AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಕ್ಕಿಂತಲೂ ಬಿಜೆಪಿ ಅಪಾಯಕಾರಿ: ಟಿಎಂಸಿ ಸಂಸದೆಯ ಟೀಕೆಗೆ ಕಮಲ ಕಿಡಿ

ನುಸ್ರತ್ ಜಹಾನ್ ಹೇಳಿಕೆಗೆ ಬಿಜೆಪಿಯ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥ ಅಮಿತ್ ಮಾಳವೀಯ ತಿರುಗೇಟು ನೀಡಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿಯ ಸಹ ಸಂಚಾಲಕರೂ ಆಗಿರುವ ಅವರು, ಟಿಎಂಸಿ ಕೊರೊನಾ ಲಸಿಕೆಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ.

ಕೊರೊನಾಕ್ಕಿಂತಲೂ ಬಿಜೆಪಿ ಅಪಾಯಕಾರಿ: ಟಿಎಂಸಿ ಸಂಸದೆಯ ಟೀಕೆಗೆ ಕಮಲ ಕಿಡಿ
ಟಿಎಂಸಿ ಸಂಸದೆ ನುಸ್ರತ್ ಜಹಾನ್ (ಸಂಗ್ರಹ ಚಿತ್ರ)
guruganesh bhat
| Edited By: |

Updated on: Jan 15, 2021 | 10:26 PM

Share

ಕೋಲ್ಕತ್ತಾ: ‘ಕೊರೊನಾಕ್ಕಿಂತಲೂ ಅಪಾಯಕಾರಿ ಮನುಷ್ಯರು ನಿಮ್ಮನ್ನು ಸುತ್ತುವರೆದಿರಬಹುದು, ನಿಮ್ಮ ಕಿವಿ ಮತ್ತು ಕಣ್ಣುಗಳನ್ನು ಸದಾ ಜಾಗೃತವಾಗಿರಿಸಿಕೊಳ್ಳಿ. ನಿಮಗೆ ಗೊತ್ತೇ? ಬಿಜೆಪಿ ಕೊರೊನಾಕ್ಕಿಂತಲೂ ಅಪಾಯಕಾರಿ. ನಮ್ಮ ಸಂಸ್ಕೃತಿಯನ್ನು ಅರ್ಥಮಾಡಿಕೊಳ್ಳಲಾಗದ ಬಿಜೆಪಿಗೆ ಮಾನವೀಯತೆಯೇ ಇಲ್ಲ’ ಎಂದು ಟಿಎಂಸಿ ಸಂಸದೆ ನುಸ್ರತ್ ಜಹಾನ್ ಬಿಜೆಪಿಯನ್ನು ಟೀಕಿಸಿದ್ದರು. ಅವರ ಈ ಟೀಕೆ ಬಿಜೆಪಿ ಸಿಟ್ಟಾಗಿದೆ.

ನುಸ್ರತ್ ಜಹಾನ್ ಹೇಳಿಕೆಗೆ ಬಿಜೆಪಿಯ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥ ಅಮಿತ್ ಮಾಳವೀಯ ತಿರುಗೇಟು ನೀಡಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿಯ ಸಹ ಸಂಚಾಲಕರೂ ಆಗಿರುವ ಅವರು, ಟಿಎಂಸಿ ಕೊರೊನಾ ಲಸಿಕೆಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿಗೆ ಪಶ್ಚಿಮ ಬಂಗಾಳದ ಶ್ರಮ ಸಂಸ್ಕೃತಿಯ ಅರಿವಿಲ್ಲ. ಹಣದ ಹೊಳೆಯಲ್ಲಿ ಮುಳುಗಿರುವ ಬಿಜೆಪಿ ಕೇವಲ ವ್ಯವಹಾರವನ್ನೊಂದೇ ಅರಿತಿದೆ. ಧರ್ಮಗಳ ನಡುವೆ ಕಲಹ ಸೃಷ್ಟಿಸುವ ಕೆಲಸವನ್ನು ಬಿಜೆಪಿ ಎಲ್ಲೆಡೆ ನಡೆಸುತ್ತಿದೆ ಎಂದು ಸಂಸದೆ ನುಸ್ರತ್ ಜಹಾನ್ ಇತ್ತೀಚಿಗೆ ರಕ್ತದಾನ ಶಿಬಿರವೊಂದರಲ್ಲಿ ಹೇಳಿದ್ದರು.

ಮೊದಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಪುಟದ ಸಿದ್ದಿಕುಲ್ಲಾ ಚೌಧರಿ ಕೊರೊನಾ ಲಸಿಕೆ ತುಂಬಿದ ವಾಹನವನ್ನು ತಡೆಗಟ್ಟಿದರು. ಇದೀಗ ಟಿಎಂಸಿ ಸಂಸದೆ ಬಿಜೆಪಿಯನ್ನು ಕೊರೊನಾಕ್ಕೆ ಹೋಲಿಸುತ್ತಿದ್ದಾರೆ ಎಂದು ಅಮಿತ್ ಮಾಳವೀಯ ಟೀಕಿಸಿದ್ದಾರೆ.

‘ಒಂದಾಗಿ ಬಿಜೆಪಿಯನ್ನು ವಿರೋಧಿಸೋಣ ಬನ್ನಿ..’ ಕಾಂಗ್ರೆಸ್​ಗೆ ಆಹ್ವಾನ ನೀಡಿದ ಟಿಎಂಸಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ