AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai 26/11 ಮುಂಬೈ ಮೇಲೆ ಉಗ್ರರ ದಾಳಿಗೆ 12 ವರ್ಷ: ದೇಶಕ್ಕಾಗಿ ಜೀವ ತೆತ್ತ ಹುತಾತ್ಮರಿಗೆ ಗೌರವ

ನವೆಂಬರ್ 26, 2008ರಂದು ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾ ಉಗ್ರರು ಸಮುದ್ರ ಮಾರ್ಗದಲ್ಲಿ ಬಂದು ಮುಂಬೈನಲ್ಲಿ ದಾಳಿ ನಡೆಸಿದ್ದರು. ಈ ಭಯಾನಕ ದಾಳಿಯಲ್ಲಿ 18 ಭದ್ರತಾ ಸಿಬ್ಬಂದಿ ಸೇರಿ 166 ಮಂದಿ ಮೃತಪಟ್ಟಿದ್ದರು.

Mumbai 26/11 ಮುಂಬೈ ಮೇಲೆ ಉಗ್ರರ ದಾಳಿಗೆ 12 ವರ್ಷ: ದೇಶಕ್ಕಾಗಿ ಜೀವ ತೆತ್ತ ಹುತಾತ್ಮರಿಗೆ ಗೌರವ
ಮುಂಬೈ ತಾಜ್ ಹೋಟೆಲ್ ಮೇಲೆ ಉಗ್ರರ ದಾಳಿ (ಸಂಗ್ರಹ ಚಿತ್ರ)
Lakshmi Hegde
| Edited By: |

Updated on:Nov 26, 2020 | 11:42 AM

Share

ಮುಂಬೈ: ನಗರದ ಮೇಲೆ ನಡೆದ ಭೀಕರ ಉಗ್ರರ ದಾಳಿಗೆ ಇಂದಿಗೆ 12 ವರ್ಷ. ಅದೆಷ್ಟೇ ವರ್ಷಗಳು ಸರಿದು ಹೋದರೂ ಮರೆಯಲಾಗದ ಕರಾಳತೆ ಸೃಷ್ಟಿಸಿದೆ ನವೆಂಬರ್ 26, 2008ರ ದಾಳಿ. ಅಂದು ನರರೂಪದ ರಾಕ್ಷಸರೊಂದಿಗೆ ಹೋರಾಡಿ ಮಡಿದ ಯೋಧರು, ಪೊಲೀಸರಿಗೆ ಇಂದು ದೇಶಾದ್ಯಂತ ಗೌರವ ಸಲ್ಲಿಸಲಾಯಿತು.

ಅಂದಿನ ದಾಳಿಯನ್ನು ನೆನಪಿಸಿಕೊಂಡು ಟ್ವೀಟ್ ಮಾಡಿದ ಮುಂಬೈ ಪೊಲೀಸರು, ಅಂದು ಮುಂಬೈನಲ್ಲಿ ಹೋರಾಡಿ ಹುತಾತ್ಮರಾದವರ ತ್ಯಾಗ ಎಂದಿಗೂ ನೆನಪು ಮತ್ತು ಇತಿಹಾಸದಿಂದ ಅಳಿಸಿಹೋಗಲಾರದು. ನಮ್ಮೆಲ್ಲರ ರಕ್ಷಣೆಗಾಗಿ ಪ್ರಾಣ ತೆತ್ತವರಿಗೆ ನಮ್ಮ ಗೌರವ ನಮನಗಳು ಎಂದು ಹೇಳಿದ್ದಾರೆ. #2611Attack #2611Martyrs ಎಂಬ ಹ್ಯಾಷ್​ಟ್ಯಾಗ್​ ಬಳಸಿದ್ದಾರೆ.

ದಕ್ಷಿಣ ಮುಂಬೈನ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಹೊಸದಾಗಿ ನಿರ್ಮಿಸಲಾದ ಹುತಾತ್ಮರ ಸ್ಮಾರಕದ ಬಳಿ ನಡೆದ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಭಗತ್​ ಸಿಂಗ್​ ಕೋಶಿಯಾರಿ, ಮುಖ್ಯಮಂತ್ರಿ ಉದ್ಧವ್​ ಠಾಕ್ರೆ, ಗೃಹ ಸಚಿವ ಅನಿಲ್ ದೇಶ್​ಮುಖ್​, ಅರಣ್ಯ ಸಚಿವ ಆದಿತ್ಯ ಠಾಕ್ರೆ ಇತರರು ಭಾಗವಹಿಸಿದ್ದರು.

ಉಗ್ರರ ದಾಳಿಯನ್ನು ಹಿಮ್ಮೆಟ್ಟಿಸುವಲ್ಲಿ ರಕ್ಷಣಾ ಪಡೆಗಳು ನಡೆಸಿದ ಹೋರಾಟವನ್ನು ನೆನಪಿಸಿಕೊಂಡರು. ಹುತಾತ್ಮರ ಸ್ಮಾರಕಕ್ಕೆ ಹೂವಿನ ಹಾರ ಹಾಕಿ, ನಮನ ಸಲ್ಲಿಸಿದರು.

ಭಯೋತ್ಪಾದನೆ ವಿರುದ್ಧ ಹೋರಾಟ ತೀವ್ರಗೊಳ್ಳಲಿ ಕೊವಿಡ್-19 ಕಾರಣದಿಂದ ಸಮಾರಂಭದಲ್ಲಿ ಭಾಗವಹಿಸಲು ಕಡಿಮೆ ಜನರಿಗೆ ಅವಕಾಶ ಮಾಡಿಕೊಡಲಾಗಿತ್ತು. ಹುತಾತ್ಮರ ಕುಟುಂಬದವರೂ ಬಂದು ಗೌರವ ಸಲ್ಲಿಸಿದರು. ಇದೇ ಸಂದರ್ಭ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜ್ಯಪಾಲರನ್ನು ಭೇಟಿಯಾದರು.

ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್​ ಟ್ವೀಟ್ ಮಾಡಿ, 2008ರ ದಾಳಿಯಲ್ಲಿ ಮಡಿದ ಪೊಲೀಸರು, ಯೋಧರಿಗೆ ನಮನ. ಅವರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ. ಭಯೋತ್ಪಾದನೆ ವಿರುದ್ಧ ನಮ್ಮ ಹೋರಾಟ ತೀವ್ರಗೊಳ್ಳಬೇಕು ಎಂದಿದ್ದಾರೆ.

ಘಟನೆಯ ಮೆಲುಕು ನವೆಂಬರ್ 26, 2008ರಂದು ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾ ಉಗ್ರರು ಸಮುದ್ರ ಮಾರ್ಗದಲ್ಲಿ ಬಂದು ಮುಂಬೈನಲ್ಲಿ ದಾಳಿ ನಡೆಸಿದ್ದರು. ಈ ಭಯಾನಕ ದಾಳಿಯಲ್ಲಿ 18 ಭದ್ರತಾ ಸಿಬ್ಬಂದಿ ಸೇರಿ 166 ಮಂದಿ ಮೃತಪಟ್ಟಿದ್ದರು.

ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಹೇಮಂತ್​ ಕರ್ಕರೆ, ಸೇನೆಯ ವಿಶೇಷ ಕಾರ್ಯಪಡೆಯ ಕಮಾಂಡೊ ಮೇಜರ್​ ಸಂದೀಪ್​ ಉನ್ನಿಕೃಷ್ಣನ್​, ಮುಂಬೈನ ಹೆಚ್ಚುವರಿ ಪೊಲೀಸ್ ಆಯುಕ್ತ ಅಶೋಕ್​ ಕಾಮ್ಟೆ, ಹಿರಿಯ ಪೊಲೀಸ್ ಅಧಿಕಾರಿ ವಿಜಯ್​ ಸಲಸ್ಕರ್​ ಮತ್ತು ಸಹಾಯಕ ಸಬ್​ಇನ್ಸ್​ಪೆಕ್ಟರ್ ತುಕಾರಾಂ ಓಂಬಲ್​ ಹುತಾತ್ಮರಾಗಿದ್ದರು.

ಪ್ರತಿವರ್ಷವೂ ನ.26ರಂದು ಹುತಾತ್ಮರನ್ನು ನೆನೆದು, ಗೌರವ ಸಮರ್ಪಿಸಲಾಗುತ್ತಿದೆ.

Published On - 11:38 am, Thu, 26 November 20

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು