AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವಳಿ ತಲಾಖ್ ತಿದ್ದುಪಡಿ ಕಾನೂನಿಗೆ 1 ವರ್ಷ, ಬಿಜೆಪಿ ನಾಯಕರಲ್ಲಿ ಹರ್ಷ

ದೆಹಲಿ:ತ್ರಿವಳಿ ತಲಾಖ್ ತಿದ್ದುಪಡಿ ವಿಧೇಯಕ ಅಂಗೀಕರಿಸಿದ ಮೊದಲ ವಾರ್ಷಿಕೋತ್ಸವವನ್ನು ಭಾರತೀಯ ಜನತಾ ಪಕ್ಷವು ಮುಸ್ಲಿಂ ಮಹಿಳೆಯರ ಹಕ್ಕುಗಳ ದಿನವಾಗಿ ಆಚರಿಸುತ್ತಿದೆ. ವಿಧೇಯಕವು, ಕಳೆದ ವರ್ಷ ಇದೇ ದಿನದಂದು ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಸುದೀರ್ಘ ಚರ್ಚೆಯ ನಂತರ ಅಂಗೀಕಾರಗೊಂಡಿತ್ತು. ವಿರೋಧ ಪಕ್ಷಗಳು, ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಮಸೂದೆ ಪಾಸು ಮಾಡಲಾಗಿದೆ ಎಂದು ಆರೋಪಿಸಿದ್ದರೆ, ಸರಕಾರವು ಈ ಕಾನೂನು ಲಿಂಗ-ತಾರತಮ್ಯ ಇಲ್ಲವಾಗಿಸಿ, ಮುಸ್ಲಿಂ ಮಹಿಳೆಯರಿಗೆ ನೆರವಾಗುತ್ತದೆ ಎಂದು ಹೇಳಿತ್ತು. ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ […]

ತ್ರಿವಳಿ ತಲಾಖ್ ತಿದ್ದುಪಡಿ ಕಾನೂನಿಗೆ 1 ವರ್ಷ, ಬಿಜೆಪಿ ನಾಯಕರಲ್ಲಿ ಹರ್ಷ
Follow us
ಸಾಧು ಶ್ರೀನಾಥ್​
|

Updated on:Jul 31, 2020 | 6:18 PM

ದೆಹಲಿ:ತ್ರಿವಳಿ ತಲಾಖ್ ತಿದ್ದುಪಡಿ ವಿಧೇಯಕ ಅಂಗೀಕರಿಸಿದ ಮೊದಲ ವಾರ್ಷಿಕೋತ್ಸವವನ್ನು ಭಾರತೀಯ ಜನತಾ ಪಕ್ಷವು ಮುಸ್ಲಿಂ ಮಹಿಳೆಯರ ಹಕ್ಕುಗಳ ದಿನವಾಗಿ ಆಚರಿಸುತ್ತಿದೆ. ವಿಧೇಯಕವು, ಕಳೆದ ವರ್ಷ ಇದೇ ದಿನದಂದು ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಸುದೀರ್ಘ ಚರ್ಚೆಯ ನಂತರ ಅಂಗೀಕಾರಗೊಂಡಿತ್ತು. ವಿರೋಧ ಪಕ್ಷಗಳು, ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಮಸೂದೆ ಪಾಸು ಮಾಡಲಾಗಿದೆ ಎಂದು ಆರೋಪಿಸಿದ್ದರೆ, ಸರಕಾರವು ಈ ಕಾನೂನು ಲಿಂಗ-ತಾರತಮ್ಯ ಇಲ್ಲವಾಗಿಸಿ, ಮುಸ್ಲಿಂ ಮಹಿಳೆಯರಿಗೆ ನೆರವಾಗುತ್ತದೆ ಎಂದು ಹೇಳಿತ್ತು.

ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ತ್ರಿವಳಿ ತಲಾಕ್ ನಿಷೇಧ ಕಾನೂನನ್ನು ಜಾರಿ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ.

“ಭಾರತದಲ್ಲಿರುವ ಎಲ್ಲಾ ಮುಸ್ಲಿಂ ಮಹಿಳೆಯರು, ಸಾಮಾಜಿಕ ಪೀಡೆಯಾಗಿದ್ದ ಕ್ರೂರ ತ್ರಿವಳಿ ತಲಾಕ್ ಪದ್ಧತಿಯನ್ನು ನಿರ್ಮೂಲಗೊಳಿಸಿದ @narendramodi ಅವರಿಗೆ ಕೃತಙ್ಞತೆ ಸಲ್ಲಿಸುತ್ತದೆ. ಧನ್ಯವಾದಮೋದಿಭೈಜಾನ್” @naqvimukhtar

ಮತ್ತೊಂದು ಟ್ವೀಟ್ ಮೂಲಕ ನಖ್ವಿಯವರು, ಮೋದಿ ಸರಕಾರ ತ್ರಿವಳಿ ತಲಾಕ್ ಪದ್ಧತಿಯನ್ನು ಕ್ರಿಮಿನಲ್ ಅಪರಾಧವೆಂದು ಘೋಷಿಸುವ ಮೂಲಕ ಮುಸ್ಲಿ ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಿದ್ದಾರೆ ಎಂದಿದ್ದಾರೆ.

“ನರೇಂದ್ರ ಮೋದಿ ಸರಕಾರ ತ್ರಿವಳಿತಲಾಖ್ ಪದ್ಧತಿಯನ್ನು ಅಪರಾಧವೆಂದು ಪರಿಗಣಿಸುವ ನಿರ್ಧಾರ ತೆಗೆದುಕೊಂಡಿದ್ದು ಮುಸ್ಲಿಂ ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬುವುದರೊಂದಿಗೆ ಅವರನ್ನು ಸ್ವಾವಲಂಬಿಗಳನ್ನಾಗಿಸಿದೆ”@naqvimukhtar

ತ್ರಿವಳಿ ತಲಾಕ್ ಪದ್ಧತಿ ತೆಗೆದು ಹಾಕಿ ಮುಸ್ಲಿಂ ಮಹಿಳೆಯರ ರಕ್ಷಣೆ ಮತ್ತು ಹಕ್ಕುಗಳ ಕಾನೂನು ಜಾರಿಗೊಳಿಸಿದ ನಂತರ ಅಂಥ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆಯೆಂದು ಸಹ ನಖ್ವಿ ಹೇಳಿದ್ದಾರೆ.

ರವಿಶಂಕರ್ ಪ್ರಸಾದ್ ತಮ್ಮ ಟ್ವೀಟ್ನಲ್ಲಿ ಇಂದಿನ ದಿನ ಸುವರ್ಣಾಕ್ಷರಗಳಿಂದ ಬರೆದಿರುವಂಥದ್ದು ಎಂದಿದ್ದಾರೆ.

“31ನೇ ಜುಲೈ 2020 ದಿನವನ್ನು ನಾವು ಮುಸ್ಲಿಂಮಹಿಳೆಯರಹಕ್ಕುಗಳದಿನ ಎಂದು ಆಚರಿಸುತ್ತಿದ್ದೇವೆ. ಮುಸ್ಲಿಂ ಸಮುದಾಯದ ಮಹಿಳೆಯರಿಗೆ ನ್ಯಾಯಯುತ, ಆದರ ಮತ್ತು ಸಮಾನತೆಯ ಬದುಕು ನಡೆಸಲು ಅವಕಾಶ ಮಾಡಿಕೊಟ್ಟು, ತ್ರಿವಳಿ ತಲಾಖ್ನಂಥ ಕೆಟ್ಟ ಪದ್ಧತಿಯನ್ನು ನಿರ್ಮೂಲಗೊಳಿಸಿದ ಇಂದಿನ ದಿನವನ್ನು ಭಾರತೀಯ ಪ್ರಜಾಪ್ರಭತ್ವದಲ್ಲಿ ಸುವರ್ಣಾಕ್ಷರಗಳಿಂದ ಬರೆದ ದಿನವೆಂದು ಸ್ಮರಿಸಲಾಗುತ್ತದೆ”@rsprasad

ಭಾರತೀಯ ಜನತಾ ಪಕ್ಷವು, ಮುಸ್ಲಿಂ ಮಹಿಳೆಯರ ರಕ್ಷಣೆ ಮತ್ತು ಹಕ್ಕುಗಳ ಕಾನೂನು ಜಾರಿಗೆ ಬಂದ ನಂತರ ದಶಕಗಳಿಂದ ಆ ಸಮುದಾಯದ ಮಹಿಳೆಯರು ಅನುಭವಿಸುತ್ತಿದ್ದ ಬವಣೆ, ಶೋಷಣೆ ಮತ್ತು ಹಿಂಸೆ ಕೊನೆಗೊಂಡಿದೆ ಎಂದು ಟ್ವೀಟ್ ಮೂಲಕ ಹೇಳಿದೆ.

“ಶಹ ಬಾನು ಮೊದಲುಗೊಂಡು, ಶಾಯಿರಾ ಬಾನುವರೆಗೆ ದಶಕಗಳಿಂದ ಮುಸ್ಲಿಂ ಮಹಿಳೆಯರು ತ್ರಿವಳಿ ತಲಾಖ್ ಪೀಡೆಯನ್ನು ಎದುರಿಸುತ್ತಾ, ಆಸಮಾನತೆ ಮತ್ತು ಅಗೌರವಗಳೊಂದಿಗೆ ಜೂಜುತ್ತಾ ಸಮಾಜದಲ್ಲಿ ಬದುಕುತ್ತಿದ್ದರು. 1ಆಗಸ್ಟ, 2019 ರಂದು ಮೋದಿ ಸರಕಾರ ತ್ರಿವಳಿ ತಲಾಖ್ ವಿರುದ್ಧ ಕಾನೂನು ಜಾರಿಗೊಳಿಸಿದ ನಂತರ ಅವರು ನೆಮ್ಮದಿಯ ಬದುಕು ನಡೆಸುತ್ತಿದ್ದಾರೆ” @BJP4India.

Published On - 6:13 pm, Fri, 31 July 20

ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ