AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತ್ರಿವಳಿ ತಲಾಖ್​ನಿಂದ ಬೇಸತ್ತು ಗಂಡನ ಹಿಂದೂ ಗೆಳೆಯನನ್ನೇ ಮದುವೆಯಾದ ಮಹಿಳೆ

ಆಕೆಯ ಪತಿ ಆಕೆಗೆ ತ್ರಿವಳಿ ತಲಾಖ್ ನೀಡಿದ ನಂತರ ರುಬಿನಾ ಪ್ರೇಂಪಾಲ್ ಅವರನ್ನು ಮದುವೆಯಾಗಲು ನಿರ್ಧರಿಸಿದರು. ರುಬಿನಾ ಹಿಂದೂ ಧರ್ಮವನ್ನು ಸ್ವೀಕರಿಸಿ, ಪ್ರೇಂಪಾಲ್ ಅವರನ್ನು ಮದುವೆಯಾಗಿದ್ದಾರೆ.

Viral News: ತ್ರಿವಳಿ ತಲಾಖ್​ನಿಂದ ಬೇಸತ್ತು ಗಂಡನ ಹಿಂದೂ ಗೆಳೆಯನನ್ನೇ ಮದುವೆಯಾದ ಮಹಿಳೆ
TV9 Web
| Edited By: |

Updated on: Sep 24, 2022 | 4:32 PM

Share

ಲಕ್ನೋ: ತನ್ನ ಪತಿ ತ್ರಿವಳಿ ತಲಾಖ್ (Triple Talaq) ನೀಡಿದ ಹಿನ್ನೆಲೆಯಲ್ಲಿ ನೊಂದ ಮುಸ್ಲಿಂ ಮಹಿಳೆಯೊಬ್ಬರು ಇದೀಗ ಹಿಂದೂ (Hindu) ಧರ್ಮವನ್ನು ಸ್ವೀಕರಿಸಿದ್ದಾರೆ. ರುಬಿನಾ ಎಂಬ ಹೆಸರನ್ನು ಪುಷ್ಪಾ ಎಂದು ಬದಲಾಯಿಸಿಕೊಂಡಿರುವ ಆ ಮಹಿಳೆ ಬರೇಲಿಯ ನವಾಬ್‌ಗಂಜ್‌ನಲ್ಲಿ ಹಿಂದೂ ವ್ಯಕ್ತಿಯನ್ನು ಮದುವೆಯಾಗಿದ್ದಾರೆ. ತನ್ನ ಮುಸ್ಲಿಂ ಗಂಡನ ಗೆಳೆಯನಾಗಿದ್ದ ಹಿಂದೂ ವ್ಯಕ್ತಿಯನ್ನೇ 2ನೇ ಬಾರಿಗೆ ಮದುವೆಯಾಗುವ ಮೂಲಕ ಆ ಮಹಿಳೆ ಅಚ್ಚರಿ ಮೂಡಿಸಿದ್ದಾರೆ.

ಉತ್ತರಾಖಂಡದ ಹಲ್ದ್ವಾನಿ ನಿವಾಸಿ ಶೋಯೆಬ್ ಎಂಬಾತನ ಜೊತೆ ರುಬಿನಾ ಪ್ರೇಮ ಸಂಬಂಧ ಹೊಂದಿದ್ದರು. ಸುಮಾರು 9 ವರ್ಷಗಳ ಹಿಂದೆ ಇವರಿಬ್ಬರು ವಿವಾಹವಾಗಿದ್ದರು. ಮದುವೆಯಾದ ಕೆಲವು ವರ್ಷಗಳ ನಂತರ ದಂಪತಿಗಳ ನಡುವೆ ಜಗಳ ಪ್ರಾರಂಭವಾಯಿತು. ದಿನವೂ ಶೋಯೆಬ್ ರುಬಿನಾಳನ್ನು ಥಳಿಸುತ್ತಿದ್ದರು. ಆ ದಂಪತಿಗೆ ಮೂವರು ಗಂಡು ಮಕ್ಕಳಿದ್ದಾರೆ.

ಇದನ್ನೂ ಓದಿ: ತ್ರಿವಳಿ ತಲಾಖ್ ಇನ್ನೂ ಇದೆಯಾ? ಗಂಡನ ವಿರುದ್ಧ ತ್ರಿವಳಿ ತಲಾಖ್​​ ಪ್ರಕರಣ ದಾಖಲಿಸಿದ ಕೊಪ್ಪಳ ಮಹಿಳೆ!

ಒಂದು ವಾರದ ಹಿಂದೆ ಶೋಯೆಬ್ ಮತ್ತು ರುಬಿನಾ ನಡುವೆ ಮತ್ತೆ ಜಗಳವಾಗಿತ್ತು. ಇದಾದ ನಂತರ ಆಕೆಯ ಪತಿ ಆಕೆಯ ಮೇಲೆ ಹಲ್ಲೆ ನಡೆಸಿ ತ್ರಿವಳಿ ತಲಾಖ್ ನೀಡಿದ್ದ. ರುಬಿನಾ 5 ವರ್ಷಗಳ ಹಿಂದೆ ಬರೇಲಿಯ ಹೊರವಲಯದಲ್ಲಿರುವ ನವಾಬ್‌ಗಂಜ್ ನಿವಾಸಿ ಪ್ರೇಂಪಾಲ್ ಅವರನ್ನು ಭೇಟಿಯಾಗಿದ್ದರು. ಅವರು ಕೂಡ ರುಬಿನಾಳ ಗಂಡನ ಸ್ನೇಹಿತರಾಗಿದ್ದರು. ಆಕೆಯ ಪತಿ ಆಕೆಗೆ ತ್ರಿವಳಿ ತಲಾಖ್ ನೀಡಿದ ನಂತರ ರುಬಿನಾ ಪ್ರೇಂಪಾಲ್ ಅವರನ್ನು ಮದುವೆಯಾಗಲು ನಿರ್ಧರಿಸಿದರು. ರುಬಿನಾ ಹಿಂದೂ ಧರ್ಮವನ್ನು ಸ್ವೀಕರಿಸಿ, ಪ್ರೇಂಪಾಲ್ ಅವರನ್ನು ಮದುವೆಯಾಗಿದ್ದಾರೆ. ಅಲ್ಲದೆ, ತನ್ನ ಹೆಸರನ್ನು ಪುಷ್ಪಾ ದೇವಿ ಎಂದು ಬದಲಾಯಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್