AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರಿಗೆ ಉದ್ಯಮಿಯೊಬ್ಬರು ಸಹಾಯ ಮಾಡುತ್ತಿರುವ ವಿಡಿಯೋ ವೈರಲ್

ತ್ರಿಪುರಾದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಉದ್ಯಮಿಯೊಬ್ಬರು ಶಸ್ತ್ರಚಿಕಿತ್ಸೆ ವೇಳೆ ವೈದ್ಯರಿಗೆ ಸಹಾಯ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ತನಿಖೆ ಆರಂಭವಾಗಿದೆ. ಶಸ್ತ್ರ ಚಿಕಿತ್ಸೆ ವೇಳೆ ವೈದ್ಯರನ್ನು ಹೊರತುಪಡಿಸಿ ಹೊರಗಿನವರಿಗೆ ಅವಕಾಶ ನೀಡುವುದಿಲ್ಲ ಎಂದು ಆಸ್ಪತ್ರೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರಿಗೆ ಉದ್ಯಮಿಯೊಬ್ಬರು ಸಹಾಯ ಮಾಡುತ್ತಿರುವ ವಿಡಿಯೋ ವೈರಲ್
ಶಸ್ತ್ರಚಿಕಿತ್ಸೆImage Credit source: India Today
ನಯನಾ ರಾಜೀವ್
|

Updated on: Feb 11, 2024 | 8:32 AM

Share

ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ(Operation) ವೇಳೆ ವೈದ್ಯರಿಗೆ ಉದ್ಯಮಿಯೊಬ್ಬರು ಸಹಾಯ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತ್ರಿಪುರಾ ಆರೋಗ್ಯ ಇಲಾಖೆಯು ಅಗರ್ತಲಾದ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಶಸ್ತ್ರಚಿಕಿತ್ಸಕರಿಗೆ ಉದ್ಯಮಿಯೊಬ್ಬರು ಆರ್ಥೋಪೆಡಿಕ್ ಇಂಪ್ಲಾಂಟ್ ಸಾಮಗ್ರಿಗಳನ್ನು ನೀಡಿ ಸಹಾಯ ಮಾಡಿದ ಘಟನೆಯ ಕುರಿತು ತನಿಖೆಗೆ ಆದೇಶಿಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಜನವರಿ 19 ರಂದು ಇಂದಿರಾಗಾಂಧಿ ಸ್ಮಾರಕ (ಐಜಿಎಂ) ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ರೋಗಿಗಳ ಶಸ್ತ್ರಚಿಕಿತ್ಸಾ ವಿಧಾನಗಳಲ್ಲಿ ವ್ಯಕ್ತಿಯೊಬ್ಬರು ಶಸ್ತ್ರಚಿಕಿತ್ಸಕರ ಏಪ್ರನ್ ಧರಿಸಿ ಇಬ್ಬರು ಮೂಳೆ ಶಸ್ತ್ರಚಿಕಿತ್ಸಕರಿಗೆ ಸಹಾಯ ಮಾಡುತ್ತಿರುವುದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಐಜಿಎಂ ಆಸ್ಪತ್ರೆಯು ತ್ರಿಪುರಾದ ಎರಡನೇ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆಯಾಗಿದೆ. ಜಂತು ದೇಬನಾಥ್ ಎಂದು ಗುರುತಿಸಲಾದ ವ್ಯಕ್ತಿ ಆಪರೇಷನ್ ಸಂದರ್ಭದಲ್ಲಿ ಅಲ್ಲಿದ್ದರು ಎನ್ನಲಾಗಿದೆ. ಈ ವಿಡಿಯೋ ಆಧಾರದ ಮೇಲೆ ಆರೋಗ್ಯ ಸೇವೆಗಳ ಜಂಟಿ ನಿರ್ದೇಶಕ ಡಾ ಸೌವಿಕ್ ದೆಬ್ಬರ್ಮಾ ನೇತೃತ್ವದ ನಾಲ್ವರು ಸದಸ್ಯರ ಸಮಿತಿಯು ಘಟನೆಯ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಿ ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: Guntur GGH: ಪೋಕಿರಿ ಪಿಕ್ಚರ್​​​ ತೋರಿಸ್ತಾ ಮೆದುಳಿಗೇ ಶಸ್ತ್ರಚಿಕಿತ್ಸೆ ಮಾಡಿ, ಪವಾಡ ಮೆರೆದ ಸರ್ಕಾರಿ ಆಸ್ಪತ್ರೆ ವೈದ್ಯರು

ಘಟನೆ ನಿಜವೆಂದು ಸಾಬೀತಾದರೆ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಉದ್ಯಮಿಯಾಗಲಿ ಇನ್ಯಾರೇ ಆಗಲಿ ಇರುವಂತಿಲ್ಲ ಎಂದಿದ್ದಾರೆ. ಆಪರೇಷನ್ ಥಿಯೇಟರ್‌ನಲ್ಲಿ ಶಸ್ತ್ರಚಿಕಿತ್ಸಾ ವಿಧಾನಗಳ ಸಮಯದಲ್ಲಿ ಜಂತು ದೇಬಂತ್ ಇರಲಿಲ್ಲ ಅಥವಾ ಮೂಳೆ ಶಸ್ತ್ರಚಿಕಿತ್ಸಕರಿಗೆ ಸಹಾಯ ಮಾಡಲಿಲ್ಲ ಎಂದು ಐಜಿಎಂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದೇಬಶ್ರೀ  ಹೇಳಿದ್ದಾರೆ. ಹೊರಗಿನವರನ್ನು ಆಪರೇಷನ್ ಥಿಯೇಟರ್​ಗೆ ಬಿಟ್ಟುಕೊಳ್ಳುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ, ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್