AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದ ಉಪಚುನಾವಣೆಯಲ್ಲಿ ಟಿಎಂಸಿ ಭರ್ಜರಿ ಬೇಟೆ; ಎಲ್ಲಾ 6 ಸ್ಥಾನಗಳಲ್ಲಿ ಗೆಲುವು

ಪಶ್ಚಿಮ ಬಂಗಾಳದ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. 2021ರ ಚುನಾವಣೆಯಲ್ಲಿ ಬಿಜೆಪಿ ಪಾಲಾಗಿದ್ದ ಅಲಿಪುರ್ದೌರ್ ಜಿಲ್ಲೆಯ ಮದರಿಹತ್ ಕ್ಷೇತ್ರದಲ್ಲಿ ಕೂಡ ತೃಣಮೂಲ ಕಾಂಗ್ರೆಸ್ ಗೆದ್ದಿದೆ. ಸಿತಾಯಿ, ಮದರಿಹತ್, ನೈಹಟಿ, ಹರೋವಾದಲ್ಲಿ ಗೆದ್ದಿರುವ ಟಿಎಂಸಿ ಮೇದಿನಿಪುರ, ತಲ್ದಂಗ್ರಾದಲ್ಲಿ ಮುನ್ನಡೆ ಸಾಧಿಸಿದೆ. ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಯಿತು.

ಪಶ್ಚಿಮ ಬಂಗಾಳದ ಉಪಚುನಾವಣೆಯಲ್ಲಿ ಟಿಎಂಸಿ ಭರ್ಜರಿ ಬೇಟೆ; ಎಲ್ಲಾ 6 ಸ್ಥಾನಗಳಲ್ಲಿ ಗೆಲುವು
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಸುಷ್ಮಾ ಚಕ್ರೆ
|

Updated on: Nov 23, 2024 | 5:17 PM

Share

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಉಪಚುನಾವಣೆಯಲ್ಲಿ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಭಾರಿ ಗೆಲುವಿನತ್ತ ಸಾಗುತ್ತಿದೆ. ಟಿಎಂಸಿ ಇಲ್ಲಿಯವರೆಗೆ 4 ಸ್ಥಾನಗಳನ್ನು ಗೆದ್ದು ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಟಿಎಂಸಿ ಸಿತಾಯಿ, ಮದರಿಹತ್, ನೈಹಟಿ, ಹರೋವಾ ಗೆದ್ದು ಮೇದಿನಿಪುರ, ತಲ್ದಂಗ್ರಾದಲ್ಲಿ ಮುನ್ನಡೆ ಸಾಧಿಸಿದೆ. ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಯಿತು. ಟಿಎಂಸಿ ಅಭ್ಯರ್ಥಿಗಳು ತಮ್ಮ 2 ಸ್ಥಾನಗಳಲ್ಲಿ ಬಹುಮತದೊಂದಿಗೆ ಮುನ್ನಡೆ ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿಗಳು ಹಿಂದುಳಿದಿದ್ದಾರೆ. ಈ ವರ್ಷ ಜೂನ್‌ನಲ್ಲಿ ಲೋಕಸಭೆಗೆ ಆಯ್ಕೆಯಾದ ನಂತರ ಶಾಸಕರು ರಾಜೀನಾಮೆ ನೀಡಿದ ನಂತರ ತೆರವಾದ ಈ ಸ್ಥಾನಗಳಿಗೆ ಉಪಚುನಾವಣೆ ಅಗತ್ಯವಾಗಿತ್ತು.

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಹತ್ಯೆಯ ಆರೋಪದ ಮೇಲೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಆಕ್ರೋಶದ ನಡುವೆ ನಡೆದ ಪಶ್ಚಿಮ ಬಂಗಾಳದ ಉಪಚುನಾವಣೆಯು ಮಮತಾ ಬ್ಯಾನರ್ಜಿಗೆ ಪರೀಕ್ಷೆಯಾಗಿದೆ. ಈ ಘಟನೆ ರಾಜ್ಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜ್ಯದ ವಿವಿಧೆಡೆ ಪ್ರತಿಭಟನೆಗೆ ಕಾರಣವಾಗಿತ್ತು.

ಇದನ್ನೂ ಓದಿ: Cyclone Dana: ಒಡಿಶಾ, ಬಂಗಾಳದಲ್ಲಿ ಇಂದು ರಾತ್ರಿಯಿಂದ ಡಾನಾ ಚಂಡಮಾರುತದ ಅಬ್ಬರ; 10 ಲಕ್ಷ ಜನರ ಸ್ಥಳಾಂತರ

2021 ಮತ್ತು 2016ರ ಚುನಾವಣೆಗಳಲ್ಲಿ ಬಿಜೆಪಿ ಪಾಲಾಗಿದ್ದ ಅಲಿಪುರ್ದೂರ್ ಜಿಲ್ಲೆಯ ಮದರಿಹತ್ ಕ್ಷೇತ್ರವನ್ನು ಟಿಎಂಸಿ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಸಿತಾಯಿ, ಹರೋವಾ, ನೈಹತಿ, ತಲ್ದಂಗ್ರಾ, ಮತ್ತು ಮೇದಿನಿಪುರ್ ಕ್ಷೇತ್ರಗಳಲ್ಲಿ ತೃಣಮೂಲ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಈಗಾಗಲೇ ಟಿಎಂಸಿಯ ಸಂಗೀತಾ ರಾಯ್ ಅವರು ಸೀತಾಯಿ (ಪರಿಶಿಷ್ಟ ಜಾತಿ) 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ. ಅವರು ಕೇವಲ 35,348 ಮತಗಳನ್ನು ಪಡೆದ ಬಿಜೆಪಿಯ ದೀಪಕ್ ಕುಮಾರ್ ರೇ ಅವರನ್ನು ಸೋಲಿಸಿದರು.

ದಕ್ಷಿಣ ಕೊಲ್ಕತ್ತಾದಲ್ಲಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮನೆ ಮುಂದೆಯೂ ಸೇರಿದಂತೆ ತೃಣಮೂಲ ಕಾರ್ಯಕರ್ತರು ಈಗಾಗಲೇ ಸಂಭ್ರಮಾಚರಣೆ ಆರಂಭಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!