AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕನಿಗಾಗಿ ಇಬ್ಬರು ವಿವಾಹಿತ ಮಹಿಳೆಯರ ಜಗಳ; ನಂತರ ಆಗಿದ್ದೇನು?

ಆಂಧ್ರ ಪ್ರದೇಶದಲ್ಲಿ ಒಬ್ಬ ವ್ಯಕ್ತಿಗಾಗಿ ಇಬ್ಬರು ಮಹಿಳೆಯರು ಪೈಪೋಟಿ ನಡೆಸಿದ್ದಾರೆ. ಒಬ್ಬ ಹುಡುಗಿಗಾಗಿ ಇಬ್ಬರು ಹುಡುಗರು ಜಗಳವಾಡುವುದು ಸಾಮಾನ್ಯ. ಇಂತಹ ಅನೇಕ ಘಟನೆಗಳನ್ನು ನಾವು ನೋಡುತ್ತಿರುತ್ತೇವೆ. ಆದರೆ ಇಬ್ಬರು ಮಹಿಳೆಯರು ಒಬ್ಬ ಯುವಕನಿಗಾಗಿ ಜಗಳವಾಡಿರುವ ಅಪರೂಪದ ಘಟನೆ ನಡೆದಿದೆ. ಈ ಘಟನೆ ಆಂಧ್ರದ ಒಂಗೋಲ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಒಬ್ಬ ಯುವಕನ ಮೇಲೆ ಕ್ರಶ್ ಆಗಿದ್ದ ಇಬ್ಬರು ಮಹಿಳೆಯರು ಅವನಿಗಾಗಿ ಜಗಳವಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಯುವಕನಿಗಾಗಿ ಇಬ್ಬರು ವಿವಾಹಿತ ಮಹಿಳೆಯರ ಜಗಳ; ನಂತರ ಆಗಿದ್ದೇನು?
Triangle Love Story
ಸುಷ್ಮಾ ಚಕ್ರೆ
|

Updated on:Oct 27, 2025 | 3:42 PM

Share

ಹೈದರಾಬಾದ್, ಅಕ್ಟೋಬರ್ 27: ಪ್ರೀತಿ ಕುರುಡು ಅಂತಾರೆ. ಅದು ಬಹುತೇಕ ಪ್ರಕರಣಗಳಲ್ಲಿ ನಿಜವೂ ಆಗಿದೆ. ಯುವಕನೊಬ್ಬನ ಮೇಲೆ ಕ್ರಶ್ ಹೊಂದಿದ್ದ ಇಬ್ಬರು ಮಹಿಳೆಯರು ಆತನಿಗಾಗಿ ಜಗಳವಾಡಿದ್ದಾರೆ. ಒಂಗೋಲ್‌ನಲ್ಲಿ ಅಡುಗೆ ಕೆಲಸ ಮಾಡುವ ಇಬ್ಬರು ಮಹಿಳೆಯರು ಸ್ನೇಹಿತರಾಗಿದ್ದರು. ಇಬ್ಬರೂ ವಿವಾಹಿತರಾಗಿದ್ದರು. ಅವರಿಬ್ಬರೂ ತಮ್ಮ ಜೊತೆ ಕೆಲಸ ಮಾಡುತ್ತಿದ್ದ ಯುವಕನೊಂದಿಗೆ ವಿವಾಹೇತರ ಸಂಬಂಧ (Extra Marital Affair) ಹೊಂದಿದ್ದು, ಇಬ್ಬರೂ ಈ ವಿಷಯ ಯಾರಿಗೂ ಗೊತ್ತಿಲ್ಲ ಎಂಬಂತೆ ಸಾಮಾನ್ಯವಾಗಿಯೇ ಬದುಕುತ್ತಿದ್ದರು.

ಆದರೆ, ಇತ್ತೀಚೆಗೆ ಇಬ್ಬರು ಮಹಿಳೆಯರ ನಡುವೆ ಆ ಯುವಕನಿಗಾಗಿ ಜಗಳಗಳು ಪ್ರಾರಂಭವಾದವು. ಈ ಕಾರಣದಿಂದಾಗಿ ಯುವಕ ಅವರಲ್ಲಿ ಓರ್ವ ಮಹಿಳೆಯಿಂದ ದೂರವಾದನು. ಇದಾದ ನಂತರ ಜಗಳ ನಡೆದು, ಆಕೆ ಈ ವಿಷಯದಲ್ಲಿ ಕೇಸ್ ದಾಖಲಿಸಿದಳು. ಪೊಲೀಸರು ಈ ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಅಳಿಯನ ಜೊತೆ ಅಕ್ರಮ ಸಂಬಂಧ ಆರೋಪ: ಮಹಿಳೆ ಮೇಲೆ ಕುಟುಂಬಸ್ಥರಿಂದಲೇ ಅಮಾನವೀಯ ಕೃತ್ಯ

ಪೊಲೀಸರ ಪ್ರಕಾರ, ಒಂಗೋಲ್‌ನ ಚಂದ್ರಾಯ ನಗರದಲ್ಲಿ ವಾಸಿಸುವ ಸ್ನೇಹಿತರಾದ ಇಬ್ಬರು ಮಹಿಳೆಯರು ಅಡುಗೆ ಕೆಲಸಗಾರರಾಗಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಅಲ್ಲಿ ಕೆಲಸ ಮಾಡುವ ಯುವಕನ ಮೇಲೆ ಮೋಹಗೊಂಡು ಅವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು. ಆದರೆ, ಕಳೆದ ಕೆಲವು ದಿನಗಳಿಂದ ಈ ಲೈಂಗಿಕ ಸಂಬಂಧದಿಂದಾಗಿ ಇಬ್ಬರು ಮಹಿಳೆಯರ ನಡುವೆ ಜಗಳ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 25ರಂದು ಅವರಲ್ಲಿ ಒಬ್ಬಳನ್ನು ಅಪಹರಿಸಿ, ಆಕೆಯನ್ನು ಹಿಂಸಿಸಿ, ಬಟ್ಟೆಗಳನ್ನು ಬಿಚ್ಚಿ, ಹಲ್ಲೆ ನಡೆಸಲಾಗಿತ್ತು. ಇದನ್ನು ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿತ್ತು. ಅದು ವೈರಲ್ ಆಗಿತ್ತು.

ಇದಾದ ನಂತರ ಆ ಮಹಿಳೆ ತನ್ನ ಸ್ನೇಹಿತನ ಸಹಾಯದಿಂದ ತಪ್ಪಿಸಿಕೊಂಡು, ಹಿರಿಯ ಪೊಲೀಸ್ ಅಧಿಕಾರಿಯನ್ನು ಭೇಟಿಯಾಗಿ ನಡೆದ ಘಟನೆ ತಿಳಿಸಿದ್ದಾಳೆ. ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:41 pm, Mon, 27 October 25

Follow Us
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!