AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆಯಲ್ಲಿ ಬೆಲೆ ಏರಿಕೆ ಚರ್ಚೆ ನಡುವೆ ಎದ್ದು ನಿಂತು ಹಸಿ ಬದನೆಕಾಯಿ ಕಚ್ಚಿ ತಿಂದ ಟಿಎಂಸಿ ಸಂಸದೆ

ನಾವು ಹಸಿ ತರಕಾರಿಗಳನ್ನು ತಿನ್ನಬೇಕೆಂದು ಸರ್ಕಾರ ಬಯಸುತ್ತಿದೆಯೇ ಎಂದು ಕೇಳಿದ ಸಂಸದೆ ಹಸಿ ಬದನೆಕಾಯಿ ತಿನ್ನುವ ಮೂಲಕ ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ.

ಲೋಕಸಭೆಯಲ್ಲಿ ಬೆಲೆ ಏರಿಕೆ ಚರ್ಚೆ ನಡುವೆ ಎದ್ದು ನಿಂತು ಹಸಿ ಬದನೆಕಾಯಿ ಕಚ್ಚಿ ತಿಂದ ಟಿಎಂಸಿ ಸಂಸದೆ
ಬದನೆ ಕಾಯಿ ಕಚ್ಚಿ ತಿಂದ ಸಂಸದೆ
TV9 Web
| Edited By: |

Updated on:Aug 01, 2022 | 7:30 PM

Share

ದೆಹಲಿ: ಲೋಕಸಭೆಯಲ್ಲಿ (Lok sabha) ಬೆಲೆ ಏರಿಕೆ ಚರ್ಚೆ (Price Rise) ಸೋಮವಾರ ನಡೆದಿದ್ದು, ಚರ್ಚೆ ನಡುವೆ ಎದ್ದು ನಿಂತ ತೃಣಮೂಲ ಕಾಂಗ್ರೆಸ್ ಸಂಸದೆಯೊಬ್ಬರು ಎದ್ದು ನಿಂತು ಹಸಿ ಬದನೆಕಾಯಿಯನ್ನು ಕಚ್ಚಿ ತಿಂದಿದ್ದಾರೆ. ಬೆಲೆ ಏರಿಕೆ ಬಗ್ಗೆ ಚರ್ಚೆಗೆ ಅನುಮತಿ ನೀಡಿದ್ದಕ್ಕೆ ಸಭಾಪತಿ ಅವರಿಗೆ ಧನ್ಯವಾದಗಳು ಎಂದು ಕಕೋಲಿ ಘೋಷ್ ದಸ್ತಿದಾರ್ ಹೇಳಿದ್ದಾರೆ. ತುಂಬಾ ಕಾದು ಕಾದು ಕೊನೆಗೂ ಚರ್ಚೆಗೆ ಅವಕಾಶ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ . ಅಮಾನತು ಮಾಡಲಾಗಿದ್ದ ಕಾಂಗೆಸ್ ಸಂಸದರ ಅಮಾನತು ನಿರ್ಧಾರ ವಾಪಸ್ ತೆಗೆದುಕೊಂಡ ನಂತರ ಲೋಕಸಭೆಯಲ್ಲಿಂದು ಬೆಲೆ ಏರಿಕೆ ಚರ್ಚೆಗೆ ಬಂದಿದೆ. ನಾವು ಹಸಿ ತರಕಾರಿಗಳನ್ನು ತಿನ್ನಬೇಕೆಂದು ಸರ್ಕಾರ ಬಯಸುತ್ತಿದೆಯೇ ಎಂದು ಕೇಳಿದ ಸಂಸದೆ ಹಸಿ ಬದನೆಕಾಯಿ ಕಚ್ಚುವ ಮೂಲಕ ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ.

ಕಳೆದ ಕೆಲವು ತಿಂಗಳಲ್ಲಿ ಎಲ್ ಪಿ ಜಿ ಸಿಲಿಂಡರ್ ಬೆಲೆ ನಾಲ್ಕು ಬಾರಿ ಏರಿಕೆ ಮಾಡಲಾಗಿದೆ. ಸಿಲಿಂಡರ್ ಬೆಲೆ 600ರಿಂದ 1,100ಕ್ಕೇರಿದೆ. ಸಿಲಿಂಡರ್ ದರವನ್ನು ಇಳಿಕೆ ಮಾಡಲೇ ಬೇಕು ಎಂದು ಸಂಸದೆ ಒತ್ತಾಯಿಸಿದ್ದಾರೆ.

ಜುಲೈ ತಿಂಗಳಲ್ಲಿ ಎಲ್ ಪಿಜಿ ಅಡುಗೆ ಅನಿಲ ಬೆಲೆ ಸಿಲಿಂಡರ್ ಗೆ 50 ಏರಿಕೆ ಮಾಡಲಾಗಿತ್ತು. ಕಳೆದ 1 ವರ್ಷದಲ್ಲಿ 8 ಬಾರಿ ಬೆಲೆ ಏರಿಕೆ ಮಾಡಲಾಗಿದೆ. 14.2 ಕೆಜಿ ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 1,053 ಆಗಿದೆ .

Published On - 7:25 pm, Mon, 1 August 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!