Viral News: ತ್ರಿವಳಿ ತಲಾಖ್​ನಿಂದ ಬೇಸತ್ತು ಗಂಡನ ಹಿಂದೂ ಗೆಳೆಯನನ್ನೇ ಮದುವೆಯಾದ ಮಹಿಳೆ

ಆಕೆಯ ಪತಿ ಆಕೆಗೆ ತ್ರಿವಳಿ ತಲಾಖ್ ನೀಡಿದ ನಂತರ ರುಬಿನಾ ಪ್ರೇಂಪಾಲ್ ಅವರನ್ನು ಮದುವೆಯಾಗಲು ನಿರ್ಧರಿಸಿದರು. ರುಬಿನಾ ಹಿಂದೂ ಧರ್ಮವನ್ನು ಸ್ವೀಕರಿಸಿ, ಪ್ರೇಂಪಾಲ್ ಅವರನ್ನು ಮದುವೆಯಾಗಿದ್ದಾರೆ.

Viral News: ತ್ರಿವಳಿ ತಲಾಖ್​ನಿಂದ ಬೇಸತ್ತು ಗಂಡನ ಹಿಂದೂ ಗೆಳೆಯನನ್ನೇ ಮದುವೆಯಾದ ಮಹಿಳೆ
Follow us
| Updated By: ಸುಷ್ಮಾ ಚಕ್ರೆ

Updated on: Sep 24, 2022 | 4:32 PM

ಲಕ್ನೋ: ತನ್ನ ಪತಿ ತ್ರಿವಳಿ ತಲಾಖ್ (Triple Talaq) ನೀಡಿದ ಹಿನ್ನೆಲೆಯಲ್ಲಿ ನೊಂದ ಮುಸ್ಲಿಂ ಮಹಿಳೆಯೊಬ್ಬರು ಇದೀಗ ಹಿಂದೂ (Hindu) ಧರ್ಮವನ್ನು ಸ್ವೀಕರಿಸಿದ್ದಾರೆ. ರುಬಿನಾ ಎಂಬ ಹೆಸರನ್ನು ಪುಷ್ಪಾ ಎಂದು ಬದಲಾಯಿಸಿಕೊಂಡಿರುವ ಆ ಮಹಿಳೆ ಬರೇಲಿಯ ನವಾಬ್‌ಗಂಜ್‌ನಲ್ಲಿ ಹಿಂದೂ ವ್ಯಕ್ತಿಯನ್ನು ಮದುವೆಯಾಗಿದ್ದಾರೆ. ತನ್ನ ಮುಸ್ಲಿಂ ಗಂಡನ ಗೆಳೆಯನಾಗಿದ್ದ ಹಿಂದೂ ವ್ಯಕ್ತಿಯನ್ನೇ 2ನೇ ಬಾರಿಗೆ ಮದುವೆಯಾಗುವ ಮೂಲಕ ಆ ಮಹಿಳೆ ಅಚ್ಚರಿ ಮೂಡಿಸಿದ್ದಾರೆ.

ಉತ್ತರಾಖಂಡದ ಹಲ್ದ್ವಾನಿ ನಿವಾಸಿ ಶೋಯೆಬ್ ಎಂಬಾತನ ಜೊತೆ ರುಬಿನಾ ಪ್ರೇಮ ಸಂಬಂಧ ಹೊಂದಿದ್ದರು. ಸುಮಾರು 9 ವರ್ಷಗಳ ಹಿಂದೆ ಇವರಿಬ್ಬರು ವಿವಾಹವಾಗಿದ್ದರು. ಮದುವೆಯಾದ ಕೆಲವು ವರ್ಷಗಳ ನಂತರ ದಂಪತಿಗಳ ನಡುವೆ ಜಗಳ ಪ್ರಾರಂಭವಾಯಿತು. ದಿನವೂ ಶೋಯೆಬ್ ರುಬಿನಾಳನ್ನು ಥಳಿಸುತ್ತಿದ್ದರು. ಆ ದಂಪತಿಗೆ ಮೂವರು ಗಂಡು ಮಕ್ಕಳಿದ್ದಾರೆ.

ಇದನ್ನೂ ಓದಿ: ತ್ರಿವಳಿ ತಲಾಖ್ ಇನ್ನೂ ಇದೆಯಾ? ಗಂಡನ ವಿರುದ್ಧ ತ್ರಿವಳಿ ತಲಾಖ್​​ ಪ್ರಕರಣ ದಾಖಲಿಸಿದ ಕೊಪ್ಪಳ ಮಹಿಳೆ!

ಒಂದು ವಾರದ ಹಿಂದೆ ಶೋಯೆಬ್ ಮತ್ತು ರುಬಿನಾ ನಡುವೆ ಮತ್ತೆ ಜಗಳವಾಗಿತ್ತು. ಇದಾದ ನಂತರ ಆಕೆಯ ಪತಿ ಆಕೆಯ ಮೇಲೆ ಹಲ್ಲೆ ನಡೆಸಿ ತ್ರಿವಳಿ ತಲಾಖ್ ನೀಡಿದ್ದ. ರುಬಿನಾ 5 ವರ್ಷಗಳ ಹಿಂದೆ ಬರೇಲಿಯ ಹೊರವಲಯದಲ್ಲಿರುವ ನವಾಬ್‌ಗಂಜ್ ನಿವಾಸಿ ಪ್ರೇಂಪಾಲ್ ಅವರನ್ನು ಭೇಟಿಯಾಗಿದ್ದರು. ಅವರು ಕೂಡ ರುಬಿನಾಳ ಗಂಡನ ಸ್ನೇಹಿತರಾಗಿದ್ದರು. ಆಕೆಯ ಪತಿ ಆಕೆಗೆ ತ್ರಿವಳಿ ತಲಾಖ್ ನೀಡಿದ ನಂತರ ರುಬಿನಾ ಪ್ರೇಂಪಾಲ್ ಅವರನ್ನು ಮದುವೆಯಾಗಲು ನಿರ್ಧರಿಸಿದರು. ರುಬಿನಾ ಹಿಂದೂ ಧರ್ಮವನ್ನು ಸ್ವೀಕರಿಸಿ, ಪ್ರೇಂಪಾಲ್ ಅವರನ್ನು ಮದುವೆಯಾಗಿದ್ದಾರೆ. ಅಲ್ಲದೆ, ತನ್ನ ಹೆಸರನ್ನು ಪುಷ್ಪಾ ದೇವಿ ಎಂದು ಬದಲಾಯಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು