AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ: ಉಪಚುನಾವಣೆಯಲ್ಲಿ ಎಲ್ಲ 4 ಸ್ಥಾನ ಗೆದ್ದ ತೃಣಮೂಲ ಕಾಂಗ್ರೆಸ್​, 3 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ ಬಿಜೆಪಿ

‘ಪಶ್ಚಿಮ ಬಂಗಾಳವು ಸದಾ ಅಭಿವೃದ್ಧಿ ಮತ್ತು ಏಕತೆಯನ್ನು ಬಯಸುತ್ತದೆ. ಅಪಪ್ರಚಾರ ಮತ್ತು ದ್ವೇಷದ ರಾಜಕಾರಣವನ್ನು ಇಲ್ಲಿನ ಜನರು ಒಪ್ಪುವುದಿಲ್ಲ’ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳ: ಉಪಚುನಾವಣೆಯಲ್ಲಿ ಎಲ್ಲ 4 ಸ್ಥಾನ ಗೆದ್ದ ತೃಣಮೂಲ ಕಾಂಗ್ರೆಸ್​, 3 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ ಬಿಜೆಪಿ
ಮಮತಾ ಬ್ಯಾನರ್ಜಿ
TV9 Web
| Edited By: |

Updated on: Nov 02, 2021 | 6:57 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಗೆಲುವಿನ ನಾಗಾಲೋಟ ಮುಂದುವರಿದಿದೆ. ಇಂದು ಪ್ರಕಟವಾದ ಉಪ ಚುನಾವಣೆ ಫಲಿತಾಂಶದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಎಲ್ಲ ನಾಲ್ಕೂ ಕ್ಷೇತ್ರಗಳಲ್ಲಿ ಜಯ ಗಳಿಸಿದ್ದರೆ, ಬಿಜೆಪಿ ಮೂರು ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದೆ. ಕೆಲ ಕ್ಷೇತ್ರಗಳಲ್ಲಿ ಮತ ಎಣಿಕೆ ಇನ್ನೂ ಮುಕ್ತಾಯವಾಗಿಲ್ಲ. ಆದರೆ ಗೆಲ್ಲುವವರು ಯಾರು ಎಂಬುದು ನಿಚ್ಚಳವಾಗಿದೆ. ವಿಜೇತರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭಿನಂದಿಸಿದ್ದಾರೆ. ‘ಪಶ್ಚಿಮ ಬಂಗಾಳವು ಸದಾ ಅಭಿವೃದ್ಧಿ ಮತ್ತು ಏಕತೆಯನ್ನು ಬಯಸುತ್ತದೆ. ಅಪಪ್ರಚಾರ ಮತ್ತು ದ್ವೇಷದ ರಾಜಕಾರಣವನ್ನು ಇಲ್ಲಿನ ಜನರು ಒಪ್ಪುವುದಿಲ್ಲ’ ಎಂದು ಹೇಳಿದ್ದಾರೆ.

ದಿನ್​ಹಟ ಮತ್ತು ಶಾಂತಿಪುರ ಕ್ಷೇತ್ರಗಳು ಬಿಜೆಪಿಗೆ ಪ್ರತಿಷ್ಠೆಯ ಕಣಗಳಾಗಿದ್ದವು. ಬಿಜೆಪಿ ಹಲವು ಹಿರಿಯ ನಾಯಕರು ಮತ್ತು ಶಾಸಕರು ಇದೀಗ ಪಕ್ಷಾಂತರ ಮಾಡಿ ಟಿಎಂಸಿಗೆ ಹಾರಿದ್ದಾರೆ. ಬಂಗಾಳದ ಕೂಚ್​ ಬೆಹಾರ್ ಜಿಲ್ಲೆಯ ದಿನ್​ಹಟ ಕ್ಷೇತ್ರವು ಬಿಜೆಪಿಯ ಭದ್ರಕೋಟೆ ಎಂದೇ ನಂಬಲಾಗಿತ್ತು. ಬಿಜೆಪಿಯ ನಿತೀಶ್ ಪ್ರಾಮಾಣಿಕ್ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಈ ಕ್ಷೇತ್ರ ತೆರವಾಗಿತ್ತು. ತೃಣಮೂಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉದಯನ್ ಗುಪ್ತ ದಿನ್​ಹಟ ಕ್ಷೇತ್ರದಲ್ಲಿ 91,000ಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ನಾಯಕ ಜಗನ್ನಾಥ್ ಸರ್ಕಾರ್ ರಾಜೀನಾಮೆ ಕಾರಣದಿಂದ ಶಾಂತಿಪುರ ಕ್ಷೇತ್ರವು ತೆರವಾಗಿತ್ತು.

ಖರ್ದಾ ಕ್ಷೇತ್ರದಲ್ಲಿ ಕೊಲ್ಕತ್ತಾದ ಮಾಜಿ ಮೇಯರ್ ಸೊವನ್​ದೇವ್ ಚಟ್ಟೋಪಾಧ್ಯಯ ಸ್ಪರ್ಧಿಸಿದ್ದಾರೆ. ಕೊಲ್ಕತ್ತಾದ ಭವಾನಿಪುರ ಕ್ಷೇತ್ರವನ್ನು ಇವರು ಮಮತಾ ಬ್ಯಾನರ್ಜಿಗೆ ಬಿಟ್ಟುಕೊಟ್ಟಿದ್ದರು. ನಂದಿಗ್ರಾಮದಲ್ಲಿ ಸೋತ ಆರು ತಿಂಗಳ ಒಳಗೆ ಮಮತಾ ಬ್ಯಾನರ್ಜಿ ಭವಾನಿಪುರ ಕ್ಷೇತ್ರದಿಂದ ಪುನರಾಯ್ಕೆಯಾಗಿದ್ದರು. ಪಶ್ಚಿಮ ಬಂಗಾಳದ ಸಾರ್ವತ್ರಿಕ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ 213 ಸ್ಥಾನಗಳಲ್ಲಿ ಜಯಗಳಿಸಿತ್ತು. ಈ ಸಂಖ್ಯೆಗೆ ಇಂದಿನ ಜಯದೊಂದಿಗೆ ನಾಲ್ಕು ಸ್ಥಾನಗಳು ಹೆಚ್ಚುವರಿಯಾಗಿ ಸೇರ್ಪಡೆಯಾದಂತೆ ಆಗಿದೆ. ಮಮತಾರನ್ನು ಅಧಿಕಾರದಿಂದ ದೂರ ಇಡುವ ಪ್ರತಿಜ್ಞೆಯೊಂದಿಗೆ ಚುನಾವಣಾ ರಂಗ ಪ್ರವೇಶಿಸಿದ್ದ ಬಿಜೆಪಿ ಈ ಸೋಲಿನಿಂದ ಮತ್ತೊಮ್ಮೆ ಮುಖಭಂಗ ಅನುಭವಿಸಿದಂತೆ ಆಗಿದೆ.

ಇದನ್ನೂ ಓದಿ: ತಂಬಾಕು ಪ್ರಿಯರಿಗೆ ಶಾಕ್; ಪಶ್ಚಿಮ ಬಂಗಾಳದಲ್ಲಿ 1 ವರ್ಷ ಗುಟ್ಕಾ, ಪಾನ್ ಮಸಾಲ ಮಾರಾಟ ನಿಷೇಧ ಇದನ್ನೂ ಓದಿ: ಬಿಜೆಪಿ ಸೋಲಿಸೋಣ ಬನ್ನಿ; ಗೋವಾ ಫಾರ್ವರ್ಡ್​ ಪಾರ್ಟಿ ಅಧ್ಯಕ್ಷನಿಗೆ ಮಮತಾ ಬ್ಯಾನರ್ಜಿ ನೇರ ಆಮಂತ್ರಣ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!