AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತ್ರಿವಳಿ ತಲಾಖ್​ನಿಂದ ಬೇಸತ್ತು ಗಂಡನ ಹಿಂದೂ ಗೆಳೆಯನನ್ನೇ ಮದುವೆಯಾದ ಮಹಿಳೆ

ಆಕೆಯ ಪತಿ ಆಕೆಗೆ ತ್ರಿವಳಿ ತಲಾಖ್ ನೀಡಿದ ನಂತರ ರುಬಿನಾ ಪ್ರೇಂಪಾಲ್ ಅವರನ್ನು ಮದುವೆಯಾಗಲು ನಿರ್ಧರಿಸಿದರು. ರುಬಿನಾ ಹಿಂದೂ ಧರ್ಮವನ್ನು ಸ್ವೀಕರಿಸಿ, ಪ್ರೇಂಪಾಲ್ ಅವರನ್ನು ಮದುವೆಯಾಗಿದ್ದಾರೆ.

Viral News: ತ್ರಿವಳಿ ತಲಾಖ್​ನಿಂದ ಬೇಸತ್ತು ಗಂಡನ ಹಿಂದೂ ಗೆಳೆಯನನ್ನೇ ಮದುವೆಯಾದ ಮಹಿಳೆ
TV9 Web
| Edited By: |

Updated on: Sep 24, 2022 | 4:32 PM

Share

ಲಕ್ನೋ: ತನ್ನ ಪತಿ ತ್ರಿವಳಿ ತಲಾಖ್ (Triple Talaq) ನೀಡಿದ ಹಿನ್ನೆಲೆಯಲ್ಲಿ ನೊಂದ ಮುಸ್ಲಿಂ ಮಹಿಳೆಯೊಬ್ಬರು ಇದೀಗ ಹಿಂದೂ (Hindu) ಧರ್ಮವನ್ನು ಸ್ವೀಕರಿಸಿದ್ದಾರೆ. ರುಬಿನಾ ಎಂಬ ಹೆಸರನ್ನು ಪುಷ್ಪಾ ಎಂದು ಬದಲಾಯಿಸಿಕೊಂಡಿರುವ ಆ ಮಹಿಳೆ ಬರೇಲಿಯ ನವಾಬ್‌ಗಂಜ್‌ನಲ್ಲಿ ಹಿಂದೂ ವ್ಯಕ್ತಿಯನ್ನು ಮದುವೆಯಾಗಿದ್ದಾರೆ. ತನ್ನ ಮುಸ್ಲಿಂ ಗಂಡನ ಗೆಳೆಯನಾಗಿದ್ದ ಹಿಂದೂ ವ್ಯಕ್ತಿಯನ್ನೇ 2ನೇ ಬಾರಿಗೆ ಮದುವೆಯಾಗುವ ಮೂಲಕ ಆ ಮಹಿಳೆ ಅಚ್ಚರಿ ಮೂಡಿಸಿದ್ದಾರೆ.

ಉತ್ತರಾಖಂಡದ ಹಲ್ದ್ವಾನಿ ನಿವಾಸಿ ಶೋಯೆಬ್ ಎಂಬಾತನ ಜೊತೆ ರುಬಿನಾ ಪ್ರೇಮ ಸಂಬಂಧ ಹೊಂದಿದ್ದರು. ಸುಮಾರು 9 ವರ್ಷಗಳ ಹಿಂದೆ ಇವರಿಬ್ಬರು ವಿವಾಹವಾಗಿದ್ದರು. ಮದುವೆಯಾದ ಕೆಲವು ವರ್ಷಗಳ ನಂತರ ದಂಪತಿಗಳ ನಡುವೆ ಜಗಳ ಪ್ರಾರಂಭವಾಯಿತು. ದಿನವೂ ಶೋಯೆಬ್ ರುಬಿನಾಳನ್ನು ಥಳಿಸುತ್ತಿದ್ದರು. ಆ ದಂಪತಿಗೆ ಮೂವರು ಗಂಡು ಮಕ್ಕಳಿದ್ದಾರೆ.

ಇದನ್ನೂ ಓದಿ: ತ್ರಿವಳಿ ತಲಾಖ್ ಇನ್ನೂ ಇದೆಯಾ? ಗಂಡನ ವಿರುದ್ಧ ತ್ರಿವಳಿ ತಲಾಖ್​​ ಪ್ರಕರಣ ದಾಖಲಿಸಿದ ಕೊಪ್ಪಳ ಮಹಿಳೆ!

ಒಂದು ವಾರದ ಹಿಂದೆ ಶೋಯೆಬ್ ಮತ್ತು ರುಬಿನಾ ನಡುವೆ ಮತ್ತೆ ಜಗಳವಾಗಿತ್ತು. ಇದಾದ ನಂತರ ಆಕೆಯ ಪತಿ ಆಕೆಯ ಮೇಲೆ ಹಲ್ಲೆ ನಡೆಸಿ ತ್ರಿವಳಿ ತಲಾಖ್ ನೀಡಿದ್ದ. ರುಬಿನಾ 5 ವರ್ಷಗಳ ಹಿಂದೆ ಬರೇಲಿಯ ಹೊರವಲಯದಲ್ಲಿರುವ ನವಾಬ್‌ಗಂಜ್ ನಿವಾಸಿ ಪ್ರೇಂಪಾಲ್ ಅವರನ್ನು ಭೇಟಿಯಾಗಿದ್ದರು. ಅವರು ಕೂಡ ರುಬಿನಾಳ ಗಂಡನ ಸ್ನೇಹಿತರಾಗಿದ್ದರು. ಆಕೆಯ ಪತಿ ಆಕೆಗೆ ತ್ರಿವಳಿ ತಲಾಖ್ ನೀಡಿದ ನಂತರ ರುಬಿನಾ ಪ್ರೇಂಪಾಲ್ ಅವರನ್ನು ಮದುವೆಯಾಗಲು ನಿರ್ಧರಿಸಿದರು. ರುಬಿನಾ ಹಿಂದೂ ಧರ್ಮವನ್ನು ಸ್ವೀಕರಿಸಿ, ಪ್ರೇಂಪಾಲ್ ಅವರನ್ನು ಮದುವೆಯಾಗಿದ್ದಾರೆ. ಅಲ್ಲದೆ, ತನ್ನ ಹೆಸರನ್ನು ಪುಷ್ಪಾ ದೇವಿ ಎಂದು ಬದಲಾಯಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ