AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiv Sena ಪಕ್ಷದ ಹೆಸರು, ಚಿಹ್ನೆ ಮುಟ್ಟುಗೋಲು: ಹೊಸ ಚಿಹ್ನೆ ಆಯ್ಕೆ ಮಾಡಿಕೊಂಡ ಠಾಕ್ರೆ

Shiv Sena ಪಕ್ಷದ ಹೆಸರು, ಚಿಹ್ನೆ ಮುಟ್ಟುಗೋಲು ಹಾಕಿದ್ದರಿಂದ ಉದ್ಧವ್ ಠಾಕ್ರೆ ಹೊಸ ಚಿಹ್ನೆ ಆಯ್ಕೆ ಮಾಡಿಕೊಂಡಿದ್ದಾರೆ.

Shiv Sena ಪಕ್ಷದ ಹೆಸರು, ಚಿಹ್ನೆ ಮುಟ್ಟುಗೋಲು: ಹೊಸ ಚಿಹ್ನೆ ಆಯ್ಕೆ ಮಾಡಿಕೊಂಡ ಠಾಕ್ರೆ
Uddhav Thackeray)
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Oct 09, 2022 | 6:42 PM

Share

ನವದೆಹಲಿ: ಶಿವಸೇನೆ ಚಿಹ್ನೆಗೆ ಕೇಂದ್ರ ಚುನಾವಣಾ ಆಯೋಗ ತಡೆ ಹಿಡಿದಿರುವುದಿರಂದ ಉದ್ಧವ್ ಠಾಕ್ರೆ (Uddhav Thackeray) ಬಣ ಹೊಸ ಚಿಹ್ನೆಯನ್ನು ಆಯ್ಕೆ ಮಾಡಿಕೊಂಡಿದೆ.

ತ್ರಿಶೂಲ, ಉದಯಿಸುವ ಸೂರ್ಯನ ಚಿಹ್ನೆ (Trishul, ‘Rising Sun) ಆಯ್ಕೆಮಾಡಿಕೊಂಡ ಉದ್ಧವ್ ಠಾಕ್ರೆ, ಅದನ್ನು ನೀಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಶಿವಸೇನೆ ಚಿಹ್ನೆಗೆ ತಡೆ; ಹೊಸ ಚಿಹ್ನೆ ಆಯ್ಕೆಗೆ ಕೇಂದ್ರ ಚುನಾವಣಾ ಆಯೋಗ ಸೂಚನೆ

ಉದ್ಧವ್ ಠಾಕ್ರೆ (Uddhav Thackeray) ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ (Eknath Shinde) ಬಣದ ನಡುವೆ ಬಿಲ್ಲು, ಬಾಣದ ಚಿಹ್ನೆಗಾಗಿ ದೊಡ್ಡ ಮಟ್ಟದಲ್ಲಿ ವಿವಾದವಾಗಿತ್ತು.

ಈ ಬಗ್ಗೆ ಚುನಾವಣಾ ಆಯೋಗಕ್ಕೆ ಎರಡೂ ಬಣಗಳು ಅರ್ಜಿ ಸಲ್ಲಿಸಿದ್ದವು. ಆದ್ರೆ, ಬಿಲ್ಲು, ಬಾಣ ಚಿಹ್ನೆಯನ್ನು ಇಬ್ಬರಿಗೂ ನೀಡದೇ ಅದಕ್ಕೆ ತಡೆ ನೀಡಿತ್ತು. ಅಲ್ಲದೇ ಹೊಸ ಚಿಹ್ನೆ ಆಯ್ಕೆ ಮಾಡುವಂತೆ ಏಕನಾಥ್ ಶಿಂಧೆ ಹಾಗೂ ಉದ್ಧವ್ ಠಾಕ್ರೆಗೆ ಸೂಚನೆ ನೀಡಿತ್ತು. ಅದರಂತೆ ಇದೀಗ ಉದ್ಧವ್ ಠಾಕ್ರೆ ತ್ರಿಶೂಲ, ಉದಯಿಸುವ ಸೂರ್ಯನ ಚಿಹ್ನೆ ಆಯ್ಕೆಮಾಡಿಕೊಂಡಿದ್ದಾರೆ.

ನವೆಂಬರ್‌ 3 ರಂದು ಅಂಧೇರಿ ಪೂರ್ವ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಅಲ್ಲಿ ದಿವಂಗತ ಶಾಸಕ ರಮೇಶ್‌ ಅವರ ಪತ್ನಿ ರುತುತಾ ಅವರನ್ನು ಕಣಕ್ಕೆ ಇಳಿಸಲು ಉದ್ಧವ್‌ ಬಣ ನಿರ್ಧರಿಸಿದೆ. ಹೀಗಾಗಿ ಉದ್ಧವ್‌ ಬಣಕ್ಕೆ ಚಿಹ್ನೆ ನೀಡುವುದನ್ನು ತಪ್ಪಿಸಲು ಆಯೋಗಕ್ಕೆ ಶಿಂಧೆ ಬಣ ಮನವಿ ಸಲ್ಲಿಸಿತ್ತು.

ಹೆಸರು, ಚಿಹ್ನೆಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವ ಚುನಾವಣಾ ಆಯೋಗ, ಶೀಘ್ರ ನಡೆಯಲಿರುವ ಪೂರ್ವ ಅಂಧೇರಿ (East Andheri) ಉಪಚುನಾವಣೆಯಲ್ಲಿ (By Election) ಇವರೆಡನ್ನೂ ಬಳಸುಂತಿಲ್ಲ ಎಂದು ಶಿಂಧೆ ಹಾಗೂ ಉದ್ಧವ್‌ ಬಣಕ್ಕೆ ಸೂಚಿಸಿತ್ತು.

Published On - 6:26 pm, Sun, 9 October 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್