AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛಾಯ್ ಚಾಯ್​! ಈ ಯುವಕ ಸ್ವಪ್ರಯತ್ನದಿಂದ ಹೊಸ ಕಲ್ಪನೆಯನ್ನು ಹೀಗೆ ಸಾಕಾರಗೊಳಿಸಿದ್ದಾನೆ

ಹಳೆಯ ಟ್ರಾಲಿ ಆಟೋವನ್ನು ಟೀ ಕಪ್‌ನ ಆಕಾರದಲ್ಲಿ ಮೊಬೈಲ್ ಟೀ ಸ್ಟಾಲ್ ಆಗಿ ಮಾಡಿಕೊಂಡಿದ್ದಾನೆ. ಇದನ್ನು ಖಮ್ಮಮ್ ಜಿಲ್ಲೆಯಲ್ಲಿ ಇದನ್ನು ಸ್ಥಾಪಿಸಲಾಗಿದೆ. ಸಂದೀಪ್ ಟೀ ಸ್ಟಾಲ್ ಗೆ ಹಲೋ ಚಾಯ್ ಎಂದು ಹೆಸರಿಟ್ಟಿದ್ದಾರೆ.

ಸಾಧು ಶ್ರೀನಾಥ್​
|

Updated on: Feb 09, 2024 | 11:45 AM

Share

ಖಮ್ಮಮ್, ಫೆಬ್ರವರಿ 9: ಈ ಹಿಂದೆ ಕೆಲ ಯುವಕರು ದುಬಾರಿ ಕಾರುಗಳಲ್ಲಿ ಓಡಾಡಿ ತರಕಾರಿ, ಫಾಸ್ಟ್ ಫುಡ್ ಬ್ಯುಸಿನೆಸ್ ಮಾಡುತ್ತಿರುವ ಸುದ್ದಿಯನ್ನು ನೋಡಿದ್ದೇವೆ..ಅಂತೆಯೇ ಇದೀಗ ತೆಲಂಗಾಣದಲ್ಲೂ ಯುವಕನೊಬ್ಬ (Khammam youth) ವಿನೂತನ ವ್ಯಾಪಾರ ಜೀವನ ಆರಂಭಿಸಿದ್ದಾನೆ. ಉನ್ನತ ವಿದ್ಯಾಭ್ಯಾಸ ಮುಗಿಸಿಯೂ ಕೆಲಸ ಸಿಗದೆ ನಿರಾಸೆ ಅನುಭವಿಸಿದ ಈತ ತನ್ನ ಸ್ವಂತ ಬುದ್ದಿವಂತಿಕೆ ಬಳಸಿ ಯಾರೂ ನಿರೀಕ್ಷಿಸದ ರೀತಿಯಲ್ಲಿ ಸ್ವಂತ ಉದ್ಯಮ ಆರಂಭಿಸಿದ್ದಾನೆ. ಸಣ್ಣಪುಟ್ಟ ಕೆಲಸ ಮಾಡುತ್ತಾ… ಕಷ್ಟಪಟ್ಟು ದುಡಿಯುತ್ತಾ… ಹೀಗೆ ದಿನದೂಡುತ್ತಿದ್ದಾನೆ… ಬದುಕು ತುಂಬಾ ಚೆನ್ನಾಗಿದೆ ಎಂದು ಸ್ವಯಂಕೃಷಿ ಮಾಲೀಕ ಹೆಮ್ಮೆಯಿಂದ ಹೇಳಿಕೊಳ್ಳುತ್ತಾನೆ. ಹಾಗಾದ್ರೆ ಆತ ಎಂತಹ ಬ್ಯುಸಿನೆಸ್ ಶುರು ಮಾಡಿದ್ದಾನೆ ಅಂತ ಗೊತ್ತಾದ್ರೆ ನೀವೂ ಆಶ್ಚರ್ಯ ಪಡುತ್ತೀರಿ. ಸಂಪೂರ್ಣ ವಿವರಗಳಿಗೆ ಹೋದರೆ… ಹೌದು ಆ ಯುವಕ ಸರಿಯಾದ ದಿಕ್ಕಿನಲ್ಲಿ ಚಿಂತನಶೀಲನಾಗಿದ್ದಾನೆ. ಖಮ್ಮಮ್ ಜಿಲ್ಲೆಯ ಕೊಣಿಜರ್ಲ ಮಂಡಲದ ತನಿಕೇಳ್ಳ ಎಂಬುವರಿಗೆ ಸೇರಿದ ಸಂದೀಪ್ ಎಂಬ ಯುವಕ ಹೊಸ ಆಲೋಚನೆಯೊಂದಿಗೆ ಹೊಸ ಜೀವನಕ್ಕೆ ನಾಂದಿ ಹಾಡಿದ್ದಾನೆ. ಸಂದೀಪ್ ಹಳೆಯ ಟ್ರಾಲಿ ಆಟೋ ಖರೀದಿಸಿದ. ಅದನ್ನು ಮೊಬೈಲ್ ಟೀ ಸ್ಟಾಲ್ ಆಗಿ (Mobile Tea Stall in Auto) ಪರಿವರ್ತಿಸಿದ.

ಹಳೆಯ ಟ್ರಾಲಿ ಆಟೋವನ್ನು ಟೀ ಕಪ್‌ನ ಆಕಾರದಲ್ಲಿ ಮೊಬೈಲ್ ಟೀ ಸ್ಟಾಲ್ ಆಗಿ ಮಾಡಿಕೊಂಡಿದ್ದಾನೆ. ಇದನ್ನು ಖಮ್ಮಮ್ ಜಿಲ್ಲೆಯಲ್ಲಿ ಇದನ್ನು ಸ್ಥಾಪಿಸಲಾಗಿದೆ. ಸಂದೀಪ್ ಟೀ ಸ್ಟಾಲ್ ಗೆ ಹಲೋ ಚಾಯ್ ಎಂದು ಹೆಸರಿಟ್ಟಿದ್ದಾರೆ. ನಗರದ ಪ್ರಮುಖ ಕೇಂದ್ರಗಳಲ್ಲಿ ಈ ಸಂಚಾರಿ ಟೀ ಸ್ಟಾಲ್ ನಡೆಸುವ ಮೂಲಕ ಎಲ್ಲರನ್ನೂ ಆಕರ್ಷಿಸುತ್ತಿದ್ದಾರೆ.

ಈ ಮೊಬೈಲ್ ಟೀ ಸ್ಟಾಲ್ ಮಾಡಲು ಅಂದಾಜು 2.5 ಲಕ್ಷ ರೂ. ಖರ್ಚು ಮಾಡಿದ್ದಾನೆ. ಕೆಲಸ ಸಿಗಲಿಲ್ಲ ಎಂದು ತಾನು ಯಾರನ್ನೂ ದೂರುತ್ತಿಲ್ಲ ಎಂದಿರುವ ಸಂದೀಪ್, ಯಾರ ಮೇಲೂ ಅವಲಂಬಿತರಾಗದೆ ತಮ್ಮದೇ ಆದ ಆಲೋಚನೆಗಳಿಂದ ಈ ಮೊಬೈಲ್ ಟೀ ಸ್ಟಾಲ್ ಸ್ಥಾಪಿಸಿರುವುದಾಗಿ ತಿಳಿಸಿದರು. ಸಂದೀಪ್ ಈ ಕಾರ್ಯಾಲೋಚನೆ ಇತರೆ ಯುವಕರನ್ನು ಪ್ರೋತ್ಸಾಹಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ