AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೃತ ಮಹೋತ್ಸವ ವಿಶೇಷ: ಸುಭಾಷ್ ಚಂದ್ರ ಬೋಸ್​ರಿಗೆ ಗೌರವ ಸಲ್ಲಿಸಲೆಂದು ಕದಂ ಕದಂ ಬಢಾಯೆ ಜಾ ಹಾಡಲಿದ್ದಾರೆ ವಿದ್ಯಾರ್ಥಿಗಳು

#Netaji125 ನೇತಾಜಿ ಸುಭಾಷ್ ಚಂದ್ರ ಬೋಸ್ ಗೌರವಾರ್ಥ ದೇಶಾದ್ಯಂತ ಹಲವು ಕಾರ್ಯಕ್ರಮಗಳು ನಡೆಯಲಿವೆ.

ಅಮೃತ ಮಹೋತ್ಸವ ವಿಶೇಷ: ಸುಭಾಷ್ ಚಂದ್ರ ಬೋಸ್​ರಿಗೆ ಗೌರವ ಸಲ್ಲಿಸಲೆಂದು ಕದಂ ಕದಂ ಬಢಾಯೆ ಜಾ ಹಾಡಲಿದ್ದಾರೆ ವಿದ್ಯಾರ್ಥಿಗಳು
ಜರ್ಮನಿಯ ಯುದ್ಧಕೈದಿ ಶಿಬಿರದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ (ಚಿತ್ರ: ಮೇಜರ್ ಅಬೀದ್ ಹಸನ್)
TV9 Web
| Edited By: |

Updated on: Oct 20, 2021 | 9:07 PM

Share

ದೆಹಲಿ: ನೇತಾಜಿ ಸುಭಾಷ್ ಚಂದ್ರಬೋಸ್​ ಜನ್ಮದಿನದ ಹಿನ್ನೆಲೆಯಲ್ಲಿ ಗುರುವಾರ (ಅ.21) ದೇಶಾದ್ಯಂತ ಶಾಲೆಗಳಲ್ಲಿ ಮಕ್ಕಳು ಪ್ರಾರ್ಥನೆಯ ವೇಳೆ ಕದಂ ಕದಂ ಬಢಾಯೆ ಜಾ ಹಾಡಲಿದ್ದಾರೆ. ಇದು ಸುಭಾಷ್ ಚಂದ್ರಬೋಸ್ ಅವರ 125ನೇ ಜನ್ಮದಿನವೂ ಹೌದು. ಈ ಹಿನ್ನೆಲೆಯಲ್ಲಿ #Netaji125 ನೇತಾಜಿ ಗೌರವಾರ್ಥ ಹಲವು ಕಾರ್ಯಕ್ರಮಗಳು ನಡೆಯಲಿವೆ. ಸ್ವಾತಂತ್ರ್ಯ ಹೋರಾಟದ ಪ್ರಮುಖ ಘಟ್ಟಗಳನ್ನು ಮಕ್ಕಳಿಗೆ ತಿಳಿಸಿಕೊಡುವ ಉದ್ದೇಶವನ್ನೂ ನೇತಾಜಿ ಅಭಿಯಾನ ಹೊಂದಿದೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಇಂಡಿಯನ್ ನ್ಯಾಷನಲ್ ಆರ್ಮಿ (ಐಎನ್​ಎ) ಬಗ್ಗೆ ಹಲವು ಕಾರ್ಯಕ್ರಮಗಳೂ ಶಾಲೆಗಳಲ್ಲಿ ನಡೆಯಲಿವೆ. ನೇತಾಜಿ ರಸಪ್ರಶ್ನೆ, ‘ನೇತಾಜಿ ಕನಸಿನ ಭಾರತ’ ವಿಡಿಯೊ ಸ್ಪರ್ಧೆ ಮತ್ತು ‘ನೇತಾಜಿ-ನನ್ನ ಸ್ಫೂರ್ತಿ’ ಪ್ರಬಂಧ ಸ್ಪರ್ಧೆಗಳು ನಡೆಯಲಿವೆ.

ನೇತಾಜಿ 125ನೇ ಜನ್ಮದಿನದ ಪ್ರಯುಕ್ತ ಇಡೀ ವರ್ಷ ಹಲವು ಚಟುವಟಿಕೆಗಳು ನಡೆಯಲಿವೆ. ಜನವರಿ 23, 2021ರಂದು ಆರಂಭವಾಗಿರುವ ಈ ಕಾರ್ಯಕ್ರಮಗಳು ಜನವರಿ 23, 2022ರವರೆಗೂ ನಡೆಯಲಿವೆ. ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗವು (ಯುಜಿಸಿ) ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಗೆ ಆನ್​ಲೈನ್ ಉಪನ್ಯಾಸ, ವೆಬಿನಾರ್, ಸೈಕ್ಲಾಥಾನ್, ಯೋಗಾಥಾನ್, ಚಿತ್ರಕಲತೆ, ಪೋಸ್ಟರ್​ ತಯಾರಿಕೆ ಸ್ಪರ್ಧೆಗಳನ್ನು ಆಯೋಜಿಸುವಂತೆ ಸೂಚಿಸಿದೆ.

ದೇಶದ ಮೇಲೆ ಇರುವ ನೇತಾಜಿ ಅವರ ಎಂದಿಗೂ ಮಾಸದ ಪ್ರಭಾವ ಮತ್ತು ದೇಶಕ್ಕೆ ಅವರ ನಿಸ್ವಾರ್ಥ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು 23ನೇ ಜನವರಿ 2021ರಿಂದ 23ನೇ ಜನವರಿ 2022ರವರೆಗೆ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸಬಹುದು. ಕೊವಿಡ್ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಶಿಷ್ಟಾಚಾರಗಳನ್ನು ಪಾಲಿಸಬೇಕು ಎಂದು ಯುಜಿಸಿ ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು ಮತ್ತು ಕಾಲೇಜು ಪ್ರಾಂಶುಪಾಲರಿಗೆ ತಿಳಿಸಿದೆ.

ಇದನ್ನೂ ಓದಿ: ನೇತಾಜಿ ಸುಭಾಷ್ ಚಂದ್ರ ಬೋಸ್ 125ನೇ ಜನ್ಮದಿನಾಚರಣೆ ಸ್ಮರಣಾರ್ಥ ಜನವರಿ 23ನ್ನು ಪರಾಕ್ರಮ್ ದಿವಸ್ ಎಂದು ಘೋಷಿಸಿದ ಸರ್ಕಾರ ಇದನ್ನೂ ಓದಿ: ಸುಭಾಷ್​ ಚಂದ್ರ ಬೋಸ್​ ಪುಣ್ಯತಿಥಿ ಎಂಬ ಕಾಂಗ್ರೆಸ್​ ಟ್ವೀಟ್​ಗೆ ಟಿಎಂಸಿ ಆಕ್ಷೇಪ; ಭಾವನೆಗಳೊಂದಿಗೆ ಆಟ ಬೇಡ ಎಂದು ಪ್ರತಿಕ್ರಿಯೆ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?