AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆಯಲ್ಲಿ ಬೆಲೆ ಏರಿಕೆ ಚರ್ಚೆ ನಡುವೆ ಎದ್ದು ನಿಂತು ಹಸಿ ಬದನೆಕಾಯಿ ಕಚ್ಚಿ ತಿಂದ ಟಿಎಂಸಿ ಸಂಸದೆ

ನಾವು ಹಸಿ ತರಕಾರಿಗಳನ್ನು ತಿನ್ನಬೇಕೆಂದು ಸರ್ಕಾರ ಬಯಸುತ್ತಿದೆಯೇ ಎಂದು ಕೇಳಿದ ಸಂಸದೆ ಹಸಿ ಬದನೆಕಾಯಿ ತಿನ್ನುವ ಮೂಲಕ ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ.

ಲೋಕಸಭೆಯಲ್ಲಿ ಬೆಲೆ ಏರಿಕೆ ಚರ್ಚೆ ನಡುವೆ ಎದ್ದು ನಿಂತು ಹಸಿ ಬದನೆಕಾಯಿ ಕಚ್ಚಿ ತಿಂದ ಟಿಎಂಸಿ ಸಂಸದೆ
ಬದನೆ ಕಾಯಿ ಕಚ್ಚಿ ತಿಂದ ಸಂಸದೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 01, 2022 | 7:30 PM

Share

ದೆಹಲಿ: ಲೋಕಸಭೆಯಲ್ಲಿ (Lok sabha) ಬೆಲೆ ಏರಿಕೆ ಚರ್ಚೆ (Price Rise) ಸೋಮವಾರ ನಡೆದಿದ್ದು, ಚರ್ಚೆ ನಡುವೆ ಎದ್ದು ನಿಂತ ತೃಣಮೂಲ ಕಾಂಗ್ರೆಸ್ ಸಂಸದೆಯೊಬ್ಬರು ಎದ್ದು ನಿಂತು ಹಸಿ ಬದನೆಕಾಯಿಯನ್ನು ಕಚ್ಚಿ ತಿಂದಿದ್ದಾರೆ. ಬೆಲೆ ಏರಿಕೆ ಬಗ್ಗೆ ಚರ್ಚೆಗೆ ಅನುಮತಿ ನೀಡಿದ್ದಕ್ಕೆ ಸಭಾಪತಿ ಅವರಿಗೆ ಧನ್ಯವಾದಗಳು ಎಂದು ಕಕೋಲಿ ಘೋಷ್ ದಸ್ತಿದಾರ್ ಹೇಳಿದ್ದಾರೆ. ತುಂಬಾ ಕಾದು ಕಾದು ಕೊನೆಗೂ ಚರ್ಚೆಗೆ ಅವಕಾಶ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ . ಅಮಾನತು ಮಾಡಲಾಗಿದ್ದ ಕಾಂಗೆಸ್ ಸಂಸದರ ಅಮಾನತು ನಿರ್ಧಾರ ವಾಪಸ್ ತೆಗೆದುಕೊಂಡ ನಂತರ ಲೋಕಸಭೆಯಲ್ಲಿಂದು ಬೆಲೆ ಏರಿಕೆ ಚರ್ಚೆಗೆ ಬಂದಿದೆ. ನಾವು ಹಸಿ ತರಕಾರಿಗಳನ್ನು ತಿನ್ನಬೇಕೆಂದು ಸರ್ಕಾರ ಬಯಸುತ್ತಿದೆಯೇ ಎಂದು ಕೇಳಿದ ಸಂಸದೆ ಹಸಿ ಬದನೆಕಾಯಿ ಕಚ್ಚುವ ಮೂಲಕ ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ.

ಕಳೆದ ಕೆಲವು ತಿಂಗಳಲ್ಲಿ ಎಲ್ ಪಿ ಜಿ ಸಿಲಿಂಡರ್ ಬೆಲೆ ನಾಲ್ಕು ಬಾರಿ ಏರಿಕೆ ಮಾಡಲಾಗಿದೆ. ಸಿಲಿಂಡರ್ ಬೆಲೆ 600ರಿಂದ 1,100ಕ್ಕೇರಿದೆ. ಸಿಲಿಂಡರ್ ದರವನ್ನು ಇಳಿಕೆ ಮಾಡಲೇ ಬೇಕು ಎಂದು ಸಂಸದೆ ಒತ್ತಾಯಿಸಿದ್ದಾರೆ.

ಜುಲೈ ತಿಂಗಳಲ್ಲಿ ಎಲ್ ಪಿಜಿ ಅಡುಗೆ ಅನಿಲ ಬೆಲೆ ಸಿಲಿಂಡರ್ ಗೆ 50 ಏರಿಕೆ ಮಾಡಲಾಗಿತ್ತು. ಕಳೆದ 1 ವರ್ಷದಲ್ಲಿ 8 ಬಾರಿ ಬೆಲೆ ಏರಿಕೆ ಮಾಡಲಾಗಿದೆ. 14.2 ಕೆಜಿ ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 1,053 ಆಗಿದೆ .

Published On - 7:25 pm, Mon, 1 August 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ