AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗದ್ಗುರು ಬಸವೇಶ್ವರರಿಗೆ ಗೌರವ ನಮನಗಳು; ಕನ್ನಡದಲ್ಲೇ ಟ್ವೀಟ್​ ಮಾಡಿ ಬಸವಣ್ಣನನ್ನು ಸ್ಮರಿಸಿದ ಪ್ರಧಾನಿ ಮೋದಿ

ಪ್ರಧಾನಮಂತ್ರಿ ಇಂದು ದೇಶದ ಜನರಿಗೆ ಪರಶುರಾಮ ಜಯಂತಿಯ ಶುಭಾಶಯವನ್ನೂ  ತಿಳಿಸಿದ್ದಾರೆ. ಭಗವಾನ್​ ಪರಶುರಾಮ ಕರುಣೆ, ಸಹಾನುಭೂತಿ ಮತ್ತು ಶೌರ್ಯದ ಕಾರಣಕ್ಕೆ ಪರಮಪೂಜ್ಯನಾಗಿದ್ದಾನೆ ಎಂದಿದ್ದಾರೆ.

ಜಗದ್ಗುರು ಬಸವೇಶ್ವರರಿಗೆ ಗೌರವ ನಮನಗಳು; ಕನ್ನಡದಲ್ಲೇ ಟ್ವೀಟ್​ ಮಾಡಿ ಬಸವಣ್ಣನನ್ನು ಸ್ಮರಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: Lakshmi Hegde|

Updated on:May 03, 2022 | 10:49 AM

Share

ಇಂದು ಬಸವಜಯಂತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಜಗಜ್ಯೋತಿ ಬಸವೇಶ್ವರರನ್ನು ಸ್ಮರಿಸಿದ್ದಾರೆ. ಹಾಗೇ, 2022ರ ಸಮಯದಲ್ಲಿ ತಾವು ಮಾಡಿದ ಭಾಷಣದ ತುಣುಕೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಕನ್ನಡದಲ್ಲಿಯೇ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಬಸವಜಯಂತಿಯ ಈ ಶುಭಸಂದರ್ಭದಲ್ಲಿ  ಜಗದ್ಗುರು ಬಸವೇಶ್ವರರಿಗೆ ಗೌರವ ನಮನಗಳು. ಬಸವಣ್ಣನವರ ಚಿಂತನೆ, ಬೋಧನೆ ಹಾಗು ತತ್ವಾದರ್ಶಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ ಶಕ್ತಿ ತುಂಬುತ್ತಿದೆ ಎಂದಿದ್ದಾರೆ. 12ನೇ ಶತಮಾನದ ಸಮಾಜ ಸುಧಾರಕ, ಕವಿ ಮತ್ತು ತತ್ವಜ್ಞಾನಿ ಆಗಿರುವ ಬಸವೇಶ್ವರ ಜಯಂತಿಯನ್ನು ಸಾಮಾನ್ಯವಾಗಿ ವೈಶಾಖ ಮಾಸದ ಶುಕ್ಲಪಕ್ಷದ ಮೂರನೇ ದಿನ ಆಚರಿಸುತ್ತಾರೆ.

ಹಾಗೇ, ಪ್ರಧಾನಮಂತ್ರಿ ಇಂದು ದೇಶದ ಜನರಿಗೆ ಪರಶುರಾಮ ಜಯಂತಿಯ ಶುಭಾಶಯವನ್ನೂ  ತಿಳಿಸಿದ್ದಾರೆ. ಭಗವಾನ್​ ಪರಶುರಾಮ ಕರುಣೆ, ಸಹಾನುಭೂತಿ ಮತ್ತು ಶೌರ್ಯದ ಕಾರಣಕ್ಕೆ ಪರಮಪೂಜ್ಯನಾಗಿದ್ದಾನೆ ಎಂದು ಅವರು ಹೇಳಿದ್ದಾರೆ.  ಇದರೊಂದಿಗೆ ಅಕ್ಷಯ ತೃತೀಯ ಹಬ್ಬದ ಶುಭಾಶಯವನ್ನೂ ತಿಳಿಸಿದ ಪ್ರಧಾನಿ, ಎಲ್ಲರಿಗೂ ಅಕ್ಷಯ ತೃತೀಯದ ಹಾರ್ದಿಕ ಶುಭಾಶಯಗಳು. ಈ ದಿನ ಪ್ರತಿಯೊಬ್ಬರ ಜೀವನದಲ್ಲೂ ಸಮೃದ್ಧಿಯನ್ನು ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಮಿತ್ ಶಾ ಸಮ್ಮುಖದಲ್ಲಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಬಸವರಾಜ ಹೊರಟ್ಟಿ

Published On - 10:49 am, Tue, 3 May 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ