AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿಪುರಾ: ಹಿಜಾಬ್ ಧರಿಸಿ ಶಾಲೆಗೆ ಪ್ರವೇಶಿಸದಂತೆ ತಡೆದ ಹಿಂದೂ ಯುವಕರು, ಇದನ್ನು ಪ್ರಶ್ನಿಸಿದ ಹುಡುಗನಿಗೆ ಥಳಿತ

ಹಿಂದೂ ಯುವಕರು ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ಶಾಲೆ ಒಳಗೆ ಪ್ರವೇಶಿಸದಂತೆ ತಡೆದಿದ್ದಾರೆ, ಇದನ್ನು ಪ್ರಶ್ನಿಸಿದ ಅನ್ಯಕೋಮಿನ ಹುಡುಗನನ್ನು ಥಳಿಸಿದ್ದಾರೆ.

ತ್ರಿಪುರಾ: ಹಿಜಾಬ್ ಧರಿಸಿ ಶಾಲೆಗೆ ಪ್ರವೇಶಿಸದಂತೆ ತಡೆದ ಹಿಂದೂ ಯುವಕರು, ಇದನ್ನು ಪ್ರಶ್ನಿಸಿದ ಹುಡುಗನಿಗೆ ಥಳಿತ
ಸಾಂದರ್ಭಿಕ ಚಿತ್ರ Image Credit source: pexels
ಅಕ್ಷಯ್​ ಪಲ್ಲಮಜಲು​​
|

Updated on: Aug 05, 2023 | 11:13 AM

Share

ಗುವಾಹಟಿ, ಆ.5: ಹಿಂದೂ ಯುವಕರು ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ಶಾಲೆ ಒಳಗೆ ಪ್ರವೇಶಿಸದಂತೆ ತಡೆದಿದ್ದಾರೆ, ಇದನ್ನು ಪ್ರಶ್ನಿಸಿದ ಅನ್ಯಕೋಮಿನ ಹುಡುಗನನ್ನು ಥಳಿಸಿರುವ ಘಟನೆ ಶುಕ್ರವಾರ (ಆ.4) ತ್ರಿಪುರಾದಲ್ಲಿ ನಡೆದಿದೆ. 10ನೇ ತರಗತಿಯ ವಿದ್ಯಾರ್ಥಿಯನ್ನು ಶಾಲೆಯ ಮುಂದೆ ಎಳೆದೊಯ್ದು ಥಳಿಸಲಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಈ ಘಟನೆ ಮುಖ್ಯೋಪಾಧ್ಯಾಯರು ಮತ್ತು ಇತರ ಶಿಕ್ಷಕರ ಮುಂದೆಯೇ ನಡೆದಿದ್ದರು ಯಾರು ಕೂಡ ಆ ಹುಡುಗನನ್ನು ಕಾಪಾಡಲು ಬರಲಿಲ್ಲ, ಈ ಘಟನೆಯನ್ನು ವಿರೋಧಿಸಿ ಸ್ಥಳೀಯರು ಶಾಲೆಯ ಮುಂದೆ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಇನ್ನು ಈ ಹಿಂದೂ ಯುವಕರು ಹೊರಗಿನವರು, ಅವರಿಗೂ ಶಾಲೆಗೂ ಯಾವುದೇ ಸಂಬಂಧವಿಲ್ಲ ಎಂದು ವರದಿ ತಿಳಿಸಿದೆ. ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಸದ್ಯ ಪರಿಸ್ಥಿತಿ ನಿಯಂತ್ರದಲ್ಲಿದ್ದು, ಘಟನೆಯ ನಂತರ ಸೆಪಹಿಜಾಲಾ ಜಿಲ್ಲೆಯ ಬಿಶಾಲ್‌ಘರ್​​ದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿತ್ತು ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಶಾಲೆಯ ಸಿಬ್ಬಂದಿಗಳ ಪ್ರಕಾರ, ದಾಳಿ ಮಾಡಿದ ಹಿಂದೂ ಯುವಕರು ಶಾಲೆಯ ಹಿರಿಯ ವಿದ್ಯಾರ್ಥಿಗಳಾಗಿದ್ದು, ಈ ಹಿಂದೆ ಶಾಲೆಯಲ್ಲಿ ಹಿಜಾಬ್​​​ ಧರಿಸಲು ಅವಕಾಶ ನೀಡಬಾರದು ಎಂದು ಮುಖ್ಯೋಪಾಧ್ಯಾಯರನ್ನು ಮನವಿ ಮಾಡಿಕೊಂಡಿದ್ದರು. ಬಳಿಕ ಮುಖ್ಯೋಪಾಧ್ಯಾಯರು ಈ ಬಗ್ಗೆ ಒಂದು ಆದೇಶವನ್ನು ನೀಡಿ ಹಿಜಾಬ್​​ ಧರಿಸಬಾರದು ಎಂದು ಹೇಳಿದ್ದಾರೆ. ಅದರೂ ಕೆಲವು ವಿದ್ಯಾರ್ಥಿನಿಯರು ಸಮಸ್ತ್ರದ ಮೇಲೆ ಹಿಜಾಬ್​​ ಧರಿಸಿಕೊಂಡು ಬಂದಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್​ಗೆ ಅವಕಾಶ ನಿರಾಕರಣೆ; ಪರೀಕ್ಷೆ ಬರೆಯಲಿಲ್ಲ ಉಡುಪಿಯ ಇಬ್ಬರು ವಿದ್ಯಾರ್ಥಿನಿಯರು

ಇಂತಹ ನಿಯಮದ ಬಗ್ಗೆ ಸಂಬಂಧಪಟ್ಟ ಸರಕಾರಿ ಇಲಾಖೆಯಿಂದ ಸ್ಪಷ್ಟ ಸೂಚನೆ ಇಲ್ಲದ ಕಾರಣ ಶಾಲೆಯಲ್ಲಿ ಹಿಜಾಬ್ ಧರಿಸದಂತೆ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳಿಗೆ ಮೌಖಿಕವಾಗಿ ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿರುವುದರಿಂದ ಇದು ಕೋಮುವಾದ ವಿಷಯವಲ್ಲ ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಟ್ವೀಟ್ ಮಾಡಿದ್ದಾರೆ.

ಈ ಪ್ರದೇಶದಲ್ಲಿ ಹಿಂದೂ -ಮುಸ್ಲಿಂ ಸಮುದಾಯದ ಜನ ಇರುವುದರಿಂದ ಇಲ್ಲಿ ಹೆಚ್ಚಿನ ಪೊಲೀಸ್​​ ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ಶಾಲೆಗೆ ರಜೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು