AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiv Sena ಪಕ್ಷದ ಹೆಸರು, ಚಿಹ್ನೆ ಮುಟ್ಟುಗೋಲು: ಹೊಸ ಚಿಹ್ನೆ ಆಯ್ಕೆ ಮಾಡಿಕೊಂಡ ಠಾಕ್ರೆ

Shiv Sena ಪಕ್ಷದ ಹೆಸರು, ಚಿಹ್ನೆ ಮುಟ್ಟುಗೋಲು ಹಾಕಿದ್ದರಿಂದ ಉದ್ಧವ್ ಠಾಕ್ರೆ ಹೊಸ ಚಿಹ್ನೆ ಆಯ್ಕೆ ಮಾಡಿಕೊಂಡಿದ್ದಾರೆ.

Shiv Sena ಪಕ್ಷದ ಹೆಸರು, ಚಿಹ್ನೆ ಮುಟ್ಟುಗೋಲು: ಹೊಸ ಚಿಹ್ನೆ ಆಯ್ಕೆ ಮಾಡಿಕೊಂಡ ಠಾಕ್ರೆ
Uddhav Thackeray)
TV9 Web
| Edited By: |

Updated on:Oct 09, 2022 | 6:42 PM

Share

ನವದೆಹಲಿ: ಶಿವಸೇನೆ ಚಿಹ್ನೆಗೆ ಕೇಂದ್ರ ಚುನಾವಣಾ ಆಯೋಗ ತಡೆ ಹಿಡಿದಿರುವುದಿರಂದ ಉದ್ಧವ್ ಠಾಕ್ರೆ (Uddhav Thackeray) ಬಣ ಹೊಸ ಚಿಹ್ನೆಯನ್ನು ಆಯ್ಕೆ ಮಾಡಿಕೊಂಡಿದೆ.

ತ್ರಿಶೂಲ, ಉದಯಿಸುವ ಸೂರ್ಯನ ಚಿಹ್ನೆ (Trishul, ‘Rising Sun) ಆಯ್ಕೆಮಾಡಿಕೊಂಡ ಉದ್ಧವ್ ಠಾಕ್ರೆ, ಅದನ್ನು ನೀಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಶಿವಸೇನೆ ಚಿಹ್ನೆಗೆ ತಡೆ; ಹೊಸ ಚಿಹ್ನೆ ಆಯ್ಕೆಗೆ ಕೇಂದ್ರ ಚುನಾವಣಾ ಆಯೋಗ ಸೂಚನೆ

ಉದ್ಧವ್ ಠಾಕ್ರೆ (Uddhav Thackeray) ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ (Eknath Shinde) ಬಣದ ನಡುವೆ ಬಿಲ್ಲು, ಬಾಣದ ಚಿಹ್ನೆಗಾಗಿ ದೊಡ್ಡ ಮಟ್ಟದಲ್ಲಿ ವಿವಾದವಾಗಿತ್ತು.

ಈ ಬಗ್ಗೆ ಚುನಾವಣಾ ಆಯೋಗಕ್ಕೆ ಎರಡೂ ಬಣಗಳು ಅರ್ಜಿ ಸಲ್ಲಿಸಿದ್ದವು. ಆದ್ರೆ, ಬಿಲ್ಲು, ಬಾಣ ಚಿಹ್ನೆಯನ್ನು ಇಬ್ಬರಿಗೂ ನೀಡದೇ ಅದಕ್ಕೆ ತಡೆ ನೀಡಿತ್ತು. ಅಲ್ಲದೇ ಹೊಸ ಚಿಹ್ನೆ ಆಯ್ಕೆ ಮಾಡುವಂತೆ ಏಕನಾಥ್ ಶಿಂಧೆ ಹಾಗೂ ಉದ್ಧವ್ ಠಾಕ್ರೆಗೆ ಸೂಚನೆ ನೀಡಿತ್ತು. ಅದರಂತೆ ಇದೀಗ ಉದ್ಧವ್ ಠಾಕ್ರೆ ತ್ರಿಶೂಲ, ಉದಯಿಸುವ ಸೂರ್ಯನ ಚಿಹ್ನೆ ಆಯ್ಕೆಮಾಡಿಕೊಂಡಿದ್ದಾರೆ.

ನವೆಂಬರ್‌ 3 ರಂದು ಅಂಧೇರಿ ಪೂರ್ವ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಅಲ್ಲಿ ದಿವಂಗತ ಶಾಸಕ ರಮೇಶ್‌ ಅವರ ಪತ್ನಿ ರುತುತಾ ಅವರನ್ನು ಕಣಕ್ಕೆ ಇಳಿಸಲು ಉದ್ಧವ್‌ ಬಣ ನಿರ್ಧರಿಸಿದೆ. ಹೀಗಾಗಿ ಉದ್ಧವ್‌ ಬಣಕ್ಕೆ ಚಿಹ್ನೆ ನೀಡುವುದನ್ನು ತಪ್ಪಿಸಲು ಆಯೋಗಕ್ಕೆ ಶಿಂಧೆ ಬಣ ಮನವಿ ಸಲ್ಲಿಸಿತ್ತು.

ಹೆಸರು, ಚಿಹ್ನೆಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವ ಚುನಾವಣಾ ಆಯೋಗ, ಶೀಘ್ರ ನಡೆಯಲಿರುವ ಪೂರ್ವ ಅಂಧೇರಿ (East Andheri) ಉಪಚುನಾವಣೆಯಲ್ಲಿ (By Election) ಇವರೆಡನ್ನೂ ಬಳಸುಂತಿಲ್ಲ ಎಂದು ಶಿಂಧೆ ಹಾಗೂ ಉದ್ಧವ್‌ ಬಣಕ್ಕೆ ಸೂಚಿಸಿತ್ತು.

Published On - 6:26 pm, Sun, 9 October 22

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್