AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tripura Rath Yatra: ತ್ರಿಪುರಾ; ರಥೋತ್ಸವದ ವೇಳೆ ತಗುಲಿದ ಹೈಟೆನ್ಷನ್ ತಂತಿ, 7 ಮಂದಿ ಸಾವು

ಹೈಟೆನ್ಷನ್ ತಂತಿ ತಗುಲಿದಾಗ ಸಾವಿರಾರು ಜನರು ರಥವನ್ನು ಎಳೆಯುತ್ತಿದ್ದರು. ಎಲ್ಲಾ ಗಾಯಾಳುಗಳಿಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಹಾಯಕ ಇನ್ಸ್‌ಪೆಕ್ಟರ್ ಜನರಲ್ (ಕಾನೂನು ಮತ್ತು ಸುವ್ಯವಸ್ಥೆ) ಜ್ಯೋತಿಷ್ಮನ್ ದಾಸ್ ಚೌಧರಿ ತಿಳಿಸಿದ್ದಾರೆ.

Tripura Rath Yatra: ತ್ರಿಪುರಾ; ರಥೋತ್ಸವದ ವೇಳೆ ತಗುಲಿದ ಹೈಟೆನ್ಷನ್ ತಂತಿ, 7 ಮಂದಿ ಸಾವು
ತ್ರಿಪುರಾ; ರಥೋತ್ಸವದ ವೇಳೆ ತಗುಲಿದ ಹೈಟೆನ್ಷನ್ ತಂತಿ, 7 ಮಂದಿ ಸಾವು
Ganapathi Sharma
|

Updated on: Jun 28, 2023 | 10:18 PM

Share

ಅಗರ್ತಲ: ತ್ರಿಪುರಾದ ಕುಮಾರ್‌ಘಾಟ್ ಪಟ್ಟಣದ (Kumarghat) ಉನಕೋಟಿಯಲ್ಲಿ ರಥೋತ್ಸವದ ವೇಳೆ ರಥಕ್ಕೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಭಗವಾನ್ ಜಗನ್ನಾಥನ ‘ಉಲ್ಟಾ ರಥ ಯಾತ್ರೆ’ (Rath Yatra) ಉತ್ಸವದ ಸಂದರ್ಭದಲ್ಲಿ, ಕುಮಾರ್‌ಘಾಟ್ ಪ್ರದೇಶದಲ್ಲಿ ಸಂಜೆ 4.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈಟೆನ್ಷನ್ ತಂತಿ ತಗುಲಿ ಅಪಘಾತ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಪ್ರಾಣಹಾನಿಗೆ ಸಂತಾಪ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರ ಅವರ ಜೊತೆ ನಿಂತಿದೆ ಎಂದು ಸಹಾ ಹೇಳಿದ್ದಾರೆ.

ಹೈಟೆನ್ಷನ್ ತಂತಿ ತಗುಲಿದಾಗ ಸಾವಿರಾರು ಜನರು ರಥವನ್ನು ಎಳೆಯುತ್ತಿದ್ದರು. ಎಲ್ಲಾ ಗಾಯಾಳುಗಳಿಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಹಾಯಕ ಇನ್ಸ್‌ಪೆಕ್ಟರ್ ಜನರಲ್ (ಕಾನೂನು ಮತ್ತು ಸುವ್ಯವಸ್ಥೆ) ಜ್ಯೋತಿಷ್ಮನ್ ದಾಸ್ ಚೌಧರಿ ತಿಳಿಸಿದ್ದಾರೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Chandrashekhar Azad: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಉತ್ತರ ಪ್ರದೇಶದ ಸಹರಾನ್​ಪುರದಲ್ಲಿ ಗುಂಡಿನ ದಾಳಿ

ಸುಟ್ಟಗಾಯಗಳಾಗಿರುವ ಇಬ್ಬರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದರ ನಂತರ, 10-12 ಜನರನ್ನು ಆಸ್ಪತ್ರೆಗೆ ಕರೆತರಲಾಯಿತು. ಆ ಪೈಕಿ ಇಬ್ಬರು ಮಕ್ಕಳು ಸೇರಿದಂತೆ 7 ಮಂದಿ ಮೃತಪಟ್ಟರು. 6-7 ಜನರಿಗೆ ಸುಟ್ಟ ಗಾಯಗಳಾಗಿವೆ. ಇನ್ನು ಆರು ಮಂದಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಮಾರ್‌ಘಾಟ್ ಉಪವಿಭಾಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ ಸಂಜಿತ್ ಚಕ್ಮಾ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು