AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಡಪ್ಪಾ ಬೇಡ ಜೇನುತುಪ್ಪ..! ಈ ಪ್ರತಿಷ್ಠಿತ ಕಂಪನಿಗಳ ‘ಪ್ಯೂರ್ ಹನಿ’ ನೀವು ಬಳಸುತ್ತಿದ್ದರೆ ಎಚ್ಚರ ಎಚ್ಚರಾ!

ಭಾರತೀಯರು ಜೇನುತುಪ್ಪವನ್ನು ಅನೇಕ ಕಾರಣಕ್ಕೆ ಹೆಚ್ಚಾಗಿ ಬಳಸುತ್ತಾರೆ. ಅದರಲ್ಲೂ ಹೆಚ್ಚಾಗಿ ಆರೋಗ್ಯಕ್ಕಾಗಿಯೇ ಉಪಯೋಗಿಸುತ್ತಾರೆ. ಆದರೆ ಈಗ ಸಿಎಸ್​ಇ ನೀಡಿದ ಈ ವರದಿ ಆತಂಕ ಹುಟ್ಟಿಸುವಂತಿದೆ.

ಬೇಡಪ್ಪಾ ಬೇಡ ಜೇನುತುಪ್ಪ..! ಈ ಪ್ರತಿಷ್ಠಿತ ಕಂಪನಿಗಳ ‘ಪ್ಯೂರ್ ಹನಿ’ ನೀವು ಬಳಸುತ್ತಿದ್ದರೆ ಎಚ್ಚರ ಎಚ್ಚರಾ!
ಜೇನುತುಪ್ಪ (ಸಾಂದರ್ಭಿಕ ಚಿತ್ರ)
Lakshmi Hegde
|

Updated on:Dec 02, 2020 | 5:53 PM

Share

ದೆಹಲಿ: ಇದೂ ಒಂಥರಾ ಹನಿಟ್ರ್ಯಾಪ್! ಯಾಕಂದ್ರೆ ಜೇನುತುಪ್ಪ ಅಂದರೆ ಸಾಕು ಎಲ್ಲರಿಗೂ ಇಷ್ಟವೇ!  ಎಲ್ಲರೂ ಜೇನುತುಪ್ಪದ ಮೋಹದ ಬಲೆಗೆ ಬೀಳುವವರೇ! ಬರಿ ಬಾಯಿರುಚಿಗಷ್ಟೇ ಅಲ್ಲದೆ, ವೈದ್ಯಕೀಯ ಕಾರಣಕ್ಕೂ ವ್ಯಾಪಕವಾಗಿ ಬಳಕೆಯಾಗುತ್ತದೆ.

ಇಷ್ಟೊಂದು ಮಹತ್ವ ಹೊಂದಿರುವ ಈ ಸಿಹಿಯಾದ ಜೇನುತುಪ್ಪದ ಬಗ್ಗೆ ಇದೀಗ ಆತಂಕಕಾರಿ ಕಹಿ ವಿಚಾರವೊಂದು ಹೊರಬಿದ್ದಿದೆ. ಹಲವು ಪ್ರತಿಷ್ಠಿತ ಕಂಪನಿಗಳು ಮಾರಾಟ ಮಾಡುತ್ತಿರುವ ಜೇನುತುಪ್ಪದಲ್ಲಿ ಅಪಾರ ಪ್ರಮಾಣದ ಕಲಬೆರಕೆಯಿದೆ ಎಂದು ಲ್ಯಾಬ್​ ಟೆಸ್ಟ್​ ವರದಿ ಬಹಿರಂಗಪಡಿಸಿದೆ.

ರಸ್ತೆ ಬದಿಯಲ್ಲೋ.. ಲೇಬಲ್​ ಇಲ್ಲದ ಬಾಕ್ಸ್​ಗಳಲ್ಲೋ ಸಿಗುವ ಜೇನುತುಪ್ಪ ಶುದ್ಧವಾಗಿ ಇರುವುದಿಲ್ಲ ಎಂಬುದು ಅನೇಕರ ನಂಬಿಕೆ. ಅದು ಹೌದಾಗಿರಬಹುದು. ಆದರೆ ಬ್ರ್ಯಾಂಡೆಡ್​ ಕಂಪನಿಗಳಾದ ಡಾಬರ್​, ಪತಂಜಲಿ, ಆಪಿಸ್​ ಹಿಮಾಲಯನ್, ಬೈದ್ಯನಾಥ್ ಜೇನುತುಪ್ಪ, ಹಿಟ್ಕಾರಿ, ಝಂಡು ಪ್ಯೂರ್​ ಜೇನುತುಪ್ಪವೂ ಶುದ್ಧವಿಲ್ಲವಂತೆ. ಈ ಎಲ್ಲದರಲ್ಲೂ ಅಪಾರ ಕಲಬೆರಕೆ ಇರುವುದು ಜರ್ಮನ್​ ಲ್ಯಾಬ್​ ಟೆಸ್ಟ್​ನಲ್ಲಿ ಪತ್ತೆಯಾಗಿದ್ದು, ಆರೋಗ್ಯಕ್ಕೆ ಈ ಜೇನುತುಪ್ಪ ಸುರಕ್ಷಿತವಲ್ಲ ಎಂದು ವಿಜ್ಞಾನ ಮತ್ತು ಪರಿಸರ ಕೇಂದ್ರ ಹೇಳಿದೆ.

ಸಕ್ಕರೆಪಾಕ ಕಲಬೆರಕೆ! ಭಾರತದ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ಪ್ರತಿಷ್ಠಿತ ಕಂಪನಿಗಳ ಜೇನುತುಪ್ಪದಲ್ಲಿ ಸಕ್ಕರೆ ಪಾಕ ಇರುವುದು ಪತ್ತೆಯಾಗಿದೆ. ಜರ್ಮನ್​ ಮತ್ತು ಭಾರತದ ಪ್ರಯೋಗಾಲಯದಲ್ಲಿ ನಡೆದ ಜೇನುತುಪ್ಪ ಪರಿಶೀಲನೆಯ ವರದಿಯ ತನಿಖೆ ನಡೆಸಿದಾಗ ಭಾರತದ ಬಹುತೇಕ ಕಂಪನಿಗಳ ಜೇನುತುಪ್ಪದಲ್ಲಿ ಸಕ್ಕರೆ ಪಾಕದ ಅಂಶ ಇರುವುದು ಗೊತ್ತಾಗಿದೆ.

ಶೇ. 77ರಷ್ಟು ಮಾದರಿಯಲ್ಲಿ ಸಕ್ಕರೆ ಪಾಕ ಕಾಣಿಸಿಕೊಂಡಿದೆ. ಒಟ್ಟು 13 ಬ್ರ್ಯಾಂಡ್​ಗಳಲ್ಲಿ ಮೂರು ಮಾತ್ರ ಅಂತರರಾಷ್ಟ್ರೀಯ ಮಟ್ಟದಲ್ಲಿ ಅಂಗೀಕರಿಸಲ್ಪಟ್ಟ ನ್ಯೂಕ್ಲಿಯರ್ ಮ್ಯಾಗ್ನೆಟಿಕ್ ರೆಸೋನೆನ್ಸ್ ಸ್ಪೆಕ್ಟ್ರೋಸ್ಕೋಪಿ ಟೆಸ್ಟ್​ನಲ್ಲಿ ಉತ್ತೀರ್ಣವಾಗಿವೆ ಎಂದು ವಿಜ್ಞಾನ ಮತ್ತು ಪರಿಸರ ಕೇಂದ್ರದ ಮಹಾನಿರ್ದೇಶಕರಾದ ಸುನೀತಾ ನಾರಾಯಣ್​ ತಿಳಿಸಿದ್ದಾರೆ.

ಚೀನಾದ್ದಂತೂ ಬೇಡ್ವೇ ಬೇಡ ಭಾರತದಲ್ಲಿ ಚಾಲ್ತಿಯಲ್ಲಿರುವ ಲ್ಯಾಬ್​ ಟೆಸ್ಟ್​ನಲ್ಲಿ ಜೇನುತುಪ್ಪದ ಶುದ್ಧತೆಯನ್ನು ಅಳೆಯಲು ಸಾಧ್ಯವಿಲ್ಲ. ಹಾಗಾಗಿ ಚೀನಾ ಕಂಪನಿಗಳು ಇಲ್ಲಿನ ಮಾನದಂಡ ಮಟ್ಟ ಮೀರಲು ಸಕ್ಕರೆ ಪಾಕವನ್ನು ಕಲಬೆರಕೆ ಮಾಡುತ್ತಿದ್ದಾರೆ ಎಂದು ಸಿಎಸ್​ಇ ತಿಳಿಸಿದೆ.

ಕೊವಿಡ್​ ಸೋಂಕಿನ ಛಾಯೆಯೂ ಇದೆ ಎಚ್ಚರಾ! ಭಾರತೀಯರು ಜೇನುತುಪ್ಪವನ್ನು ಅನೇಕ ಕಾರಣಕ್ಕೆ ಬಳಸುತ್ತಾರೆ. ಪೂಜೆಯಲ್ಲೂ ಹೆಚ್ಚಿನ ಮಹತ್ವ ಇದೆ.  ಅದರಲ್ಲೂ ಹೆಚ್ಚಾಗಿ ಆರೋಗ್ಯಕ್ಕಾಗಿಯೇ ಉಪಯೋಗಿಸುತ್ತಾರೆ. ಇಂಥ ಒಳ್ಳೊಳ್ಳೆ ಕಂಪನಿಗಳ ಮೇಲೆ ನಂಬಿಕೆಯಿಟ್ಟಿದ್ದಾರೆ. ಆದರೆ ಹೀಗೆ ನಿರಂತರವಾಗಿ ಕಲಬೆರಕೆ ಜೇನುತುಪ್ಪ ಸೇವನೆ ಅತ್ಯಂತ ಅಪಾಯಕಾರಿ ಎಂದೂ ವರದಿಯಲ್ಲಿ ಉಲ್ಲೇಖಿಸಿದೆ. ಸಕ್ಕರೆ ಅಂಶವಿರುವ ಜೇನುತುಪ್ಪ ದೇಹಕ್ಕೆ ಹೋದರೆ, ತೂಕ ಹೆಚ್ಚಾಗುವುದು, ಬೊಜ್ಜಿನಂತಹ ಸಮಸ್ಯೆ ಬರುತ್ತದೆ. ರೋಗನಿರೋಧಕ ಶಕ್ತಿ ಕುಂದುವ ಮೂಲಕ ಕೊವಿಡ್​ ಸೋಂಕಿಗೆ ಬಹುಬೇಗನೇ ಒಳಗಾಗುವ ಸಾಧ್ಯತೆ ಇರುತ್ತದೆ ಎಂದು ಹೇಳಿದೆ.

ಮಲೇರಿಯಾ ವಿರುದ್ಧ ಭಾರತದ ಪ್ರಬಲ ಹೋರಾಟ; ಸಾವಿನ ಸಂಖ್ಯೆ ಇಳಿಮುಖ

Published On - 5:30 pm, Wed, 2 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ