AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತ್ರಿವಳಿ ತಲಾಖ್​ನಿಂದ ಬೇಸತ್ತು ಗಂಡನ ಹಿಂದೂ ಗೆಳೆಯನನ್ನೇ ಮದುವೆಯಾದ ಮಹಿಳೆ

ಆಕೆಯ ಪತಿ ಆಕೆಗೆ ತ್ರಿವಳಿ ತಲಾಖ್ ನೀಡಿದ ನಂತರ ರುಬಿನಾ ಪ್ರೇಂಪಾಲ್ ಅವರನ್ನು ಮದುವೆಯಾಗಲು ನಿರ್ಧರಿಸಿದರು. ರುಬಿನಾ ಹಿಂದೂ ಧರ್ಮವನ್ನು ಸ್ವೀಕರಿಸಿ, ಪ್ರೇಂಪಾಲ್ ಅವರನ್ನು ಮದುವೆಯಾಗಿದ್ದಾರೆ.

Viral News: ತ್ರಿವಳಿ ತಲಾಖ್​ನಿಂದ ಬೇಸತ್ತು ಗಂಡನ ಹಿಂದೂ ಗೆಳೆಯನನ್ನೇ ಮದುವೆಯಾದ ಮಹಿಳೆ
TV9 Web
| Edited By: |

Updated on: Sep 24, 2022 | 4:32 PM

Share

ಲಕ್ನೋ: ತನ್ನ ಪತಿ ತ್ರಿವಳಿ ತಲಾಖ್ (Triple Talaq) ನೀಡಿದ ಹಿನ್ನೆಲೆಯಲ್ಲಿ ನೊಂದ ಮುಸ್ಲಿಂ ಮಹಿಳೆಯೊಬ್ಬರು ಇದೀಗ ಹಿಂದೂ (Hindu) ಧರ್ಮವನ್ನು ಸ್ವೀಕರಿಸಿದ್ದಾರೆ. ರುಬಿನಾ ಎಂಬ ಹೆಸರನ್ನು ಪುಷ್ಪಾ ಎಂದು ಬದಲಾಯಿಸಿಕೊಂಡಿರುವ ಆ ಮಹಿಳೆ ಬರೇಲಿಯ ನವಾಬ್‌ಗಂಜ್‌ನಲ್ಲಿ ಹಿಂದೂ ವ್ಯಕ್ತಿಯನ್ನು ಮದುವೆಯಾಗಿದ್ದಾರೆ. ತನ್ನ ಮುಸ್ಲಿಂ ಗಂಡನ ಗೆಳೆಯನಾಗಿದ್ದ ಹಿಂದೂ ವ್ಯಕ್ತಿಯನ್ನೇ 2ನೇ ಬಾರಿಗೆ ಮದುವೆಯಾಗುವ ಮೂಲಕ ಆ ಮಹಿಳೆ ಅಚ್ಚರಿ ಮೂಡಿಸಿದ್ದಾರೆ.

ಉತ್ತರಾಖಂಡದ ಹಲ್ದ್ವಾನಿ ನಿವಾಸಿ ಶೋಯೆಬ್ ಎಂಬಾತನ ಜೊತೆ ರುಬಿನಾ ಪ್ರೇಮ ಸಂಬಂಧ ಹೊಂದಿದ್ದರು. ಸುಮಾರು 9 ವರ್ಷಗಳ ಹಿಂದೆ ಇವರಿಬ್ಬರು ವಿವಾಹವಾಗಿದ್ದರು. ಮದುವೆಯಾದ ಕೆಲವು ವರ್ಷಗಳ ನಂತರ ದಂಪತಿಗಳ ನಡುವೆ ಜಗಳ ಪ್ರಾರಂಭವಾಯಿತು. ದಿನವೂ ಶೋಯೆಬ್ ರುಬಿನಾಳನ್ನು ಥಳಿಸುತ್ತಿದ್ದರು. ಆ ದಂಪತಿಗೆ ಮೂವರು ಗಂಡು ಮಕ್ಕಳಿದ್ದಾರೆ.

ಇದನ್ನೂ ಓದಿ: ತ್ರಿವಳಿ ತಲಾಖ್ ಇನ್ನೂ ಇದೆಯಾ? ಗಂಡನ ವಿರುದ್ಧ ತ್ರಿವಳಿ ತಲಾಖ್​​ ಪ್ರಕರಣ ದಾಖಲಿಸಿದ ಕೊಪ್ಪಳ ಮಹಿಳೆ!

ಒಂದು ವಾರದ ಹಿಂದೆ ಶೋಯೆಬ್ ಮತ್ತು ರುಬಿನಾ ನಡುವೆ ಮತ್ತೆ ಜಗಳವಾಗಿತ್ತು. ಇದಾದ ನಂತರ ಆಕೆಯ ಪತಿ ಆಕೆಯ ಮೇಲೆ ಹಲ್ಲೆ ನಡೆಸಿ ತ್ರಿವಳಿ ತಲಾಖ್ ನೀಡಿದ್ದ. ರುಬಿನಾ 5 ವರ್ಷಗಳ ಹಿಂದೆ ಬರೇಲಿಯ ಹೊರವಲಯದಲ್ಲಿರುವ ನವಾಬ್‌ಗಂಜ್ ನಿವಾಸಿ ಪ್ರೇಂಪಾಲ್ ಅವರನ್ನು ಭೇಟಿಯಾಗಿದ್ದರು. ಅವರು ಕೂಡ ರುಬಿನಾಳ ಗಂಡನ ಸ್ನೇಹಿತರಾಗಿದ್ದರು. ಆಕೆಯ ಪತಿ ಆಕೆಗೆ ತ್ರಿವಳಿ ತಲಾಖ್ ನೀಡಿದ ನಂತರ ರುಬಿನಾ ಪ್ರೇಂಪಾಲ್ ಅವರನ್ನು ಮದುವೆಯಾಗಲು ನಿರ್ಧರಿಸಿದರು. ರುಬಿನಾ ಹಿಂದೂ ಧರ್ಮವನ್ನು ಸ್ವೀಕರಿಸಿ, ಪ್ರೇಂಪಾಲ್ ಅವರನ್ನು ಮದುವೆಯಾಗಿದ್ದಾರೆ. ಅಲ್ಲದೆ, ತನ್ನ ಹೆಸರನ್ನು ಪುಷ್ಪಾ ದೇವಿ ಎಂದು ಬದಲಾಯಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ