ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿ: ಅಶ್ವಿನಿ ವೈಷ್ಣವ್

ಜಮ್ಮುವಿನ ರಿಯಾಸಿ ಜಿಲ್ಲೆಯಿಂದ ಕಾಶ್ಮೀರಕ್ಕೆ ರೈಲು ಮಾರ್ಗದ ಮೂಲಕ ಸಂಪರ್ಕ ಕಲ್ಪಿಸುವ ಸಂಗಲ್ದನ್‌ನಿಂದ ರಿಯಾಸಿ(sangaldan-reasi) ನಡುವಿನ ಮೊದಲ ಪ್ರಾಯೋಗಿಕ ರೈಲು ಸಂಚಾರ ಚೆನಾಬ್ ಸೇತುವೆಯನ್ನು ದಾಟುವುದರೊಂದಿಗೆ ಯಶಸ್ವಿಯಾಗಿ ಸಂಚರಿಸಿದೆ. ಈ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್(Ashwini Vaishnaw) ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿ: ಅಶ್ವಿನಿ ವೈಷ್ಣವ್
ಸಂಗಲ್ದಾನ್‌ನಿಂದ ರಿಯಾಸಿಗೆ ನಡೆಸಿದ ಮೊದಲನೇ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿ
Follow us
|

Updated on: Jun 16, 2024 | 8:53 PM

ನವದೆಹಲಿ, ಜೂ.16: ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿಯಾಗಿದೆ. ಜಮ್ಮುವಿನ ರಿಯಾಸಿ ಜಿಲ್ಲೆಯಿಂದ ಕಾಶ್ಮೀರಕ್ಕೆ ರೈಲು ಮಾರ್ಗದ ಮೂಲಕ ಸಂಪರ್ಕ ಕಲ್ಪಿಸುವ ಸಂಗಲ್ದನ್‌ನಿಂದ ರಿಯಾಸಿ (sangaldan-reasi) ನಡುವಿನ ಮೊದಲ ಪ್ರಾಯೋಗಿಕ ರೈಲು ಸಂಚಾರ, ಚೆನಾಬ್ ಸೇತುವೆಯನ್ನು ದಾಟುವುದರೊಂದಿಗೆ ಯಶಸ್ವಿಯಾಗಿ ಸಂಚರಿಸಿದೆ. ಇನ್ನು ಈ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್(Ashwini Vaishnaw) ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಸಂಗಲ್ದನ್‌ನಿಂದ ರಿಯಾಸಿ ನಡುವಿನ ಮೊದಲ ಪ್ರಾಯೋಗಿಕ ರೈಲು ಸಂಚಾರ ಚೆನಾಬ್ ಸೇತುವೆಯನ್ನು ದಾಟುವುದರೊಂದಿಗೆ ಯಶಸ್ವಿಯಾಗಿ ಸಂಚರಿಸಿದೆ. USBRL(Udhampur-Srinagar-Baramulla Rail link) ಗಾಗಿ ಎಲ್ಲಾ ನಿರ್ಮಾಣ ಕಾರ್ಯಗಳು ಬಹುತೇಕ ಪೂರ್ಣಗೊಂಡಿವೆ. ಆದರೆ, ಸುರಂಗ ಸಂಖ್ಯೆ 1 ಮಾತ್ರ ಭಾಗಶಃ ಅಪೂರ್ಣವಾಗಿ ಉಳಿದಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:Amarnath Yatra: ಜೂನ್ ಅಂತ್ಯದಿಂದ ಅಮರನಾಥ ಯಾತ್ರೆ ಆರಂಭ; ಜಮ್ಮು ರೈಲು ನಿಲ್ದಾಣದಲ್ಲಿ ಭದ್ರತೆ ಹೆಚ್ಚಳ

ಕಳೆದ ತಿಂಗಳು ಉತ್ತರ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಶೋಭನ್ ಚೌಧುರಿ ಅವರು ಮೋಟಾರು ಟ್ರಾಲಿ ಮೂಲಕ ಸಂಗಲ್ದಾನ್ ನಿಲ್ದಾಣದವರೆಗಿನ ಚೆನಾಬ್ ಸೇತುವೆಯನ್ನು ಪರಿಶೀಲಿಸಿದ್ದರು. ಚೆನಾಬ್‌ನ ಮೇಲಿನ ವಿಶ್ವದ ಅತಿ ಎತ್ತರದ ರೈಲು ಸೇತುವೆ ಇದಾಗಿದ್ದು, ಪ್ಯಾರಿಸ್‌ನ ಐಕಾನಿಕ್ ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರದಲ್ಲಿರುವ, ನದಿಪಾತ್ರದ ಮೇಲೆ 359 ಮೀಟರ್‌ಗಳಷ್ಟು ಎತ್ತರದಲ್ಲಿರುವ 1.3 ಕಿಮೀ ಉದ್ದದ ರೈಲು ಸೇತುವೆ ಇದು. ಇನ್ನು ಉಧಮ್‌ಪುರ-ಶ್ರೀನಗರ- ಬಾರಾಮುಲ್ಲಾ ರೈಲು ಸಂಪರ್ಕವನ್ನು ವರ್ಷಾಂತ್ಯದೊಳಗೆ ಪೂರ್ಣಗೊಳಿಸುವ ನಿರೀಕ್ಷೆಯಲ್ಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್