲ ರಾಜ್ಯಗಳ ಸಾಂವಿಧಾನಿಕ ಸಂಸ್ಥೆಗಳು ಶಿಕ್ಷಕರನ್ನು ಆದ್ಯತೆಯ ಮೇರೆಗೆ ಗುರುತಿಸಿವೆ. ಆದರೆ, ಇದು ಎಲ್ಲಾ ಶಿಕ್ಷಕರಿಗೂ ಅನ್ವಯಿಸಬೇಕು. ಅವರಿಗೆ ವೈದ್ಯಕೀಯ ಸೌಲಭ್ಯಗಳು ಸಿಗಬೇಕು. ಹೆಚ್ಚಿನ ಕಡೆಗಳಲ್ಲಿ ಶಿಕ್ಷಕ ವೃತ್ತಿಯಲ್ಲಿರುವವರೇ ಇಡೀ ಮನೆಗೆ ಆಧಾರವಾಗಿರುತ್ತಾರೆ. ಆದ್ದರಿಂದ ಅವರಿಗೆ ಎಲ್ಲಾ ರೀತಿಯ ಸುರಕ್ಷತೆಗಳನ್ನು ಒದಗಿಸುವ ಅವಶ್ಯಕತೆ ಇದೆ ಎಂದು ಅರ್ಜಿಯಲ್ಲಿ ತಿಳಿಸಿದ್ದರು. ಇದನ್ನು ಮೌಲ್ಯಯುತ ವಿಚಾರ ಎಂದು ಪರಿಗಣಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಕೊವಿಡ್​ ಕರ್ತವ್ಯದಲ್ಲಿ ನಿರತರಾಗಿರುವ ಶಿಕ್ಷಕರನ್ನು ಕೊರೊನಾ ಫ್ರಂಟ್​ಲೈನ್​ ವಾರಿಯರ್ಸ್​ ಎಂದು ಪರಿಗಣಿಸಲು ಎಲ್ಲಾ ರಾಜ್ಯ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. ಅಲ್ಲದೇ, ತೊಂದರೆಗೀಡಾಗಿರುವ ಶಿಕ್ಷಕರು ದೂರು ನೀಡಿದ ಎಂಟು ವಾರಗಳೊಳಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆಯೂ ತಿಳಿಸಿದೆ.

ಇದನ್ನೂ ಓದಿ: ಕೊರೊನಾ 3ನೇ ಅಲೆ; ಮಕ್ಕಳಿಗಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಆರೋಗ್ಯ ಇಲಾಖೆ 

ಶಿಕ್ಷಕರನ್ನು ಫ್ರಂಟ್ ಲೈನ್ ಕೊರೊನಾ ವಾರಿಯರ್ಸ್ ಆಗಿ ಘೋಷಿಸಿ ವಿಮಾ ಸೌಲಭ್ಯ ಒದಗಿಸಲು ಆಗ್ರಹ

Published On - 4:11 pm, Sat, 19 June 21

ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ