AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tripura Rath Yatra: ತ್ರಿಪುರಾ; ರಥೋತ್ಸವದ ವೇಳೆ ತಗುಲಿದ ಹೈಟೆನ್ಷನ್ ತಂತಿ, 7 ಮಂದಿ ಸಾವು

ಹೈಟೆನ್ಷನ್ ತಂತಿ ತಗುಲಿದಾಗ ಸಾವಿರಾರು ಜನರು ರಥವನ್ನು ಎಳೆಯುತ್ತಿದ್ದರು. ಎಲ್ಲಾ ಗಾಯಾಳುಗಳಿಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಹಾಯಕ ಇನ್ಸ್‌ಪೆಕ್ಟರ್ ಜನರಲ್ (ಕಾನೂನು ಮತ್ತು ಸುವ್ಯವಸ್ಥೆ) ಜ್ಯೋತಿಷ್ಮನ್ ದಾಸ್ ಚೌಧರಿ ತಿಳಿಸಿದ್ದಾರೆ.

Tripura Rath Yatra: ತ್ರಿಪುರಾ; ರಥೋತ್ಸವದ ವೇಳೆ ತಗುಲಿದ ಹೈಟೆನ್ಷನ್ ತಂತಿ, 7 ಮಂದಿ ಸಾವು
ತ್ರಿಪುರಾ; ರಥೋತ್ಸವದ ವೇಳೆ ತಗುಲಿದ ಹೈಟೆನ್ಷನ್ ತಂತಿ, 7 ಮಂದಿ ಸಾವು
ಗಣಪತಿ ಶರ್ಮಾ
|

Updated on: Jun 28, 2023 | 10:18 PM

Share

ಅಗರ್ತಲ: ತ್ರಿಪುರಾದ ಕುಮಾರ್‌ಘಾಟ್ ಪಟ್ಟಣದ (Kumarghat) ಉನಕೋಟಿಯಲ್ಲಿ ರಥೋತ್ಸವದ ವೇಳೆ ರಥಕ್ಕೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಭಗವಾನ್ ಜಗನ್ನಾಥನ ‘ಉಲ್ಟಾ ರಥ ಯಾತ್ರೆ’ (Rath Yatra) ಉತ್ಸವದ ಸಂದರ್ಭದಲ್ಲಿ, ಕುಮಾರ್‌ಘಾಟ್ ಪ್ರದೇಶದಲ್ಲಿ ಸಂಜೆ 4.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈಟೆನ್ಷನ್ ತಂತಿ ತಗುಲಿ ಅಪಘಾತ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಪ್ರಾಣಹಾನಿಗೆ ಸಂತಾಪ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರ ಅವರ ಜೊತೆ ನಿಂತಿದೆ ಎಂದು ಸಹಾ ಹೇಳಿದ್ದಾರೆ.

ಹೈಟೆನ್ಷನ್ ತಂತಿ ತಗುಲಿದಾಗ ಸಾವಿರಾರು ಜನರು ರಥವನ್ನು ಎಳೆಯುತ್ತಿದ್ದರು. ಎಲ್ಲಾ ಗಾಯಾಳುಗಳಿಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಹಾಯಕ ಇನ್ಸ್‌ಪೆಕ್ಟರ್ ಜನರಲ್ (ಕಾನೂನು ಮತ್ತು ಸುವ್ಯವಸ್ಥೆ) ಜ್ಯೋತಿಷ್ಮನ್ ದಾಸ್ ಚೌಧರಿ ತಿಳಿಸಿದ್ದಾರೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Chandrashekhar Azad: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಉತ್ತರ ಪ್ರದೇಶದ ಸಹರಾನ್​ಪುರದಲ್ಲಿ ಗುಂಡಿನ ದಾಳಿ

ಸುಟ್ಟಗಾಯಗಳಾಗಿರುವ ಇಬ್ಬರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದರ ನಂತರ, 10-12 ಜನರನ್ನು ಆಸ್ಪತ್ರೆಗೆ ಕರೆತರಲಾಯಿತು. ಆ ಪೈಕಿ ಇಬ್ಬರು ಮಕ್ಕಳು ಸೇರಿದಂತೆ 7 ಮಂದಿ ಮೃತಪಟ್ಟರು. 6-7 ಜನರಿಗೆ ಸುಟ್ಟ ಗಾಯಗಳಾಗಿವೆ. ಇನ್ನು ಆರು ಮಂದಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಮಾರ್‌ಘಾಟ್ ಉಪವಿಭಾಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ ಸಂಜಿತ್ ಚಕ್ಮಾ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More