AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಡಕಟ್ಟು ನಮ್ಮ ಸಮಾಜದ ಮೂಲ, ಅವರ ಕಲೆ, ಸಂಸ್ಕೃತಿ, ಉಡುಪುಗಳಿಗೆ ಅದರದೇ ಆದ ವೈಶಿಷ್ಟ್ಯವಿದೆ: ಧರ್ಮೇಂದ್ರ ಪ್ರಧಾನ್

ಬುಡಕಟ್ಟು ನಮ್ಮ ಸಮಾಜದ ಮೂಲವಾಗಿದೆ, ಕಲೆ, ಸಂಸ್ಕೃತಿ, ಆಚಾರ, ವಿಚಾರ, ನೃತ್ಯ ಸಂಗೀತ, ಹಾಡು, ಉಡುಗೆ, ತೊಡುಗೆಯಲ್ಲಿ ಈ ಸಮಾಜ ತನ್ನದೇ ಆದ ವೈಶಿಷ್ಟ್ಯ ಹೊಂದಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ನಾಲ್ಕೋ ನಗರದಲ್ಲಿ ನಡೆದ ‘ಪರಿಚಯ: ರಾಷ್ಟ್ರೀಯ ಜನಜಾತಿ ಮಹೋತ್ಸವ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬುಡಕಟ್ಟು ನಮ್ಮ ಸಮಾಜದ ಮೂಲ, ಅವರ ಕಲೆ, ಸಂಸ್ಕೃತಿ, ಉಡುಪುಗಳಿಗೆ ಅದರದೇ ಆದ ವೈಶಿಷ್ಟ್ಯವಿದೆ: ಧರ್ಮೇಂದ್ರ ಪ್ರಧಾನ್
ಧರ್ಮೇಂದ್ರ ಪ್ರಧಾನ್
ನಯನಾ ರಾಜೀವ್
|

Updated on:Aug 19, 2023 | 9:43 AM

Share

“ಬುಡಕಟ್ಟು ನಮ್ಮ ಸಮಾಜದ ಮೂಲವಾಗಿದೆ, ಕಲೆ, ಸಂಸ್ಕೃತಿ, ಆಚಾರ, ವಿಚಾರ, ನೃತ್ಯ ಸಂಗೀತ, ಹಾಡು, ಉಡುಗೆ, ತೊಡುಗೆಯಲ್ಲಿ ಈ ಸಮಾಜ ತನ್ನದೇ ಆದ ವೈಶಿಷ್ಟ್ಯ ಹೊಂದಿದೆ” ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್(Dharmendra Pradhan) ಹೇಳಿದ್ದಾರೆ. ನಾಲ್ಕೋ ನಗರದಲ್ಲಿ ನಡೆದ ‘ಪರಿಚಯ: ರಾಷ್ಟ್ರೀಯ ಜನಜಾತಿ ಮಹೋತ್ಸವ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಒಡಿಶಾದಲ್ಲಿ 62 ಬುಡಕಟ್ಟು ಜನಾಂಗಗಳಿವೆ, 21 ವಿವಿಧ ಭಾಷೆಗಳು ಹಾಗೂ 74 ಉಪಭಾಷೆಗಳನ್ನು ಹೊಂದಿರುವ ವಿಶಿಷ್ಟ ರಾಜ್ಯವಾಗಿದೆ. ಒಡಿಶಾದಲ್ಲಿ ಪ್ರಸ್ತುತ 7 ಬುಡಕಟ್ಟು ಲಿಪಿಗಳು ಕೂಡ ಇವೆ. ಬುಡಕಟ್ಟು ಜನರು ಸರಳ ಹಾಗೂ ಸ್ವಚ್ಛ ಮನಸ್ಸಿನವರು, ಒಡಿಶಾದ ಹೆಮ್ಮೆಯ ಪುತ್ರಿ ದ್ರೌಪದಿ ಮುರ್ಮು ಈಗ ಭಾರತದ ರಾಷ್ಟ್ರಪತಿಯಾಗಿದ್ದಾರೆ.

ಬುಡಕಟ್ಟು ನಾಯಕತ್ವಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡುವಲ್ಲಿ ಮೋದಿ ಸರ್ಕಾರವು ಪ್ರಮುಖ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿದರು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಮೋದಿ ಸರ್ಕಾರ ಏಕಲವ್ಯ ವಿದ್ಯಾಲಯಗಳನ್ನು ಸ್ಥಾಪಿಸಿದೆ. ಈಗ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ‘ಜಂಜಾತಿ ಗೌರವ್ ದಿವಸ್’ ಎಂದು ಆಚರಿಸಲಾಗುತ್ತಿದೆ ಎಂದು ಪ್ರಧಾನ್ ಹೇಳಿದರು.

ಸಾಂಪ್ರದಾಯಿಕ ಕುಶಲಕರ್ಮಿಗಳು, ಕರಕುಶಲ ಮತ್ತು ಇತರ ಕಲಾವಿದರನ್ನು ಬೆಂಬಲಿಸಲು ಪ್ರಧಾನ ಮಂತ್ರಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಹೊಸ ಯೋಜನೆಯನ್ನು ತಂದಿದ್ದಾರೆ ಎಂದು ಅವರು ಹೇಳಿದರು. ಈ ಯೋಜನೆಯಿಂದ ಬುಡಕಟ್ಟು ಸಮಾಜವೂ ಪ್ರಯೋಜನ ಪಡೆಯಲಿದೆ.

ಮತ್ತಷ್ಟು ಓದಿ: ಹಾಸನದ ಎಸ್ಪಿ ಕಚೇರಿಯಲ್ಲಿ ಧ್ವಜಾರೋಹಣ ಮಾಡಿದ ಬುಡಕಟ್ಟು ಜನಾಂಗದ ಬಾಲಕಿ ಈ ಸಂದರ್ಭದಲ್ಲಿ ಆದಿವಾಸಿಗಳು ಡೊಳ್ಳು ಬಾರಿಸುವ, ಕುಣಿತ, ಗಾಯನದ ನಡುವೆ ಸಚಿವರಿಗೆ ಭವ್ಯ ಸ್ವಾಗತ ಕೋರಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:25 am, Sat, 19 August 23

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ