AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಪ್ರದೇಶ ಹೆದ್ದಾರಿಯಲ್ಲಿ ವಾಹನ ಅಪಘಾತ; ಟ್ರಕ್​​ನಲ್ಲಿದ್ದ ಕೋಳಿಗಳನ್ನು ಹೊತ್ತೊಯ್ದ ಜನರು

ವಾಹನವೊಂದು ಮಾಂಸ ಉತ್ಪಾದನೆಗಾಗಿ ಸಾಕಣೆ ಮಾಡಲಾಗಿದ್ದ ಬ್ರಾಯ್ಲರ್ ಕೋಳಿಯನ್ನು ಸಾಗಿಸುತ್ತಿತ್ತು ಈ ವಾಹನವೂ ಸಿಲುಕಿರುವುದನ್ನು ನೋಡಿದ ಜನರು ಟ್ರಕ್ ನಿಂದ ಕೋಳಿಗಳನ್ನು ಹೊರತೆಗೆದು ಮನೆಗಳಿಗೆ ಒಯ್ದಿದ್ದಾರೆ. ಅವರಲ್ಲಿ ಕೆಲವರು ಚೀಲಗಳೊಂದಿಗೆ ಬಂದರು.ಕೆಲವರು ನಡೆದುಕೊಂಡು ಹೋಗಿದ್ದರೆ ಇನ್ನು ಕೆಲವರು ವಾಹನಗಳಲ್ಲಿ ಬಂದು ಹೊತ್ತೊಯ್ದರು

ಉತ್ತರಪ್ರದೇಶ ಹೆದ್ದಾರಿಯಲ್ಲಿ ವಾಹನ ಅಪಘಾತ; ಟ್ರಕ್​​ನಲ್ಲಿದ್ದ ಕೋಳಿಗಳನ್ನು ಹೊತ್ತೊಯ್ದ ಜನರು
ಚಿಕನ್ ಲೂಟಿ ಮಾಡುತ್ತಿರುವ ಜನರು
ರಶ್ಮಿ ಕಲ್ಲಕಟ್ಟ
|

Updated on: Dec 27, 2023 | 7:10 PM

Share

ಆಗ್ರಾ ಡಿಸೆಂಬರ್ 27: ಪ್ರತಿ ಸಂಕಷ್ಟದಲ್ಲೂ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವ ಭಾರತೀಯರ ಸಾಮರ್ಥ್ಯ ಇಂದು ಉತ್ತರ ಪ್ರದೇಶದ (Uttar Pradesh) ಆಗ್ರಾದಲ್ಲಿ  (Agra) ಪ್ರದರ್ಶನಗೊಂಡಿದೆ. ದಟ್ಟ ಮಂಜು ಕವಿದಿದ್ದರಿಂದ ಕಾರುಗಳು ಪರಸ್ಪರ ಗುದ್ದಿ ಅಪಘಾತ (Accident) ಸಂಭವಿಸಿದೆ. ಹೀಗೆ ವಾಹನಗಳು ಒಂದಕ್ಕೊಂದು ಢಿಕ್ಕಿ ಹೊಡೆದಿದ್ದರಲ್ಲಿ ಟ್ರಕ್ ಕೂಡಾ ಇದ್ದು ಇದರಲ್ಲಿ ಕೋಳಿ ಸಾಗಿಸಲಾಗುತ್ತಿತ್ತು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಕನಿಷ್ಠ ಹನ್ನೆರಡು ವಾಹನಗಳಿಗೆ ಹಾನಿಯಾಗಿದೆ ಎಂದು ವರದಿಗಳು ತಿಳಿಸಿವೆ. ವರದಿಗಳ ಪ್ರಕಾರ, ಅಪಘಾತದಲ್ಲಿ ಒಬ್ಬರು ಸಾವಿಗೀಡಾಗಿದ್ದು ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಕ್ರೇನ್ ಕರೆಸಿ ಹಾನಿಗೊಳಗಾದ ವಾಹನಗಳನ್ನು ತೆಗೆದು ರಸ್ತೆಯನ್ನು ತೆರವುಗೊಳಿಸಲಾಗಿದೆ.

ದಟ್ಟವಾದ ಮಂಜಿನಿಂದಾಗಿ ಉಂಟಾದ ಅಪಘಾತದಲ್ಲಿ ಟ್ರಕ್‌ಗಳು ಸೇರಿದಂತೆ ಕನಿಷ್ಠ ಮೂರು ವಾಹನಗಳು ಹಾನಿಗೊಳಗಾಗಿವೆ.

ವಾಹನವೊಂದು ಮಾಂಸ ಉತ್ಪಾದನೆಗಾಗಿ ಸಾಕಣೆ ಮಾಡಲಾಗಿದ್ದ ಬ್ರಾಯ್ಲರ್ ಕೋಳಿಯನ್ನು ಸಾಗಿಸುತ್ತಿತ್ತು ಈ ವಾಹನವೂ ಸಿಲುಕಿರುವುದನ್ನು ನೋಡಿದ ಜನರು ಟ್ರಕ್ ನಿಂದ ಕೋಳಿಗಳನ್ನು ಹೊರತೆಗೆದು ಮನೆಗಳಿಗೆ ಒಯ್ದಿದ್ದಾರೆ. ಅವರಲ್ಲಿ ಕೆಲವರು ಚೀಲಗಳೊಂದಿಗೆ ಬಂದರು.ಕೆಲವರು ನಡೆದುಕೊಂಡು ಹೋಗಿದ್ದರೆ ಇನ್ನು ಕೆಲವರು ವಾಹನಗಳಲ್ಲಿ ಬಂದು ಹೊತ್ತೊಯ್ದರು. ಲಾರಿಯಲ್ಲಿ ಸುಮಾರು 500 ಕೋಳಿಗಳಿದ್ದು, ಸುಮಾರು ₹ 1.5 ಲಕ್ಷ ಬೆಲೆ ಬಾಳುತ್ತಿತ್ತು.

ಇದನ್ನೂ ಓದಿ: ದಟ್ಟ ಮಂಜು: ಯಮುನಾ ಎಕ್ಸ್​ಪ್ರೆಸ್​ವೇನಲ್ಲಿ 20 ವಾಹನಗಳ ನಡುವೆ ಸರಣಿ ಅಪಘಾತ

ಉತ್ತರ ಭಾರತದಲ್ಲಿ ಚಳಿ ಹೆಚ್ಚಾಗಿದ್ದು ಮಂಜು ಆವರಿಸಿದ್ದರಿಂದ ಜನರು ಪರದಾಡುವಂತಾಗಿದೆ. ದೆಹಲಿ, ಪಂಜಾಬ್​ನಲ್ಲಿ ದಟ್ಟ ಮಂಜು ಆವರಿಸಿಕೊಂಡಿದ್ದು, 110 ದೇಶಿಯ ಹಾಗೂ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ವಿಳಂಬವಾಗಿದೆ.

ರೈಲು, ವಾಹನ ಸಂಚಾರಕ್ಕೂ ಮಂಜು ಅಡ್ಡಿಯಾಗಿದೆ. 8 ಗಂಟೆಗೆ 40ಕ್ಕೂ ಹೆಚ್ಚು ವಿಮಾನಗಳು ದಟ್ಟವಾದ ಮಂಜಿನಿಂದಾಗಿ ಹಾರಾಟ ವಿಳಂಬ ಕಂಡಿವೆ. ದೆಹಲಿಯಲ್ಲಿ ತೀವ್ರ ಮಂಜಿನಿಂದಾಗಿ ಗಾಳಿಯ ಗುಣಮಟ್ಟ ತೀವ್ರ ಕಳಪೆ ವಿಭಾದಲ್ಲೇ ಉಳಿದಿದೆ. ಗಾಳಿಯ ಗುಣಮಟ್ಟ ಮಾಪಕದ 500ರಷ್ಟಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ