AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tripura Rath Yatra: ತ್ರಿಪುರಾ; ರಥೋತ್ಸವದ ವೇಳೆ ತಗುಲಿದ ಹೈಟೆನ್ಷನ್ ತಂತಿ, 7 ಮಂದಿ ಸಾವು

ಹೈಟೆನ್ಷನ್ ತಂತಿ ತಗುಲಿದಾಗ ಸಾವಿರಾರು ಜನರು ರಥವನ್ನು ಎಳೆಯುತ್ತಿದ್ದರು. ಎಲ್ಲಾ ಗಾಯಾಳುಗಳಿಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಹಾಯಕ ಇನ್ಸ್‌ಪೆಕ್ಟರ್ ಜನರಲ್ (ಕಾನೂನು ಮತ್ತು ಸುವ್ಯವಸ್ಥೆ) ಜ್ಯೋತಿಷ್ಮನ್ ದಾಸ್ ಚೌಧರಿ ತಿಳಿಸಿದ್ದಾರೆ.

Tripura Rath Yatra: ತ್ರಿಪುರಾ; ರಥೋತ್ಸವದ ವೇಳೆ ತಗುಲಿದ ಹೈಟೆನ್ಷನ್ ತಂತಿ, 7 ಮಂದಿ ಸಾವು
ತ್ರಿಪುರಾ; ರಥೋತ್ಸವದ ವೇಳೆ ತಗುಲಿದ ಹೈಟೆನ್ಷನ್ ತಂತಿ, 7 ಮಂದಿ ಸಾವು
ಗಣಪತಿ ಶರ್ಮಾ
|

Updated on: Jun 28, 2023 | 10:18 PM

Share

ಅಗರ್ತಲ: ತ್ರಿಪುರಾದ ಕುಮಾರ್‌ಘಾಟ್ ಪಟ್ಟಣದ (Kumarghat) ಉನಕೋಟಿಯಲ್ಲಿ ರಥೋತ್ಸವದ ವೇಳೆ ರಥಕ್ಕೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಭಗವಾನ್ ಜಗನ್ನಾಥನ ‘ಉಲ್ಟಾ ರಥ ಯಾತ್ರೆ’ (Rath Yatra) ಉತ್ಸವದ ಸಂದರ್ಭದಲ್ಲಿ, ಕುಮಾರ್‌ಘಾಟ್ ಪ್ರದೇಶದಲ್ಲಿ ಸಂಜೆ 4.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈಟೆನ್ಷನ್ ತಂತಿ ತಗುಲಿ ಅಪಘಾತ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಪ್ರಾಣಹಾನಿಗೆ ಸಂತಾಪ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರ ಅವರ ಜೊತೆ ನಿಂತಿದೆ ಎಂದು ಸಹಾ ಹೇಳಿದ್ದಾರೆ.

ಹೈಟೆನ್ಷನ್ ತಂತಿ ತಗುಲಿದಾಗ ಸಾವಿರಾರು ಜನರು ರಥವನ್ನು ಎಳೆಯುತ್ತಿದ್ದರು. ಎಲ್ಲಾ ಗಾಯಾಳುಗಳಿಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಹಾಯಕ ಇನ್ಸ್‌ಪೆಕ್ಟರ್ ಜನರಲ್ (ಕಾನೂನು ಮತ್ತು ಸುವ್ಯವಸ್ಥೆ) ಜ್ಯೋತಿಷ್ಮನ್ ದಾಸ್ ಚೌಧರಿ ತಿಳಿಸಿದ್ದಾರೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Chandrashekhar Azad: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಉತ್ತರ ಪ್ರದೇಶದ ಸಹರಾನ್​ಪುರದಲ್ಲಿ ಗುಂಡಿನ ದಾಳಿ

ಸುಟ್ಟಗಾಯಗಳಾಗಿರುವ ಇಬ್ಬರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದರ ನಂತರ, 10-12 ಜನರನ್ನು ಆಸ್ಪತ್ರೆಗೆ ಕರೆತರಲಾಯಿತು. ಆ ಪೈಕಿ ಇಬ್ಬರು ಮಕ್ಕಳು ಸೇರಿದಂತೆ 7 ಮಂದಿ ಮೃತಪಟ್ಟರು. 6-7 ಜನರಿಗೆ ಸುಟ್ಟ ಗಾಯಗಳಾಗಿವೆ. ಇನ್ನು ಆರು ಮಂದಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಮಾರ್‌ಘಾಟ್ ಉಪವಿಭಾಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ ಸಂಜಿತ್ ಚಕ್ಮಾ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ