AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಳು ತುಂಬಿದ್ದ ಲಾರಿ ರಸ್ತೆ ಬದಿಯ ಗುಡಿಸಲಿನ ಮೇಲೆ ಪಲ್ಟಿಯಾಗಿ ಒಂದೇ ಕುಟುಂಬದ 8 ಮಂದಿ ಸಾವು

ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಮರಳು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ ಎಂಟು ಮಂದಿ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಟ್ರಕ್ ಪಲ್ಟಿಯಾದ ನಂತರ ಚೆಲ್ಲಿದ ಮರಳಿನ ಅಡಿಯಲ್ಲಿ ರಸ್ತೆಬದಿಯಲ್ಲಿ ವಾಸಿಸುತ್ತಿದ್ದ ಇಡೀ ಕುಟುಂಬವು ಹೂತುಹೋಗಿತ್ತು.

ಮರಳು ತುಂಬಿದ್ದ ಲಾರಿ ರಸ್ತೆ ಬದಿಯ ಗುಡಿಸಲಿನ ಮೇಲೆ ಪಲ್ಟಿಯಾಗಿ ಒಂದೇ ಕುಟುಂಬದ 8 ಮಂದಿ ಸಾವು
ಟ್ರಕ್ ಪಲ್ಟಿ
ನಯನಾ ರಾಜೀವ್
|

Updated on: Jun 12, 2024 | 8:28 AM

Share

ಮರಳು ತುಂಬಿದ್ದ ಲಾರಿಯೊಂದು ರಸ್ತೆ ಬದಿಯ ಗುಡಿಸಲಿನ ಮೇಲೆ ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಹರ್ದೋಯ್ ಜಿಲ್ಲೆಯ ಮಲ್ಲವನ್ ಕೊಟ್ವಾಲಿ ಪ್ರದೇಶದ ಉನ್ನಾವೋ ರಸ್ತೆಯಲ್ಲಿ ನಡೆದಿದೆ. ಗುಡಿಸಲಿನಲ್ಲಿ ಮಲಗಿದ್ದ ನಾಲ್ವರು ಅಮಾಯಕ ಮಕ್ಕಳು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ದಂಪತಿ, ಅವರ ನಾಲ್ವರು ಮಕ್ಕಳು ಮತ್ತು ಅಳಿಯ ಸೇರಿದ್ದಾರೆ. ಬಾಲಕಿಯೂ ಗಾಯಗೊಂಡಿದ್ದಾರೆ.

ಮಲ್ಲವನ್ ಪಟ್ಟಣದ ಉನ್ನಾವ್ ರಸ್ತೆಯಲ್ಲಿರುವ ಚುಂಗಿ ನಂಬರ್ 2 ಬಳಿ ನಾಟ್ ಸಮುದಾಯದ ಜನರು ರಸ್ತೆ ಬದಿಯ ಗುಡಿಸಲುಗಳಲ್ಲಿ ವಾಸಿಸುತ್ತಿದ್ದಾರೆ. ಮಂಗಳವಾರ ಮಧ್ಯರಾತ್ರಿ ಕಾನ್ಪುರದಿಂದ ಹರ್ದೋಯ್‌ಗೆ ಹೋಗುತ್ತಿದ್ದ ಮರಳು ತುಂಬಿದ ಟ್ರಕ್ ನಿಯಂತ್ರಣ ತಪ್ಪಿ ಅವಧೇಶ್ ಅಲಿಯಾಸ್ ಬಲ್ಲಾಳನ ರಸ್ತೆ ಬದಿಯ ಗುಡಿಸಲು ಮೇಲೆ ಪಲ್ಟಿಯಾಗಿದೆ.

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳೀಯರು ಹಾಗೂ ಜೆಸಿಬಿ ಸಹಾಯದಿಂದ ಲಾರಿಯನ್ನು ನೇರಗೊಳಿಸಿ ಮರಳು ತೆಗೆದರೂ ಅಲ್ಲಿಯವರೆಗೆ ಅವಧೇಶ್ ಅಲಿಯಾಸ್ ಬಲ್ಲ (45), ಅವರ ಪತ್ನಿ ಸುಧಾ ಅಲಿಯಾಸ್ ಮುಂಡಿ (42), ಪುತ್ರಿ ಸುನೈನಾ (11) , ಲಲ್ಲಾ (5), ಬುದ್ಧು (4), ಹೀರೋ (22), ಆಕೆಯ ಪತಿ ಕರಣ್ (25), ಬಿಲ್ಗ್ರಾಮ್ ಕೊತ್ವಾಲಿ ಪ್ರದೇಶದ ಕಾಸುಪೇಟೆ ನಿವಾಸಿ, ಆಕೆಯ ಮಗಳು ಕೋಮಲ್ ಅಲಿಯಾಸ್ ಬಿಹಾರಿ (5) ಮೃತಪಟ್ಟಿದ್ದರು.

ಮತ್ತಷ್ಟು ಓದಿ: ಟೋಲ್​ನಲ್ಲಿ ಸಿಬ್ಬಂದಿ ಹಣ ಕೇಳಿದ್ದಕ್ಕೆ ಟೋಲ್​ ಬೂತ್​ ನೆಲಸಮ ಮಾಡಿದ ಜೆಸಿಬಿ ಚಾಲಕ

ಟ್ರಕ್ ಚಾಲಕ ಅವಧೇಶ್, ಬಿಲ್ಗ್ರಾಮ್ ಕೊಟ್ವಾಲಿ ಪ್ರದೇಶದ ಛಿಬ್ರಾಮೌ ನಿವಾಸಿ ಮತ್ತು ಹೆಲ್ಪರ್ ಸಿಟಿ ಕೊಟ್ವಾಲಿ ಪ್ರದೇಶದ ಅನಂಗ್ ಬೆಹ್ತಾ ನಿವಾಸಿ ರೋಹಿತ್ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು