AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಪ್ರದೇಶ ಹೆದ್ದಾರಿಯಲ್ಲಿ ವಾಹನ ಅಪಘಾತ; ಟ್ರಕ್​​ನಲ್ಲಿದ್ದ ಕೋಳಿಗಳನ್ನು ಹೊತ್ತೊಯ್ದ ಜನರು

ವಾಹನವೊಂದು ಮಾಂಸ ಉತ್ಪಾದನೆಗಾಗಿ ಸಾಕಣೆ ಮಾಡಲಾಗಿದ್ದ ಬ್ರಾಯ್ಲರ್ ಕೋಳಿಯನ್ನು ಸಾಗಿಸುತ್ತಿತ್ತು ಈ ವಾಹನವೂ ಸಿಲುಕಿರುವುದನ್ನು ನೋಡಿದ ಜನರು ಟ್ರಕ್ ನಿಂದ ಕೋಳಿಗಳನ್ನು ಹೊರತೆಗೆದು ಮನೆಗಳಿಗೆ ಒಯ್ದಿದ್ದಾರೆ. ಅವರಲ್ಲಿ ಕೆಲವರು ಚೀಲಗಳೊಂದಿಗೆ ಬಂದರು.ಕೆಲವರು ನಡೆದುಕೊಂಡು ಹೋಗಿದ್ದರೆ ಇನ್ನು ಕೆಲವರು ವಾಹನಗಳಲ್ಲಿ ಬಂದು ಹೊತ್ತೊಯ್ದರು

ಉತ್ತರಪ್ರದೇಶ ಹೆದ್ದಾರಿಯಲ್ಲಿ ವಾಹನ ಅಪಘಾತ; ಟ್ರಕ್​​ನಲ್ಲಿದ್ದ ಕೋಳಿಗಳನ್ನು ಹೊತ್ತೊಯ್ದ ಜನರು
ಚಿಕನ್ ಲೂಟಿ ಮಾಡುತ್ತಿರುವ ಜನರು
Follow us
ರಶ್ಮಿ ಕಲ್ಲಕಟ್ಟ
|

Updated on: Dec 27, 2023 | 7:10 PM

ಆಗ್ರಾ ಡಿಸೆಂಬರ್ 27: ಪ್ರತಿ ಸಂಕಷ್ಟದಲ್ಲೂ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವ ಭಾರತೀಯರ ಸಾಮರ್ಥ್ಯ ಇಂದು ಉತ್ತರ ಪ್ರದೇಶದ (Uttar Pradesh) ಆಗ್ರಾದಲ್ಲಿ  (Agra) ಪ್ರದರ್ಶನಗೊಂಡಿದೆ. ದಟ್ಟ ಮಂಜು ಕವಿದಿದ್ದರಿಂದ ಕಾರುಗಳು ಪರಸ್ಪರ ಗುದ್ದಿ ಅಪಘಾತ (Accident) ಸಂಭವಿಸಿದೆ. ಹೀಗೆ ವಾಹನಗಳು ಒಂದಕ್ಕೊಂದು ಢಿಕ್ಕಿ ಹೊಡೆದಿದ್ದರಲ್ಲಿ ಟ್ರಕ್ ಕೂಡಾ ಇದ್ದು ಇದರಲ್ಲಿ ಕೋಳಿ ಸಾಗಿಸಲಾಗುತ್ತಿತ್ತು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಕನಿಷ್ಠ ಹನ್ನೆರಡು ವಾಹನಗಳಿಗೆ ಹಾನಿಯಾಗಿದೆ ಎಂದು ವರದಿಗಳು ತಿಳಿಸಿವೆ. ವರದಿಗಳ ಪ್ರಕಾರ, ಅಪಘಾತದಲ್ಲಿ ಒಬ್ಬರು ಸಾವಿಗೀಡಾಗಿದ್ದು ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಕ್ರೇನ್ ಕರೆಸಿ ಹಾನಿಗೊಳಗಾದ ವಾಹನಗಳನ್ನು ತೆಗೆದು ರಸ್ತೆಯನ್ನು ತೆರವುಗೊಳಿಸಲಾಗಿದೆ.

ದಟ್ಟವಾದ ಮಂಜಿನಿಂದಾಗಿ ಉಂಟಾದ ಅಪಘಾತದಲ್ಲಿ ಟ್ರಕ್‌ಗಳು ಸೇರಿದಂತೆ ಕನಿಷ್ಠ ಮೂರು ವಾಹನಗಳು ಹಾನಿಗೊಳಗಾಗಿವೆ.

ವಾಹನವೊಂದು ಮಾಂಸ ಉತ್ಪಾದನೆಗಾಗಿ ಸಾಕಣೆ ಮಾಡಲಾಗಿದ್ದ ಬ್ರಾಯ್ಲರ್ ಕೋಳಿಯನ್ನು ಸಾಗಿಸುತ್ತಿತ್ತು ಈ ವಾಹನವೂ ಸಿಲುಕಿರುವುದನ್ನು ನೋಡಿದ ಜನರು ಟ್ರಕ್ ನಿಂದ ಕೋಳಿಗಳನ್ನು ಹೊರತೆಗೆದು ಮನೆಗಳಿಗೆ ಒಯ್ದಿದ್ದಾರೆ. ಅವರಲ್ಲಿ ಕೆಲವರು ಚೀಲಗಳೊಂದಿಗೆ ಬಂದರು.ಕೆಲವರು ನಡೆದುಕೊಂಡು ಹೋಗಿದ್ದರೆ ಇನ್ನು ಕೆಲವರು ವಾಹನಗಳಲ್ಲಿ ಬಂದು ಹೊತ್ತೊಯ್ದರು. ಲಾರಿಯಲ್ಲಿ ಸುಮಾರು 500 ಕೋಳಿಗಳಿದ್ದು, ಸುಮಾರು ₹ 1.5 ಲಕ್ಷ ಬೆಲೆ ಬಾಳುತ್ತಿತ್ತು.

ಇದನ್ನೂ ಓದಿ: ದಟ್ಟ ಮಂಜು: ಯಮುನಾ ಎಕ್ಸ್​ಪ್ರೆಸ್​ವೇನಲ್ಲಿ 20 ವಾಹನಗಳ ನಡುವೆ ಸರಣಿ ಅಪಘಾತ

ಉತ್ತರ ಭಾರತದಲ್ಲಿ ಚಳಿ ಹೆಚ್ಚಾಗಿದ್ದು ಮಂಜು ಆವರಿಸಿದ್ದರಿಂದ ಜನರು ಪರದಾಡುವಂತಾಗಿದೆ. ದೆಹಲಿ, ಪಂಜಾಬ್​ನಲ್ಲಿ ದಟ್ಟ ಮಂಜು ಆವರಿಸಿಕೊಂಡಿದ್ದು, 110 ದೇಶಿಯ ಹಾಗೂ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ವಿಳಂಬವಾಗಿದೆ.

ರೈಲು, ವಾಹನ ಸಂಚಾರಕ್ಕೂ ಮಂಜು ಅಡ್ಡಿಯಾಗಿದೆ. 8 ಗಂಟೆಗೆ 40ಕ್ಕೂ ಹೆಚ್ಚು ವಿಮಾನಗಳು ದಟ್ಟವಾದ ಮಂಜಿನಿಂದಾಗಿ ಹಾರಾಟ ವಿಳಂಬ ಕಂಡಿವೆ. ದೆಹಲಿಯಲ್ಲಿ ತೀವ್ರ ಮಂಜಿನಿಂದಾಗಿ ಗಾಳಿಯ ಗುಣಮಟ್ಟ ತೀವ್ರ ಕಳಪೆ ವಿಭಾದಲ್ಲೇ ಉಳಿದಿದೆ. ಗಾಳಿಯ ಗುಣಮಟ್ಟ ಮಾಪಕದ 500ರಷ್ಟಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್