AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತ್ರಿವಳಿ ತಲಾಖ್​ನಿಂದ ಬೇಸತ್ತು ಗಂಡನ ಹಿಂದೂ ಗೆಳೆಯನನ್ನೇ ಮದುವೆಯಾದ ಮಹಿಳೆ

ಆಕೆಯ ಪತಿ ಆಕೆಗೆ ತ್ರಿವಳಿ ತಲಾಖ್ ನೀಡಿದ ನಂತರ ರುಬಿನಾ ಪ್ರೇಂಪಾಲ್ ಅವರನ್ನು ಮದುವೆಯಾಗಲು ನಿರ್ಧರಿಸಿದರು. ರುಬಿನಾ ಹಿಂದೂ ಧರ್ಮವನ್ನು ಸ್ವೀಕರಿಸಿ, ಪ್ರೇಂಪಾಲ್ ಅವರನ್ನು ಮದುವೆಯಾಗಿದ್ದಾರೆ.

Viral News: ತ್ರಿವಳಿ ತಲಾಖ್​ನಿಂದ ಬೇಸತ್ತು ಗಂಡನ ಹಿಂದೂ ಗೆಳೆಯನನ್ನೇ ಮದುವೆಯಾದ ಮಹಿಳೆ
TV9 Web
| Edited By: |

Updated on: Sep 24, 2022 | 4:32 PM

Share

ಲಕ್ನೋ: ತನ್ನ ಪತಿ ತ್ರಿವಳಿ ತಲಾಖ್ (Triple Talaq) ನೀಡಿದ ಹಿನ್ನೆಲೆಯಲ್ಲಿ ನೊಂದ ಮುಸ್ಲಿಂ ಮಹಿಳೆಯೊಬ್ಬರು ಇದೀಗ ಹಿಂದೂ (Hindu) ಧರ್ಮವನ್ನು ಸ್ವೀಕರಿಸಿದ್ದಾರೆ. ರುಬಿನಾ ಎಂಬ ಹೆಸರನ್ನು ಪುಷ್ಪಾ ಎಂದು ಬದಲಾಯಿಸಿಕೊಂಡಿರುವ ಆ ಮಹಿಳೆ ಬರೇಲಿಯ ನವಾಬ್‌ಗಂಜ್‌ನಲ್ಲಿ ಹಿಂದೂ ವ್ಯಕ್ತಿಯನ್ನು ಮದುವೆಯಾಗಿದ್ದಾರೆ. ತನ್ನ ಮುಸ್ಲಿಂ ಗಂಡನ ಗೆಳೆಯನಾಗಿದ್ದ ಹಿಂದೂ ವ್ಯಕ್ತಿಯನ್ನೇ 2ನೇ ಬಾರಿಗೆ ಮದುವೆಯಾಗುವ ಮೂಲಕ ಆ ಮಹಿಳೆ ಅಚ್ಚರಿ ಮೂಡಿಸಿದ್ದಾರೆ.

ಉತ್ತರಾಖಂಡದ ಹಲ್ದ್ವಾನಿ ನಿವಾಸಿ ಶೋಯೆಬ್ ಎಂಬಾತನ ಜೊತೆ ರುಬಿನಾ ಪ್ರೇಮ ಸಂಬಂಧ ಹೊಂದಿದ್ದರು. ಸುಮಾರು 9 ವರ್ಷಗಳ ಹಿಂದೆ ಇವರಿಬ್ಬರು ವಿವಾಹವಾಗಿದ್ದರು. ಮದುವೆಯಾದ ಕೆಲವು ವರ್ಷಗಳ ನಂತರ ದಂಪತಿಗಳ ನಡುವೆ ಜಗಳ ಪ್ರಾರಂಭವಾಯಿತು. ದಿನವೂ ಶೋಯೆಬ್ ರುಬಿನಾಳನ್ನು ಥಳಿಸುತ್ತಿದ್ದರು. ಆ ದಂಪತಿಗೆ ಮೂವರು ಗಂಡು ಮಕ್ಕಳಿದ್ದಾರೆ.

ಇದನ್ನೂ ಓದಿ: ತ್ರಿವಳಿ ತಲಾಖ್ ಇನ್ನೂ ಇದೆಯಾ? ಗಂಡನ ವಿರುದ್ಧ ತ್ರಿವಳಿ ತಲಾಖ್​​ ಪ್ರಕರಣ ದಾಖಲಿಸಿದ ಕೊಪ್ಪಳ ಮಹಿಳೆ!

ಒಂದು ವಾರದ ಹಿಂದೆ ಶೋಯೆಬ್ ಮತ್ತು ರುಬಿನಾ ನಡುವೆ ಮತ್ತೆ ಜಗಳವಾಗಿತ್ತು. ಇದಾದ ನಂತರ ಆಕೆಯ ಪತಿ ಆಕೆಯ ಮೇಲೆ ಹಲ್ಲೆ ನಡೆಸಿ ತ್ರಿವಳಿ ತಲಾಖ್ ನೀಡಿದ್ದ. ರುಬಿನಾ 5 ವರ್ಷಗಳ ಹಿಂದೆ ಬರೇಲಿಯ ಹೊರವಲಯದಲ್ಲಿರುವ ನವಾಬ್‌ಗಂಜ್ ನಿವಾಸಿ ಪ್ರೇಂಪಾಲ್ ಅವರನ್ನು ಭೇಟಿಯಾಗಿದ್ದರು. ಅವರು ಕೂಡ ರುಬಿನಾಳ ಗಂಡನ ಸ್ನೇಹಿತರಾಗಿದ್ದರು. ಆಕೆಯ ಪತಿ ಆಕೆಗೆ ತ್ರಿವಳಿ ತಲಾಖ್ ನೀಡಿದ ನಂತರ ರುಬಿನಾ ಪ್ರೇಂಪಾಲ್ ಅವರನ್ನು ಮದುವೆಯಾಗಲು ನಿರ್ಧರಿಸಿದರು. ರುಬಿನಾ ಹಿಂದೂ ಧರ್ಮವನ್ನು ಸ್ವೀಕರಿಸಿ, ಪ್ರೇಂಪಾಲ್ ಅವರನ್ನು ಮದುವೆಯಾಗಿದ್ದಾರೆ. ಅಲ್ಲದೆ, ತನ್ನ ಹೆಸರನ್ನು ಪುಷ್ಪಾ ದೇವಿ ಎಂದು ಬದಲಾಯಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್